ವಿವಿಧೆಡೆ ಜಂಕ್ಷನ್‌ ಅಭಿವೃದ್ಧಿ ಕಾಮಗಾರಿ ಚುರುಕು


Team Udayavani, Oct 12, 2018, 11:10 AM IST

12-october-5.gif

ಮಹಾನಗರ: ಮಹಾನಗರ ಪಾಲಿಕೆಯ ವತಿಯಿಂದ ನಗರದ ವಿವಿಧೆಡೆ ಜಂಕ್ಷನ್‌ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಲಾಲ್‌ಬಾಗ್‌, ಬಿಜೈ, ಕರಂಗಲ್ಪಾಡಿ, ಬಂಟ್ಸ್‌ಹಾಸ್ಟೆಲ್‌ ಸಹಿತ ನಗರದ ವಿವಿಧ ಬಸ್‌ ನಿಲ್ದಾಣಗಳಲ್ಲಿ ಕಾಮಗಾರಿ ನಡೆಯುತ್ತಿದೆ. ಬಸ್‌ಗಳು ಬಸ್‌ ಬೇಯಲ್ಲಿ ನಿಲ್ಲಬೇಕು ಎಂಬ ಕಾರಣದಿಂದಲೂ ಜಂಕ್ಷನ್‌ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ.

ಎಲ್ಲೆಲ್ಲಿ ಕಾಮಗಾರಿ?
60 ಲಕ್ಷ ರೂ. ವೆಚ್ಚದಲ್ಲಿ ಲಾಲ್‌ಬಾಗ್‌ ಜಂಕ್ಷನ್‌ ಅಭಿವೃದ್ಧಿ ಕೈಗೊಳ್ಳಲಾಗಿದೆ. ಚರಂಡಿ ಹಾಗೂ ಫುಟ್‌ಪಾತ್‌ ಅಭಿವೃದ್ಧಿಗೊಳಿಸಿ, ಫ್ರೀ ಟರ್ನ್ ಮಾಡಲು ಇಲ್ಲಿ ಯೋಚಿಸಲಾಗಿದೆ. ಇದನ್ನು ಕರಾವಳಿ ಮೈದಾನದ ಮುಂಭಾಗದ ರಸ್ತೆಯ ವ್ಯಾಪ್ತಿಗೂ ವಿಸ್ತರಿಸಲಾಗುತ್ತದೆ. ಬಿಜೈ ಚರ್ಚ್‌ನಿಂದ ವಿವೇಕಾನಂದ ಪಾರ್ಕ್‌ ರಸ್ತೆಯಲ್ಲಿ 1.13 ಕೋ.ರೂ. ವೆಚ್ಚದಲ್ಲಿ ಜಂಕ್ಷನ್‌ ಅಭಿವೃದ್ಧಿಗೆ ಉದ್ದೇಶಿಸಲಾಗಿದೆ. ಕರಂಗಲ್ಪಾಡಿಯಲ್ಲಿ ಮಾರುಕಟ್ಟೆಯಿಂದ ಮೆಡಿಕೇರ್‌ ಸೆಂಟರ್‌ವರೆಗೆ 75 ಲಕ್ಷ ರೂ. ಹಾಗೂ ಅದೇ ವ್ಯಾಪ್ತಿಯಲ್ಲಿ ವುಡ್‌ ಲ್ಯಾಂಡ್‌ ಹೊಟೇಲ್‌ ರಸ್ತೆಯ ಭಾಗದಲ್ಲಿ 90 ಲಕ್ಷ ರೂ. ವೆಚ್ಚದಲ್ಲಿ ಜಂಕ್ಷನ್‌ ಅಭಿವೃದ್ಧಿ ಕೈಗೊಳ್ಳಲಾಗಿದೆ ಎಂದು ಮನಪಾ ಮುಖ್ಯ ಸಚೇತಕ ಎಂ. ಶಶಿಧರ ಹೆಗ್ಡೆ ತಿಳಿಸಿದ್ದಾರೆ.

ಟಿಎಂಎ ಪೈ ಹಾಲ್‌ನ ಮುಂಭಾಗದ ಬಸ್‌ ನಿಲ್ದಾಣ ವ್ಯಾಪ್ತಿಯಲ್ಲಿ ಹಿಂದೆ ಮಾಡಿದ ಕಾಂಕ್ರೀಟ್‌ ಕೆಲಸದಲ್ಲಿ ವ್ಯತ್ಯಾಸವಾದ ಕಾರಣದಿಂದ ಅಲ್ಲಿ ಹಿಂದಿನ ಗುತ್ತಿಗೆದಾರರಿಂದಲೇ ಇದೀಗ ಕಾಂಕ್ರೀಟ್‌ ಕೆಲಸ ಕೈಗೊಳ್ಳಲಾಗಿದೆ. ಈ ಮೂಲಕ ಬಸ್‌ ನಿಲುಗಡೆಗೆ ಇಲ್ಲಿ ಸೂಕ್ತ ವ್ಯವಸ್ಥೆ ಆಗಲಿದೆ. ಪ್ರೀಮಿಯರ್‌ ಎಫ್‌ಐಆರ್‌ನಲ್ಲಿ ಅತ್ತಾವರದ ಬಿ.ವಿ. ರೋಡ್‌, ಎಸ್‌.ಎಲ್‌. ಮಥಾಯಸ್‌ ರೋಡ್‌ನ‌ಲ್ಲಿ ಈಗಾಗಲೇ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದು ಮನಪಾ ಮೂಲಗಳು ತಿಳಿಸಿವೆ.

ಸಂಚಾರಕ್ಕೆ ಎದುರಾಗಿದೆ ಸಮಸ್ಯೆ
ಸಂಚಾರ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ನಗರದ ವಿವಿಧ ಭಾಗದಲ್ಲಿ ಜಂಕ್ಷನ್‌ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದ್ದರೂ ಕಾಮಗಾರಿಯ ಕಾರಣದಿಂದ ಸಂಚಾರ ದಟ್ಟಣೆ ಎದುರಾಗಿದೆ. ಕೆಲವು ದಿನಗಳಿಂದ ಸಂಜೆ ಸಮಯದಲ್ಲಿ ಮಳೆ ಕೂಡ ಬರುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಇಲ್ಲಿ ಸಮಸ್ಯೆ ಉಂಟಾಗಿದೆ. ಒಂದೆಡೆ ಬಸ್‌ ಗಳು ರಸ್ತೆಯಲ್ಲಿಯೇ ನಿಲ್ಲುವುದರಿಂದ ಟ್ರಾಫಿಕ್‌ ಕಿರಿಕಿರಿಯಾದರೆ, ಇನ್ನೊಂದೆಡೆ ಮಳೆಯ ಮಧ್ಯೆ ರಸ್ತೆ ಅಗೆದು ಕಾಮಗಾರಿ ನಡೆಸುವುದು ಮತ್ತೂಂದು ಸಮಸ್ಯೆ. ಜತೆಗೆ ಈಗ ನವರಾತ್ರಿ ಸಂಭ್ರಮ ಇರುವ ಕಾರಣ ಅಧಿಕ ಜನ ನಗರಕ್ಕೆ ಬರುವಾಗ ಕಾಮಗಾರಿಯ ನೆಪದಲ್ಲಿ ಬ್ಲಾಕ್‌ ಸಮಸ್ಯೆಯೂ ಉಂಟಾಗಿದೆ ಎಂಬ ಆರೋಪವೂ ಕೇಳಿಬಂದಿದೆ. 

ಜಂಕ್ಷನ್‌ ಅಭಿವೃದ್ಧಿಯ ಗುರಿ
ನಗರದಲ್ಲಿ ಟ್ರಾಫಿಕ್‌ ಸಹಿತ ವಿವಿಧ ಸಮಸ್ಯೆಗಳಿಗೆ ಮೂಲ ಕಾರಣವಾಗಿದ್ದ ಜಂಕ್ಷನ್‌ಗಳನ್ನು ವ್ಯವಸ್ಥಿತ ರೀತಿಯಲ್ಲಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಜಂಕ್ಷನ್‌ ಅಭಿವೃದ್ಧಿ ಕೈಗೊಳ್ಳಲಾಗಿದೆ. ಕೆಲವು ಭಾಗದಲ್ಲಿ ಕಾಮಗಾರಿ ಕೈಗೊಳ್ಳುವಾಗ ಸಾರ್ವಜನಿಕರಿಗೆ ಸಮಸ್ಯೆ ಆದರೂ ಕೂಡ ನಗರದ ಭವಿಷ್ಯದ ದೃಷ್ಟಿಯಿಂದ ಸಹಕರಿಸಬೇಕು. ಕೆಲವೇ ದಿನದಲ್ಲಿ ಕಾಮಗಾರಿ ಪೂರ್ಣ ಗೊಂಡು ಸಾರ್ವಜನಿಕರಿಗೆ ಜಂಕ್ಷನ್‌ಗಳು ಉತ್ತಮ ರೀತಿಯಲ್ಲಿ ಲಭ್ಯವಾಗಲಿವೆ. 
– ಭಾಸ್ಕರ್‌ ಕೆ., ಮೇಯರ್ 

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.