ಸಂಭಾವ್ಯ ಅಪಾಯ ತಪ್ಪಿಸಿದ ಅತ್ತೆ-ಅಳಿಯನ ಸಮಯಪ್ರಜ್ಞೆ


Team Udayavani, Apr 29, 2019, 1:29 PM IST

JALAJAKSHI

ಪುತ್ತೂರು: ರೈಲು ಪ್ರಯಾಣ ಮಾಡುತ್ತಿದ್ದ ಅತ್ತೆ- ಅಳಿಯನ ಸಮಯ ಪ್ರಜ್ಞೆಯ ಜತೆಗೆ ಕುಂದಾಪುರ ಬಿಜೂರು ಬಳಿಯ ರೈಲು ಹಳಿ ಹತ್ತಿರದಲ್ಲಿದ್ದ ಮನೆಯವರ ಸಹಕಾರದಿಂದ ಭಾರೀ ರೈಲು ಅವಘಡವೊಂದು ತಪ್ಪಿದಂತಾಗಿದೆ.

ಮುಂಬಯಿಯಿಂದ ಎರ್ನಾಕುಲಂಗೆ ಹೊರಟಿದ್ದ ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ನ ಹವಾನಿಯಂತ್ರಿತ ಬೋಗಿಯಲ್ಲಿ ಬೆಂಕಿ ಕಂಡು ಕೂಡಲೇ ಎಲ್ಲರನ್ನೂ ಎಚ್ಚರಿಸಿ ಸಂಭವನೀಯ ಅವಘಡವನ್ನು ತಪ್ಪಸುವಲ್ಲಿ ಯಶಸ್ವಿಯಾದವರು ಪುತ್ತೂರು ತಾಲೂಕಿನ ತಿಂಗಳಾಡಿಯ ಜಲಜಾಕ್ಷಿ ಮನೋಹರ್‌ ರೈ ಮತ್ತು ಅವರ ಅಳಿಯ ನಿಶ್ಚಲ್‌ ಶೆಟ್ಟಿ ಅವರು. ಮೊಮ್ಮಗುವನ್ನು ನೋಡಿಕೊಳ್ಳಲೆಂದು  ಫೆ. 27ರಂದು ಮುಂಬಯಿ ಇರೋಲ್‌ನಲ್ಲಿರುವ ಮಗಳ ಮನೆಗೆ ಜಲಜಾಕ್ಷಿ ತೆರಳಿದ್ದರು.

ಬಳಿಕ ಎ. 27ರಂದು ರಾತ್ರಿ ತಮ್ಮ ಮಗಳು ಅಕ್ಷತಾ, ಅಳಿಯ ನಿಶ್ಚಲ್‌ ಶೆಟ್ಟಿ ಹಾಗೂ 8 ತಿಂಗಳ ಮಗುವಿನೊಂದಿಗೆ ಪನ್ವೇಲ್‌ ನಿಲ್ದಾಣದಲ್ಲಿ ರೈಲು ಹತ್ತಿದ್ದರು. ಎಸಿ ಬೋಗಿಯ ಬಿ4ರಲ್ಲಿ ಅವರ ಆಸನಗಳನ್ನು ಕಾದಿರಿಸಲಾಗಿತ್ತು.
“ಶೌಚಾಲಯದ ಪಕ್ಕದಲ್ಲಿ ಮೇಲ್ಭಾಗದ ಸೀಟಿನಲ್ಲಿ ಮಲಗಿದ್ದ ನನಗೆ ನಿದ್ದೆ ಬಂದಿರಲಿಲ್ಲ. ತಡರಾತ್ರಿ ಶೌಚಾಲಯ ಭಾಗದಿಂದ ಹೊಗೆ ಕಾಣಿಸಿಕೊಂಡಿತು. ತತ್‌ಕ್ಷಣ ಕುಳಿತೆ. ಸುಟ್ಟ ವಾಸನೆಯೂ ಬರತೊಡಗಿತು. ಹತ್ತಿರ ಹೋಗಿ ನೋಡಿದೆ. ಗಾಬರಿಯಾಯಿತು, ಏನು ಮಾಡಬೇಕೆಂದು ಗೊತ್ತಾಗಲಿಲ್ಲ. ಬಹಳ ಬಾರಿ ರೈಲಿನಲ್ಲಿ ಪ್ರಯಾಣಿಸಿದವಳಲ್ಲ ನಾನು. ಆದರೂ ಜೋರಾಗಿ ಬೊಬ್ಬೆ ಹಾಕುತ್ತ ಬಂದು ಮಗಳನ್ನು ಎಬ್ಬಿಸಿದೆ. ಅವಳೂ ಆತಂಕಗೊಂಡಳು. ಅಷ್ಟರಲ್ಲಿ ಬೋಗಿಯಲ್ಲಿದ್ದವರೆಲ್ಲ ಎಚ್ಚರಗೊಂಡರು.  ಅಳಿಯ ಚೈನ್‌ ಎಳೆದು ರೈಲು ನಿಲ್ಲಿಸಿದರು. ರೈಲು ನಿಂತ ಕೂಡಲೇ ಕೆಳಗೆ ಹಾರಿಬಿಟ್ಟೆವು ಎನ್ನುತ್ತಾರೆ ಜಲಜಾಕ್ಷಿ.

ಮೇ 1ಕ್ಕೆ ರಜೆ ಇರುವುದರಿಂದ, ಎ. 29ಕ್ಕೆ ಮುಂಬಯಿಯಲ್ಲಿ ಚುನಾವಣೆಯ ಹಿನ್ನೆಲೆಯಲ್ಲಿ ರಜೆ ಇದ್ದು ಸರಣಿ ರಜೆಯ ಕಾರಣ ಊರಿಗೆ ಹೊರಟಿದ್ದೆವು. ದಿಲ್ಲಿಯಿಂದ 3 ಗಂಟೆ ತಡವಾಗಿ ರೈಲು ಬಂದಿತ್ತು. 9.30ಕ್ಕೆ ಮುಂಬಯಿ ಯಿಂದ ಹೊರಡಬೇಕಿದ್ದ ರೈಲು 12ಕ್ಕೆ ಹೊರಟಿತು. ಮಂಗಳೂರು ತಲುಪುವಾಗ ಮುಂಜಾನೆ ಆಗಿತ್ತು. ನಮ್ಮಲ್ಲಿ 7 ಬ್ಯಾಗುಗಳಿದ್ದು, ಎಲ್ಲವೂ ಹೊಗೆಯಿಂದ ಕಪ್ಪಗಾಗಿವೆ. ಸಣ್ಣ ಮಗುವಿನೊಂದಿಗೆ ಹೊರಟಿದ್ದ ನಮ್ಮ ಪರಿಸ್ಥಿತಿ ನೆನಪಿಸಿಕೊಂಡರೆ ಭಯವಾಗುತ್ತದೆ ಎಂಬುದು ಅವರ ಅಭಿಪ್ರಾಯ.

ಸ್ಥಳೀಯರ ನೆರವು
ಎಚ್ಚರಗೊಂಡು ನೋಡಿದಾಗ ರೈಲು ವೇಗವಾಗಿ ಸಾಗುತ್ತಿತ್ತು. ಬಿಜೂರು ನಿಲ್ದಾಣ ದಾಟಿ ಸುಮಾರು 2 ಕಿ.ಮೀ. ಸಾಗಿಯಾಗಿತ್ತು. ಪುಣ್ಯಕ್ಕೆ ರೈಲು ನಿಂತಲ್ಲಿ ಎರಡು ಮನೆಗಳಿದ್ದವು. ರೈಲು ನಿಂತ ಸದ್ದು ಮತ್ತು ಬೊಬ್ಬೆಯನ್ನು ಕೇಳಿ ಹತ್ತಿರದ ಮನೆಯವರು ಸಹಾಯಕ್ಕೆ ಓಡಿ ಬಂದರು. ಪೈಪ್‌ ಹಾಕಿ ಪಂಪ್‌ಚಾಲು ಮಾಡಿ ಬೆಂಕಿ ನಂದಿಸತೊಡಗಿದರು. ಅವರ ಸಹಾಯದಿಂದ ಭಾರೀ ಅವಘಡ ತಪ್ಪಿತು. ಸುಮಾರು 2 ಗಂಟೆಗಳ ಕಾಲ ರೈಲನ್ನು ನಿಲ್ಲಿಸಲಾಗಿತ್ತು. ಬಳಿಕ ನಾವು ಮಂಗಳೂರಿನತ್ತ ಪ್ರಯಾಣಿಸಿದೆವು ಎಂದರು ನಿಶ್ಚಲ್‌.

ಬೋಗಿಯಲ್ಲಿ 72 ಜನ
ಬೋಗಿಯ ಎಲ್ಲ 72 ಆಸನಗಳೂ ಭರ್ತಿಯಾಗಿದ್ದವು. ಒಳ್ಳೆಯ ನಿದ್ದೆ ಬಂದಿದ್ದ ಸಮಯವದು. ಅತ್ತೆ ಬೊಬ್ಬೆ ಹಾಕಿಕೊಂಡು ಬಂದು ಎಬ್ಬಿಸಿದಾಗ ಏನೆಂದು ತತ್‌ಕ್ಷಣ ಗೊತ್ತಾಗಲಿಲ್ಲ. ಅತ್ತೆ ಫಯರ್‌, ಡೇಂಜರ್‌ ಎಂದು ಬೊಬ್ಬೆ ಹಾಕುತ್ತಿದ್ದರು. ಕೂಡಲೇ ಪರಿಸ್ಥಿತಿ ಅರ್ಥವಾಯಿತು. ತುರ್ತು ನಿಲುಗಡೆ ಚೈನ್‌ ಎಳೆದೆ. ಟಾಯ್ಲೆಟ್‌ ಭಾಗದಲ್ಲಿ ಇಳಿಯಲು ಸಾಧ್ಯವಿರದ ಕಾರಣ, ರೈಲು ನಿಂತ ಕೂಡಲೇ ವಿರುದ್ಧ ದಿಕ್ಕಿನಲ್ಲಿ ಎಲ್ಲರನ್ನೂ ಕರೆದುಕೊಂಡು ಓಡಿದೆವು. ಐದು ನಿಮಿಷ ವಿಳಂಬವಾಗಿದ್ದರೆ ಎಲ್ಲವೂ ಹೊತ್ತಿ ಉರಿದು ಭಾರೀ ಅವಘಡವೇ ಘಟಿಸುತ್ತಿತ್ತು ಎಂದು ವಿವರಿಸುತ್ತಾರೆ ನಿಶ್ಚಲ್‌ ಶೆಟ್ಟಿ.

ರೈಲು ಪ್ರಯಾಣದ ಅನುಭವ ಕಡಿಮೆ. ದಟ್ಟ ಹೊಗೆ ಕಂಡಾಗ ಜೀವವೇ ಬಾಯಿಗೆ ಬಂದಂತೆ ಆಯಿತು. ತತ್‌ಕ್ಷಣ ಸೀಟಿನಿಂದ ಇಳಿದು ಫಯರ್‌, ಡೇಂಜರ್‌ ಎಂದು ಬೊಬ್ಬೆ ಹಾಕಿದೆ. ಎಲ್ಲರೂ ಸುರಕ್ಷಿತವಾಗಿರುವುದಷ್ಟೇ ಖುಷಿ.
– ಜಲಜಾಕ್ಷಿ ಮನೋಹರ್‌ ರೈ

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.