ಮಂಗಳೂರು: ಕುಡಿದ ಮತ್ತಿನಲ್ಲಿ ರಂಗೋಲಿ ವಿರೂಪಗೊಳಿಸಿದ ಯುವಕರು; ವಿಡಿಯೋ ವೈರಲ್
Team Udayavani, Oct 26, 2022, 3:50 PM IST
ಮಂಗಳೂರು: ದೀಪಾವಳಿ ಹಬ್ಬಕ್ಕೆ ಬಿಡಿಸಿದ ರಂಗೋಲಿಯನ್ನು ಕುಡಿದ ಮತ್ತಿನಲ್ಲಿ ಕೆಲ ಯುವಕರು ವಿರೂಪಗೊಳಿಸಿ ದುರ್ವರ್ತನೆ ತೋರಿದ ಘಟನೆ ನಗರದ ಬಿಜೈಯಲ್ಲಿ ನಡೆದಿದೆ.
ಅಪಾರ್ಟ್ ಮೆಂಟ್ ವೊಂದರಲ್ಲಿ ದೀಪಾವಳಿ ಹಬ್ಬಕ್ಕೆ ರಂಗೋಲಿ ಬಿಡಿಸಿ, ಹಬ್ಬದ ಶುಭಾಶಯವನ್ನು ರಂಗೋಲಿಯಲ್ಲಿ ಬರೆದಿದ್ದಾರೆ. ಈ ದೀಪಾವಳಿ ರಂಗೋಲಿಯನ್ನು ಕೇರಳ ಮೂಲದವರೆನ್ನಲಾದ ಕೆಲವು ವಿದ್ಯಾರ್ಥಿಗಳು ವಿರೂಪಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಕೈಯಲ್ಲಿ ಮಧ್ಯದ ಬಾಟಲಿಯನ್ನು ಹಿಡಿದುಕೊಂಡಿದ್ದಾನೆ, ಮತ್ತೊಬ್ಬ ರಂಗೋಲಿಯನ್ನು ಮೆಟ್ಟಿ, ಅದನ್ನು ವಿರೂಪಗೊಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈಗಾಗಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ತಿಳಿದು ಬಂದಿದೆ
ಶಾಸಕ ವೇದವ್ಯಾಸ್ ಕಾಮತ್ ಫೇಸ್ ಬುಕ್ ನಲ್ಲಿ ಈ ವಿಡಿಯೋ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿ, ಪೊಲೀಸರ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ