ಸುರತ್ಕಲ್: ಬೈಕ್ ಗೆ ನಾಯಿಯನ್ನು ಕಟ್ಟಿ ಹೆದ್ದಾರಿಯಲ್ಲೇ ದರದರನೇ ಎಳೆದುಕೊಂಡು ಹೋದ ಸವಾರರು !
Team Udayavani, Apr 22, 2021, 9:03 PM IST
ಮಂಗಳೂರು : ನಾಯಿಯೊಂದನ್ನು ಚಲಿಸುತ್ತಿರುವ ಬೈಕ್ ನ ಹಿಂದೆ ಬಲವಾಗಿ ಹಗ್ಗದಲ್ಲಿ ಕಟ್ಟಿ ಎಳೆದುಕೊಂಡು ಹೋಗಿರುವ ಹೃದಯವಿದ್ರಾವಕ ಘಟನೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ.
ಮಂಗಳೂರು ಹೊರವಲಯಯದ ಸುರತ್ಕಲ್ ಬಳಿಯ ಎನ್ ಐಟಿಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಸವಾರರು ಬೈಕ್ ನಲ್ಲಿ ಕುಳಿತು ಶ್ವಾನವೊಂದನ್ನು ಹಗ್ಗದಲ್ಲಿ ಕಟ್ಟಿ ಅದನ್ನು ದರದರನೇ ಎಳೆದುಕೊಂಡು ಹೋಗಿದ್ದಾರೆ. ಈ ಘಟನೆಯ ವೀಡಿಯೊವನ್ನು ರಸ್ತೆಯಲ್ಲಿ ಹೋಗುತ್ತಿದ್ದ ಬೇರೆ ಬೈಕ್ ಸವಾರರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಸದ್ಯ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಘಟನೆ ಏಪ್ರಿಲ್ 15 ರ ರಾತ್ರಿ ನಡೆದಿದೆ ಎನ್ನಲಾಗಿದೆ. ಸದ್ಯ ಪ್ರಾಣಿಪ್ರಿಯರು ಸೇರಿದಂತೆ ಸಾರ್ವಜನಿಕರು ಇಂಥ ಮಾನವೀಯತೆ ಮರೆತೆ ಮಾನವನ ಮೃಗತ್ವದ ವ್ಯಕ್ತಿತ್ವಕ್ಕೆ ಜೋರಾಗಿಯೇ ಗರಂ ಆಗಿದ್ದಾರೆ. ಸಾಮಾಜಿ ಜಾಲತಾಣದಲ್ಲಿ ವೀಡಿಯೊ ವೈರಲ್ ಆಗುತ್ತಿರುವ ಬೆನ್ನಲೇ ಸುರತ್ಕಲ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಂಕಿತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ