ತೊಕ್ಕೊಟ್ಟು ಮೇಲ್ಸೇತುವೆ ಉದ್ಘಾಟನೆ ಮುಂದೂಡಿಕೆ?
Team Udayavani, Jun 10, 2019, 6:10 AM IST
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಜಂಕ್ಷನ್ನ ಮೇಲ್ಸೇತುವೆ ಕಾಮಗಾರಿ ರವಿವಾರ ಪೂರ್ಣಗೊಂಡಿದೆ. ಜೂ. 10ಕ್ಕೆ ಉದ್ಘಾಟನೆಗೆ ನಿಗದಿಯಾಗಿದ್ದ ಮುಹೂರ್ತ ತಾಂತ್ರಿಕ ಕಾರಣಗಳಿಂದ ಮುಂದೂಡುವ ಸಾಧ್ಯತೆಯಿದ್ದು, ಜೂ. 14ರಂದು ಜನಪ್ರತಿನಿಧಿಗಳು, ಜಿಲ್ಲಾಡಳಿತ ಮತ್ತು ಹೆದ್ದಾರಿ ಇಲಾಖೆಯ ಅಧಿಕಾರಿಗಳ ಸಭೆಯ ಬಳಿಕ ಉದ್ಘಾಟನೆಯ ದಿನಾಂಕ ನಿಗದಿಯಾಗಲಿದೆ.
ಎಂಟು ವರ್ಷಗಳ ಹಿಂದೆ ಆರಂಭಗೊಂಡಿದ್ದ ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಆರ್ಥಿಕ ಅಡಚಣೆಯಿಂದ ಅಮೆಗತಿಯಲ್ಲಿತ್ತು. ಕಾಮಗಾರಿ ನಡೆ ಸುವ ಸಂಸ್ಥೆಗೆ ಸಂಸದರ ಶಿಫಾರಸ್ಸಿನ ಮೇರೆಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಿದ್ದರು. ಈಗ ಕಾಮಗಾರಿ ಪೂರ್ಣ ಗೊಂಡಿದ್ದು ಉದ್ಘಾಟನೆಗೆ ದಿನಾಂಕ ನಿಗದಿಯಾಗಬೇಕಿದೆ.
ಕಾಮಗಾರಿ ಸಂಪೂರ್ಣ
ಮೂರು ತಿಂಗಳಲ್ಲಿ 24 ಗಂಟೆಗಳ ಕಾಲ ನಿರಂತರ ಕಾಮಗಾರಿ ನಡೆದಿದ್ದು, ಇನ್ನೊಂದೆಡೆ ಮಳೆ ಕಾಮಗಾರಿ ಅಡಚಣೆ ನೀಡದ ಕಾರಣ ಸದ್ಯ ಕಾಮಗಾರಿ ಪೂರ್ಣ ಗೊಂಡಿದೆ. ತಡೆಗೋಡೆಗೆ ಪೈಟಿಂಗ್ ಕಾರ್ಯ ಮತ್ತು ಹೆದ್ದಾರಿ ಮದ್ಯೆ ಎರಡು ವಾಹನಗಳು ಸಂಚರಿಸುವ ಮಧ್ಯೆ ಲೈನ್ ಹಾಕುವ ಕಾರ್ಯ ರವಿವಾರ ಸಂಜೆಗೆ ಪೂರ್ಣಗೊಳ್ಳಲಿದೆ. ಕಾಮಗಾರಿಗೆ ಬಳಸಿದ್ದ ಕಾಂಕ್ರೀಟ್ ಸಾಮಾಗ್ರಿಗಳ ತೆರವು ಕಾರ್ಯ ಸಂಜೆಯ ವೇಳೆಗೆ ಪೂರ್ಣಗೊಂಡಿದೆ. ಫಿನಿಶಿಂಗ್ ಕಾರ್ಯ ಮುಗಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ