ಇಂದು ಪಡೀಲು ರೈಲ್ವೆ ಕೆಳಸೇತುವೆ ಉದ್ಘಾಟನೆ
Team Udayavani, Nov 15, 2017, 9:50 AM IST
ಮಹಾನಗರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡಗುಂಡಿಗಳಿಂದ ತುಂಬಿ ಪಡೀಲು ರೈಲ್ವೇ ಕೆಳಸೇತುವೆ ಬಳಿಯ ಟ್ರಾಫಿಕ್ ಜಾಮ್ಗೆ ಮುಕ್ತಿ ಸಿಗುವ ಕಾಲ ಸನ್ನಿಹಿತವಾಗಿದ್ದು, ಇಲ್ಲಿ ನಿರ್ಮಾಣವಾಗಿರುವ ಹೊಸ ಕೆಳಸೇತುವೆಯು ನ. 15ರಂದು ಬೆಳಗ್ಗೆ 9ಕ್ಕೆ ಸಂಸದ ನಳಿನ್ಕುಮಾರ್ ಕಟೀಲು ಅವರಿಂದ ಉದ್ಘಾಟನೆಗೊಳ್ಳಲಿದೆ. ಉದ್ಘಾಟನೆಗೆ ಈ ಹಿಂದೆ ಹಲವು ದಿನಾಂಕ ನಿಗದಿಪಡಿಸಲಾಗಿತ್ತಾದರೂ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ವಿಳಂಬವಾಗಿತ್ತು.
ಕಳೆದ ಮಳೆಗಾಲದಲ್ಲಿ ಇಲ್ಲಿಯ ಹೆದ್ದಾರಿಯಲ್ಲಿ ಹೊಂಡಗಳು ತುಂಬಿದ ಹಿನ್ನೆಲೆಯಲ್ಲಿ ವಾಹನಗಳು ನಿಧಾನವಾಗಿ ಸಂಚರಿಸಿದ ಪರಿಣಾಮ ತಾಸುಗಟ್ಟಲೆ ಟ್ರಾಫಿಕ್ ಜಾಮ್ ಕಂಡುಬಂದಿತ್ತು. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿ ಪ್ರತಿಭಟನೆ ನಡೆಸುವ ಹಂತಕ್ಕೆ ತಲುಪಿತ್ತು.
ಬಳಿಕ ಸಂಸದ ನಳಿನ್ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿ ಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಹಲವು ಸಭೆಗಳಲ್ಲೂ ಅಧಿಕಾರಿಗಳ ನಡೆಯ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಸ್ತುತ ಹೊಸ ಸೇತುವೆಯ ಇಕ್ಕೆಲಗಳಲ್ಲಿ ರಸ್ತೆ ಸುಸ್ಥಿತಿಯಲ್ಲಿರುವ ಕಾರಣ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ.
ಹಳೆ ಸೇತುವೆ ಕಾಮಗಾರಿ
ಪಡೀಲಿನ ಹಳೆ ಕೆಳಸೇತುವೆಯು ತೆರೆದ ಸೇತುವೆಯಾಗಿರುವುದರಿಂದ ಅದರ ಕಾಮಗಾರಿ ನಡೆಯಲಿದೆ. ಜತೆಗೆ ಇದು ತಗ್ಗು ಪ್ರದೇಶವಾದ ಹಿನ್ನೆಲೆಯಲ್ಲಿ ಮಳೆನೀರು ನಿಂತು ರಸ್ತೆಯೂ ಪದೇ ಪದೇ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಈಗ ಹೆದ್ದಾರಿಯನ್ನು ಎತ್ತರಗೊಳಿಸುವ ಕಾಮಗಾರಿಯೂ ನಡೆಯಲಿದೆ. ಹಳೆಯ ಸೇತುವೆಯ ಕಾಮಗಾರಿ ಆರಂಭಗೊಂಡರೆ ವಾಹನ ಸಂಚಾರ ಮೊಟಕು ಸಾಧ್ಯತೆಯೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ