‘ಕೌಟುಂಬಿಕ ವಲಯದಲ್ಲಿ ಹೆಣ್ಣಿನ ಪಾತ್ರ ಅಮೂಲ್ಯ’


Team Udayavani, May 10, 2018, 12:42 PM IST

10-May-12.jpg

ಮಹಾನಗರ: ಕೌಟುಂಬಿಕ ವಲಯದಲ್ಲಿರುವ ವ್ಯಕ್ತಿಗಳಿಗೆ ಹೆಣ್ಣು ತಾಯಿಯಾಗಿ, ತಂಗಿಯಾಗಿ, ಅಕ್ಕನಾಗಿ, ಹೆಂಡತಿಯಾಗಿ, ನಾದಿನಿಯಾಗಿ, ಅತ್ತಿಗೆಯಾಗಿ, ಅತ್ತೆಯಾಗಿ, ಗೆಳತಿಯಾಗಿ, ಪ್ರೇಮಿಯಾಗಿ ಆಕೆ ನಿರ್ವಹಿಸುವ ಪಾತ್ರಗಳು ಅದ್ಭುತ ಹಾಗೂ ವರ್ಣನಾತೀತ ಎಂದು ಸಾಹಿತಿ ಶಹನಾಝ್ಎಂ. ಪಾಂಡೇಶ್ವರ್‌ ಅವರು ಹೇಳಿದರು.

ಉರ್ವಸ್ಟೋರ್‌ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಜರಗಿದ ‘ಸಂತೃಪ್ತ ಮಹಿಳೆ ‘ ಎಂಬ ವಿಚಾರದ ಕುರಿತ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹೆಣ್ಣು, ಗಂಡು ಇಬ್ಬರೂ ಬದುಕಿನ ಬಂಡಿಯ ಎರಡು ಚಕ್ರಗಳಿದ್ದಂತೆ. ಇಂದಿನ ದಿನಗಳಲ್ಲಿ ಮಹಿಳೆ ಎಲ್ಲ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದರೂ ಆಕೆಯ ಮೇಲಿನ ದೌರ್ಜನ್ಯ ಕಡಿಮೆಯಾಗಿಲ್ಲ. ಸ್ತ್ರೀ ನಾಲ್ಕು ಗೋಡೆಗಳ ನಡುವೆ ಕಾಲಕಳೆಯುವ ಕಾಲವೀಗ ಕಣ್ಮರೆಯಾಗಿ, ಪುರುಷ ಪ್ರಧಾನ ಸಮಾಜದಲ್ಲಿ ಪುರುಷರಷ್ಟೇ ಶ್ರೀಮಂತಿಕೆಯಿಂದ ಬದುಕಲು ಸಾಧ್ಯವಿದೆಯೆಂದು ಹಲವಾರು ರೀತಿಯ ಸಾಧನೆಗಳನ್ನು ಮಾಡುವುದರ ಮೂಲಕ ತೋರಿಸಿಕೊಟ್ಟಿದ್ದಾಳೆ. ಎಲ್ಲ ಕ್ಷೇತ್ರದಲ್ಲೂ ಮುನ್ನಡೆಯುತ್ತಾ ಜಗತ್ತಿನ ದೃಷ್ಟಿಯನ್ನು ತನ್ನೆಡೆ ಸೆಳೆದಿದ್ದಾಳೆ ಎಂದರು.

ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಯಶವಂತ್‌ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ರಶ್ಮಿ ಸಿ. ಕರ್ಕೇರ ಅಧ್ಯಕ್ಷತೆ ವಹಿಸಿದ್ದರು.

 ಮಾಜಿ ಅಧ್ಯಕ್ಷರಾದ ವಿದ್ಯಾ ರಾಕೇಶ್‌ ಪ್ರಾಸ್ತಾವಿಕ ಮಾತುಗಳ ಮೂಲಕ ಸ್ವಾಗತಿಸಿದರು. ಕಾರ್ಯದರ್ಶಿ ರವಿ ಕಲಾ ವಂದಿಸಿದರು. ಉಪಾಧ್ಯಕ್ಷೆ ಉಮಾಶ್ರೀಕಾಂತ್‌ ನಿರೂಪಿಸಿದರು.

ಗೌರವಕ್ಕೆ ಪಾತ್ರ
ಪ್ರತಿಭೆ, ಕಲೆ, ಕ್ರೀಡೆ, ಸಾಹಿತ್ಯ, ಸಾಹಸ ಪ್ರವೃತ್ತಿಯಂತಹ ಸಾಧನೆಯಲ್ಲಿ ತೊಡಗಿ ವಿಶ್ವದ ಗೌರವಕ್ಕೆ ಪಾತ್ರಳಾಗಿದ್ದಾಳೆ. ತನ್ನ ಉತ್ತಮ ಗುಣ, ನಡತೆಗಳಿಂದ ಸರ್ವಸಂಪನ್ನಳೆನಿಸಿ ಪೂಜನೀಯಳ ಆಗಿದ್ದಾಳೆ. ಆದರೆ ಇಂದು ಸ್ತ್ರೀ ತನ್ನ ಮೇಲಾಗುತ್ತಿರುವ ಅನ್ಯಾಯ, ಅನಾಚಾರ, ಅತ್ಯಾಚಾರ ತಡೆಯುವಲ್ಲಿ ವಿಫಲಳಾಗುತ್ತಿದ್ದಾಳೆ. ಪ್ರೀತಿ, ಸ್ನೇಹ, ಆತ್ಮವಿಶ್ವಾಸದ ಬದುಕು ಈಗೀಗ ದುಸ್ತರವಾಗುತ್ತಿದೆ. ಕಾನೂನು ಸ್ತ್ರೀಯರ ಪರವಾಗಿದ್ದರೂ ತನಗಿರುವ ಮಿತಿಗಳಿಂದ ಹೊರಬರಲಾರದೆ ಮನದೊಳಗೆ ಕುಗ್ಗುತ್ತಿದ್ದಾಳೆ.
– ಶಹನಾಝ್ಎಂ. ಸಾಹಿತಿ

ಟಾಪ್ ನ್ಯೂಸ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.