ತಾಲೂಕಿನೊಂದಿಗೆ ಸಮುದಾಯ ಆಸ್ಪತ್ರೆಗೂ ಉದ್ಘಾಟನೆ ಭಾಗ್ಯ


Team Udayavani, Mar 8, 2019, 4:30 AM IST

8-march-1.jpg

ಕಡಬ: ನೂತನ ಕಡಬ ತಾಲೂಕಿನ ಉದ್ಘಾಟನೆಯೊಂದಿಗೆ ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿರುವ ಕಡಬದ ಸರಕಾರಿ ಆಸ್ಪತ್ರೆಗೆ 4.85 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ನೂತನ ಕಟ್ಟಡವೂ ಮಾ. 8ರಂದು ಲೋಕಾರ್ಪಣೆಗೊಳ್ಳಲಿದೆ. ಅಗತ್ಯ ಸಲಕರಣೆಗಳೊಂದಿಗೆ ನೂತನ ಕಟ್ಟಡ ಉದ್ಘಾಟನೆಗೆ ಸಿದ್ಧಗೊಂಡಿದೆ.

ಆರು ಹಾಸಿಗೆಗಳ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸರಕಾರವು 9 ವರ್ಷಗಳ ಹಿಂದೆಯೇ 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿತ್ತು. ಅದರಂತೆ ಕಡಬ ಆಸ್ಪತ್ರೆಗೆ ಪ್ರಸೂತಿ ತಜ್ಞರು, ಶಿಶು ತಜ್ಞರ ಸಹಿತ ನಾಲ್ವರು  ವೈದ್ಯಾಧಿಕಾರಿಗಳು, ಓರ್ವ ದಂತ ವೈದ್ಯರು – ಹೀಗೆ ಒಟ್ಟು 34 ಹುದ್ದೆಗಳು ಮಂಜೂರಾಗಿವೆ. ಪ್ರಸ್ತುತ ನೂತನ ಕಟ್ಟಡದಲ್ಲಿ ಮಂಚ, ಹಾಸಿಗೆ ಸಹಿತ ಕೆಲವು ಅಗತ್ಯ ಸಲಕರಣೆಗಳು ಮಾತ್ರ ಸರಬರಾಜಾಗಿವೆ. ಸಮುದಾಯ ಆಸ್ಪತ್ರೆಗೆ ನೇಮಕವಾಗಬೇಕಾದ ತಜ್ಞ ವೈದ್ಯರು ಹಾಗೂ ಅಗತ್ಯ ಸಿಬಂದಿ ನೇಮಕ ಇನ್ನಷ್ಟೇ ಆಗಬೇಕಿದೆ.

8 ಗ್ರಾಮಗಳ ವ್ಯಾಪ್ತಿ
ಕಡಬ, ಕೋಡಿಂಬಾಳ, ಬಂಟ್ರ, 102ನೇ ನೆಕ್ಕಿಲಾಡಿ, ಕುಟ್ರಾಪ್ಪಾಡಿ, ಬಲ್ಯ, ನೂಜಿಬಾಳ್ತಿಲ ಹಾಗೂ ರೆಂಜಿಲಾಡಿ – ಹೀಗೆ 8 ಗ್ರಾಮಗಳ ವ್ಯಾಪ್ತಿಯನ್ನು ಈ ಆಸ್ಪತ್ರೆ ಹೊಂದಿದೆ. ಆದರೆ ಕುಂತೂರು, ಆಲಂಕಾರು, ಕೊಂಬಾರು, ಸಿರಿಬಾಗಿಲು, ಐತ್ತೂರು, ಕೊಣಾಜೆ, ಕಾಣಿಯೂರು, ಚಾರ್ವಾಕ, ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಪಂಜ, ಏನೆಕಲ್‌, ಬಳ್ಪ, ಕೇನ್ಯ, ಎಡಮಂಗಲದ ಜನರು ಇದೇ ಆಸ್ಪತ್ರೆಗೆ ಬರುತ್ತಿರುವುದರಿಂದ ವ್ಯಾಪ್ತಿ ದೊಡ್ಡದಾಗಿ ವಿಸ್ತರಿಸಿದೆ.

ಸವಲತ್ತು ನೀಡಲು ಕ್ರಮ
ಸಮುದಾಯ ಆಸ್ಪತ್ರೆಗೆ ಸವಲತ್ತುಗಳನ್ನು, ಸಿಬಂದಿ ನೇಮಕ ಹಾಗೂ ಅಗತ್ಯ ಸಲಕರಣೆಗಳನ್ನು ಒದಗಿಸುವುದು ನಮ್ಮ ಮೊದಲ ಗುರಿ. ಸರಕಾರಕ್ಕೆ ಈ ಕುರಿತು ಬೇಡಿಕೆ ಇಡಲಾಗಿದೆ. ಹಂತ ಹಂತವಾಗಿ ಎಲ್ಲ ಬೇಡಿಕೆಗಳು ಈಡೇರಲಿವೆ. ಹೊಸ ತಾಲೂಕುಗಳಾದ ಕಡಬ ಹಾಗೂ ಮೂಡುಬಿದಿರೆಯ ಸರಕಾರಿ ಆಸ್ಪತ್ರೆಗಳನ್ನು 100 ಹಾಸಿಗೆಗಳ ತಾಲೂಕು ಮಟ್ಟದ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಕಡಬಕ್ಕೂ ತಾಲೂಕು ಆಸ್ಪತ್ರೆಯ ಮಾನ್ಯತೆ ಸಿಗಲಿದೆ.
– ಡಾ| ರಾಮಕೃಷ್ಣ ರಾವ್‌
ಜಿಲ್ಲಾ ಆರೋಗ್ಯಾಧಿಕಾರಿ

ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.