ತೊಕ್ಕೊಟ್ಟು ಫ್ಲೈಓವರ್‌ ಉದ್ಘಾಟಿಸಿ ಸಂಸದ ನಳಿನ್‌ ಕುಮಾರ್‌

ಹತ್ತಾರು ಅಡಚಣೆ, ಟೀಕೆಗಳ ನಡುವೆ ಕಾಮಗಾರಿ ಪೂರ್ಣ

Team Udayavani, Jun 14, 2019, 10:04 AM IST

tokkottu

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಮೇಲ್ಸೇತುವೆಯನ್ನು ತಾಂತ್ರಿಕ ಅಡಚಣೆ ಮತ್ತು ಹತ್ತಾರು ಟೀಕೆಗಳ ನಡುವೆಯೂ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತ ಗೊಳಿಸಲಾಗಿದೆ. ಪಂಪ್‌ವೆಲ್‌ ಮೇಲ್ಸೇತುವೆ ಕಾಮಗಾರಿಯನ್ನೂ ಕೆಲವೇ ದಿನಗಳಲ್ಲಿ ಪೂರ್ಣಗೊಳಿಸಲು ಆದೇಶಿಸಿದ್ದು, ಮಳೆಯ ತೀವ್ರತೆ ಇಲ್ಲದಿದ್ದಲ್ಲಿ ಶೀಘ್ರವೇ ಸಂಚಾರ ಮುಕ್ತಗೊಳಿಸಲಾಗುವುದು ಎಂದು ಸಂಸದ ನಳಿನ್‌ ತಿಳಿಸಿದರು.

ತೊಕ್ಕೊಟ್ಟು ಮೇಲ್ಸೇತುವೆಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ಕೆಲವು ಕಾನೂನು ಮತ್ತು ತಾಂತ್ರಿಕ ಕಾರಣಗಳಿಂದ ಮತ್ತು ನವಯುಗ್‌ ಸಂಸ್ಥೆಯ ಆರ್ಥಿಕ ಮುಗ್ಗಟ್ಟಿನಿಂದ ಕಾಮಗಾರಿ ವಿಳಂಬ ವಾಗಿತ್ತು. ಈ ವರ್ಷದ ಆರಂಭದಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿ ಸಂಸ್ಥೆಗೆ 55 ಕೋಟಿ ರೂ. ಹಣ ಕಾಸು ಸೌಲಭ್ಯ ಒದಗಿಸಿದ ಬಳಿಕ ಕಾಮಗಾರಿ ಪುನರಾರಂಭಗೊಂಡು ನಿರಂತರ ನಡೆಯಿತು. ಪ್ರಧಾನಿ ಮೋದಿಯವರ ಕೇಂದ್ರ ಸರಕಾರದ ಎರಡನೇ ಅವಧಿಯಲ್ಲಿ ಎರಡು ಮೇಲ್ಸೇತುವೆಗಳು ಲೋಕಾರ್ಪಣೆಯಾಗಲಿವೆ. ಈಗ ಒಂದನ್ನು ಉದ್ಘಾಟಿ ಸಿದ್ದು, ಪಂಪ್‌ವೆಲ್‌ ಮೇಲ್ಸೇತುವೆ ಶೀಘ್ರದಲ್ಲೇ ಲೋಕಾರ್ಪಣೆಯಾಗುವುದು ಎಂದರು.

ಕ್ಷೇತ್ರದ ಬಿಜೆಪಿ ಅಧ್ಯಕ್ಷರು ಉಳ್ಳಾಲ ಬೈಪಾಸ್‌, ಕಲ್ಲಾಪು ಸಮಸ್ಯೆ ಬಗ್ಗೆ ತಿಳಿಸಿದ್ದಾರೆ. ಅಧಿಕಾರಿಗಳ ಜತೆಗೆ ಸಭೆಯನ್ನು ಕರೆದು ಶೀಘ್ರವೇ ಪರಿಹಾರ ಕಂಡುಕೊಳ್ಳಲು ಸೂಚಿಸುತ್ತೇನೆ. ಪಾರ್ಕಿಂಗ್‌, ರಿಕ್ಷಾ ಪಾರ್ಕಿಂಗ್‌, ಶೌಚಾಲಯ ನಿರ್ಮಿಸುವ ಚಿಂತನೆ ನಡೆಸಲಾಗುವುದು. ಸುರತ್ಕಲ್‌, ಕೂಳೂರು ಮಾದರಿಯಲ್ಲಿ ತೊಕ್ಕೊಟ್ಟು ಮೇಲ್ಸೇತುವೆಯೂ ಸುಂದರಗೊಳ್ಳ ಲಿದೆ ಎಂದರು.

ಈ ಸಂದರ್ಭದಲ್ಲಿ ಸಚೇತಕರಾಗಿ ಆಯ್ಕೆಯಾದ ನಳಿನ್‌ ಅವರನ್ನು ಸನ್ಮಾನಿಸಲಾಯಿತು. ಮುಖಂಡರಾದ ಸಂತೋಷ್‌ ರೈ ಬೋಳಿಯಾರ್‌, ಸತೀಶ್‌ ಕುಂಪಲ, ಜಯರಾಮ ಶೆಟ್ಟಿ, ಚಂದ್ರಹಾಸ, ಚಂದ್ರಶೇಖರ್‌, ರವೀಂದ್ರ ಶೆಟ್ಟಿ, ಚಂದ್ರಹಾಸ ಅಡ್ಯಂತಾಯ, ಧನಲಕ್ಷ್ಮೀ ಗಟ್ಟಿ, ಅಶ್ರಫ್‌, ರಾಜೇಶ್‌ ಸುರೇಶ್‌ ಆಳ್ವ, ಮೋಹನ ರಾಜ್‌, ಮನೋಜ್‌ ಆಚಾರ್ಯ, ಸೀತಾರಾಮ ಬಂಗೇರ, ಸೀತಾರಾಮ ಶೆಟ್ಟಿ ನೆತ್ತಿಲಬಾಳಿಕೆ, ಸಂಜೀವ ಶೆಟ್ಟಿ ಅಂಬ್ಲಿಮೊಗರು, ಲಲಿತಾ ಸುಂದರ್‌, ಚಂದ್ರಹಾಸ ಪಂಡಿತ್‌ ಹೌಸ್‌, ಜಿತೇಂದ್ರ ಶೆಟ್ಟಿ, ಪ್ರಕಾಶ್‌ ಸಿಂಫೋನಿ, ಜೀವನ್‌ ಕುಮಾರ್‌, ನಮಿತಾ ಶ್ಯಾಂ, ರಾಜೀವಿ, ಆನಂದ ಶೆಟ್ಟಿ, ಹರಿಯಪ್ಪ ಸಾಲ್ಯಾನ್‌, ದೇವದಾಸ್‌, ಚರಣ್‌ರಾಜ್‌, ರವಿಶಂಕರ್‌, ಅನಿಲ್‌ ದಾಸ್‌, ಸುರೇಂದ್ರ ಶೆಟ್ಟಿ, ಹೇಮಂತ ಶೆಟ್ಟಿ ಉಪಸ್ಥಿತರಿದ್ದರು.

ಸಾಗರ್‌ಮಾಲಾದಡಿ ಪರಿಹಾರ
ಉಳ್ಳಾಲ ಕ್ರಾಸ್‌ ರಸ್ತೆ ಸಮಸ್ಯೆಗೆ ಸಂಬಂಧಿಸಿದಂತೆ ತಾತ್ಕಾಲಿಕ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗುವುದು. ಮುಂದಿನ ದಿನಗಳಲ್ಲಿ ಸಾಗರ್‌ಮಾಲಾ ಯೋಜನೆಯಡಿ ರಸ್ತೆ, ಮೇಲ್ಸೇತುವೆ ನಿರ್ಮಾಣ ಕಾರ್ಯ ಆಗಲಿದ್ದು, ಸರ್ವೀಸ್‌ ರಸ್ತೆಯಿಂದ ಉಳ್ಳಾಲಕ್ಕೆ ಪ್ರತ್ಯೇಕ ಮೇಲ್ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ಈ ನಿಟ್ಟಿನಲ್ಲಿ ತಜ್ಞರೊಡನೆ ಚರ್ಚಿಸಲಾಗುವುದು ಎಂದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.