ಸುರತ್ಕಲ್: ಬಾಲಕನನ್ನು ಬೆದರಿಸಿ ಲಕ್ಷಾಂತರ ರೂ.ಮೌಲ್ಯದ ಬಂಗಾರ ಪಡೆದುಕೊಂಡ ಆರೋಪಿಗಳು ವಶಕ್ಕೆ
Team Udayavani, May 8, 2021, 2:12 PM IST
ಸುರತ್ಕಲ್: ಮಧ್ಯ ಗ್ರಾಮದಲ್ಲಿರುವ ದೇವಸ್ಥಾನದ ಬಳಿ ಸಣ್ಣ ಪ್ರಾಯದ ಹುಡುಗನಿಗೆ ಚೂರಿ ತೋರಿಸಿ ಬೆದರಿಸಿ 15 ಪವನ್ ಚಿನ್ನ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಘಟನೆಯ ವಿವರ : ಮಧ್ಯ ಗ್ರಾಮದ ದೇವಸ್ಥಾನದ ಬಳಿ ಬಾಬು ದೇವಾಡಿಗರ ಮಗನಾದ ಭರತ್ (14 ವರ್ಷ) ಎಂಬ ಹುಡುಗ ಏಪ್ರಿಲ್ 20 ತಾರೀಖಿನಂದು ದನ ಮೇಯಿಸಲು ಹೋದ ಸಂದರ್ಭದಲ್ಲಿ ಒತ್ತಾಯಪೂರ್ವಕವಾಗಿ ಇಬ್ಬರು ಯುವಕರು ಆತನನ್ನು ನದಿ ಬದಿ ಕರೆದುಕೊಂಡು ಹೋಗಿ ನೀನು ನಿನ್ನ ಮನೆಯಿಂದ ಚಿನ್ನವನ್ನು ತಂದುಕೊಡಬೇಕು ಇಲ್ಲದಿದ್ದರೆ ನಿನ್ನನ್ನು ನೀರಿನಲ್ಲಿ ಮುಳುಗಿಸಿ ಕೊಲ್ಲುತ್ತೇವೆ ಎಂದು ಬೆದರಿಸಿದ್ದಾರೆ.
ಅಪ್ಪ ಅಮ್ಮ ಮನೆಯಲ್ಲಿ ಇಲ್ಲದ್ದನ್ನು ಮನಗಂಡ ಯುವಕರು ಭರತ್ ನನ್ನು ಆತನ ಮನೆಗೆ ಕರೆದುಕೊಂಡು ಚೂರಿ ತೋರಿಸಿ, ಕವಾಟಿನ ಬೀಗವನ್ನುಕೊಡಲು ಹೇಳಿ ಕವಾಟಿನಿಂದ 15 ಪವನ್ ಚಿನ್ನವನ್ನು ಕೊಂಡು ಹೋಗಿದ್ದಾರೆ. ಇಷ್ಟು ಮಾತ್ರವಲ್ಲದೆ ಈ ವಿಷಯವನ್ನು ಅಪ್ಪ ಅಮ್ಮನಿಗೆ ತಿಳಿಸಿದರೆ ಅವರಿಬ್ಬರನ್ನು ಕೊಲ್ಲುವುದಾಗಿ ಬೆದರಿಸಿ ಹೋಗಿದ್ದಾರೆ. ಈಗ ಸುಮಾರು 3 ದಿನದ ಹಿಂದೆ ಮೇ 5 ತಾರೀಖಿನಂದು ಪುನಃ ಯುವಕರಿಬ್ಬರು 70000 ಎರಡು ದಿನದೊಳಗೆ ನೀನು ಕೊಡಬೇಕು ಇಲ್ಲದಿದ್ದರೆ ನಿನ್ನನ್ನು ಕೊಲ್ಲುತ್ತೇವೆ ಎಂದು ಬೆದರಿಸಿದ್ದಾರೆ.
ಇದನ್ನೂ ಓದಿ :ಆಸ್ಪತ್ರೆಗೆ ಬರಲು ಸಾಧ್ಯವಾಗದವರಿಗೆ ಮನೆಯಲ್ಲೇ ಚಿಕಿತ್ಸೆ ನೀಡುತ್ತೇವೆ : ಅಶ್ವತ್ಥ್ ನಾರಾಯಣ್
ಹೆದರಿದ ಹುಡುಗ ತಂದೆ ತಾಯಿ ಹತ್ತಿರ ವಿಷಯ ತಿಳಿಸಿದ್ದಾನೆ. ವಿಷಯ ತಿಳಿದ ಕೂಡಲೇ ಹುಡುಗನ ತಂದೆ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಪೋಲೀಸರು ಯುವಕರಿಬ್ಬರನ್ನು ವಶಕ್ಕೆ ತನಿಖೆ ನಡೆಸುತ್ತಿದ್ದಾರೆ ಯುವಕರಿಬ್ಬರು ಈ ಮೊದಲು ಕೂಡಾ ಸಣ್ಣ ಸಣ್ಣ ಕಳ್ಳತನ ಮಾಡುತ್ತಿದ್ದರು ಎನ್ನಲಾಗಿದೆ
ಪ್ರಕರಣ ದಾಖಲಿಸಿಕೊಂಡ ಸುರತ್ಜಲ್ ಪೊಲೀಸರು ಮೇ 8 ರಂದು ( ಶನಿವಾರ) ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದವರನ್ನು ರಂಜಿತ್ ಪೂಜಾರಿ ಯಾನೆ ರಂಜು ( 25) ಮತ್ತು ಮಂಜುನಾಥ ಯಾನೆ ಮಂಜ (25) ಎಂದು ಗುರುತಿಸಲಾಗಿದೆ. ಇವರು ಹುಡುಗನ ಮನೆಗೆ ಪರಿಚಯಸ್ಥರು ಎಂದು ತಿಳಿದು ಬಂದಿದೆ. ಕೆಲಸವಿಲ್ಲದ ಕಾರಣ ಈ ರೀತಿಯ ಕೃತ್ಯವನ್ನು ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಸದ್ಯ ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು