ಕಥುವಾದಲ್ಲಿ ಅತ್ಯಾಚಾರ ಹತ್ಯೆ ಪ್ರಕರಣ: ಆರೋಪಿಗಳಿಗೆ ಶಿಕ್ಷೆಗೆ ಆಗ್ರಹ


Team Udayavani, Apr 21, 2018, 12:42 PM IST

21-April-7.jpg

ಸುರತ್ಕಲ್‌ : ಜಮ್ಮುವಿನ ಕಥುವಾದಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆ ಗೀಡಾದ ಹಾಗೂ ಉತ್ತರ ಪ್ರದೇಶದ
ಉನಾವ ಪ್ರಾಂತ್ಯದಲ್ಲಿ ನಡೆದ ಅತ್ಯಾಚಾರ ಆರೋಪಿಗಳಿಗೆ ಕಠಿನ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ ಕಾರ್ಯಕರ್ತರು ಸುರತ್ಕಲ್‌ನಲ್ಲಿ ಪ್ರತಿಭಟನೆ ಹಾಗೂ ಶೋಕಾಚರಣೆ ನಡೆಸಿದರು.

ಸಾಮಾಜಿಕ ಕಾರ್ಯಕರ್ತ ಎಂ.ಜಿ. ಹೆಗಡೆ ಮಾತನಾಡಿ, ಈ ಬರ್ಬರ ಕೃತ್ಯದಿಂದ ಭಾರತಕ್ಕೆ ಕಳಂಕ ತಂದಿದ್ದರೂ ಇಂತಹ ಘಟನೆಗಳಾದಾಗ ಪಕ್ಷ , ಜಾತಿ ಜತೆ ಸೇರಿಸಿ ಪ್ರತಿಭಟನೆ ಮಾಡುವುದು ತಪ್ಪು. ಅವುಗಳ ವಿರುದ್ಧ ರಾಜಕೀಯ, ಜಾತಿ ರಹಿತ ಪ್ರತಿಭಟನೆ ಆದಾಗ ಮಾತ್ರ ಹೋರಾಟಗಳಿಗೆ ಅರ್ಥ ಬರುತ್ತದೆ. ಆರೋಪಿಗಳು ಯಾವುದೇ ಸಮಾಜದವರಿರಲಿ ಕಠಿನ ಶಿಕ್ಷೆಯಾಗುವಂತೆ ಆಗಬೇಕು ಎಂದರು.

ಒಗ್ಗಟ್ಟಾಗಿ ಪ್ರತಿಭಟಿಸಿ
ಸಾಮಾಜಿಕ ಹೋರಾಟಗಾರ್ತಿ ನಂದಾ ಬಾಯಿ ಮಾತನಾಡಿ, ಮಹಿಳೆಯರು ಇಂತಹ ದೌರ್ಜನ್ಯಗಳಾದಾಗ ಒಗ್ಗಟ್ಟಾಗಿ ಪ್ರತಿಭಟಿಸಿ ಸರಕಾರಕ್ಕೆ ಒತ್ತಡ ಹಾಕಬೇಕು. ಮಹಿಳೆಯ ಸಬಲೀಕರಣಕ್ಕೆ ಮಹಿಳೆಯರು ಎಚ್ಚೆತ್ತು ಸಂಘಟನೆ ಮೂಲಕ ಶಕ್ತಿ ಪ್ರದರ್ಶಿಸ ಬೇಕು ಮಾತ್ರವಲ್ಲ ಮಹಿಳೆಯರ ಹಕ್ಕೊತ್ತಾಯಗಳನ್ನು ಸರಕಾರ ಪೂರೈಸುವಷ್ಟು ಪ್ರಬಲತೆಯನ್ನು ಪಡೆಯಬೇಕು. ಕೊಲೆ ಕೃತ್ಯ ನಡೆಸಿದ ಆರೋಪಿಗಳಿಗೆ ಶಿಕ್ಷೆಯಾಗುವ ಮೂಲಕ ಬೇರೆ ಯಾರೂ ಇಂತಹ ಕೃತ್ಯಕ್ಕೆ ಇಳಿದಂತೆ ಮಾಡಬೇಕಾಗಿದೆ ಎಂದರು.

ಶೋಕಾಚರಣೆ
ಪ್ರತಿಭಟನೆ ಬಳಿಕ ಕ್ಯಾಂಡಲ್‌ ಉರಿಸಿ ಶೋಕಾಚರಣೆ ನಡೆಸಲಾಯಿತು. ಹಂಗಾಮಿ ಅಧ್ಯಕ್ಷ ದೀಪಕ್‌ ಪೂಜಾರಿ,
ಮಹಮ್ಮದ್‌, ಸದಾಶಿವ ಶೆಟ್ಟಿ, ರಾಜೇಶ್‌ ಕುಳಾಯಿ, ಪ್ರತಿಭಾ ಕುಳಾಯಿ, ಆನಂದ ಅಮೀನ್‌, ಬಶೀರ್‌ ಬೈಕಂಪಾಡಿ, ಬಶೀರ್‌ ಅಹ್ಮದ್‌, ಹರೀಶ್‌ ಸುರತ್ಕಲ್‌, ವೈ. ರಾಘವೇಂದ್ರ ರಾವ್‌, ಹುಸೈನ್‌ ಕಾಟಿಪಳ್ಳ, ಗೋವರ್ಧನ ಶೆಟ್ಟಿಗಾರ್‌, ಮಮ್ತಾಜ್‌ ಆಲಿ, ಸಂತೋಷ್‌ ಶೆಟ್ಟಿ, ಮಲ್ಲಿಕಾರ್ಜುನ್‌, ಹಂಝ, ರೆಹಮಾನ್‌ ಖಾನ್‌ ಕುಂಜತ್ತಬೈಲ್‌ ಮೊದಲಾದವರಿದ್ದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.