ಉಳ್ಳಾಲ: ಮನೆಯ ಬಾಗಿಲು ಒಡೆದು ಕಳವಿಗೆ ಯತ್ನಿಸಿದ ಕಳ್ಳರು
Team Udayavani, Jul 7, 2021, 1:01 PM IST
ಉಳ್ಳಾಲ: ಕೊಲ್ಯ ಮೂಕಾಂಬಿಕ ದೇವಸ್ಥಾನ ಬಳಿಯ ಎರಡು ಮನೆಗಳನ್ನು ಒಡೆದು ಕಳವಿಗೆ ವಿಫಲ ಯತ್ನ ನಡೆಸಿದ್ದರೂ ಮೂರು ವಾಚ್ ಗಳನ್ನು ಮಾತ್ರ ಕಳವುಗೈಯಲು ಯಶಸ್ವಿಯಾಗಿದ್ದು, ಮನೆಯ ಯಜಮಾನರೊಬ್ಬರು ಬೊಬ್ಬೆ ಹಾಕಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದ್ದು ಮನೆಯ ಸೊತ್ತುಗಳು ಹಾನಿಯಾಗಿದೆ.
ವಿದೇಶದಲ್ಲಿ ನೆಲೆಸಿರುವ ಸುರೇಶ್ ಎಂಬವರಿಗೆ ಸೇರಿದ ಮನೆಯ ಬಾಗಿಲು ಒಡೆದು ಒಳನುಗ್ಗಿರುವ ಕಳ್ಳರು ಕಪಾಟು ಪುಡಿಗೈದು, ಮನೆಯೊಳಗಿನ ಸಾಮಗ್ರಿಗಳನ್ನು ಚೆಲ್ಲಾಪಿಲ್ಲಿಗೈದು ಹಣ ಹಾಗೂ ಒಡವೆಗಾಗಿ ಹುಡುಕಾಡಿ ಏನೂ ಸಿಗದೇ ವಾಪಸ್ಸಾಗಿದ್ದಾರೆ. 2015 ರಲ್ಲಿ ಸುರೇಶ್ ಅವರ ಮನೆಗೆ ನುಗ್ಗಿದ್ದ ಕಳ್ಳರು 45 ಪವನ್ ತೂಕದ ಚಿನ್ನಾಭರಣಗಳನ್ನು ದೋಚಿದ್ದರು. ಆ ವೇಳೆಯೂ ಮನೆಯಲ್ಲಿ ಯಾರೂ ಇರಲಿಲ್ಲ. ಆದರೆ ಈವರೆಗೂ ಕಳ್ಳರ ಸುಳಿವು ಲಭ್ಯವಾಗಿಲ್ಲ. ಇದೀಗ ಅದೇ ಮನೆಗೆ ಮತ್ತೆ ನುಗ್ಗಿದ ಕಳ್ಳರ ತಂಡ ಕಳವಿಗೆ ಯತ್ನಿಸಿದೆ.
ಇದನ್ನೂ ಓದಿ: ಯಡಿಯೂರಪ್ಪ ಮತ್ತು ಅವರ ಮಗ ಜೆಸಿಬಿಯಲ್ಲಿ ಅಗೆದು ಹಣ ಮಾಡುತ್ತಿದ್ದಾರೆ: ಸಿದ್ದು ಆಕ್ರೋಶ
ಬೊಬ್ಬೆ ಹಾಕಿದ್ದರಿಂದ ಪರಾರಿಯಾದ ಕಳ್ಳರು : ಸುರೇಶ್ ಮನೆಯ ಪಕ್ಕದ ರಾಜೇಶ್ ಎಂಬವರ ಮನೆಯೊಳಕ್ಕೆ ಬೀಗ ಒಡೆದು ಒಳನುಗ್ಗಿದ ಕಳ್ಳರು ಕಪಾಟನ್ನು ಜಾಲಾಡಿ ಮೂರು ವಾಚ್ ಗಳನ್ನು ಕಳವು ನಡೆಸಿದ್ದು, ಈ ವೇಳೆ ಬೆಡ್ ರೂಂನ ಲಾಕ್ ತೆರೆಯಲು ಯತ್ನಿಸಿದ್ದು ಬೀಗ ಹಾಕಿ ಕೋಣೆಯಲ್ಲಿ ಮಲಗಿದ್ದರಿಂದ ಕಳ್ಳರು ವಿಫಲರಾಗಿದ್ದಾರೆ. ರಾಜೇಶ್ ಬೊಬ್ಬೆ ಹೊಡೆದಾಗ ಇವರ ಮೇಲಿನಮನೆಯಲ್ಲಿದ್ದ ಬಾಡಿಗೆದಾರರು ಎಚ್ಚೆತ್ತು ಕೆಳಗೆ ಬಂದಾಗ ಆಗಂತುಕರು ಪರಾರಿಯಾದರು.ರಾಜೇಶ್ ಹೊರ ಬರುತ್ತಿದ್ದರೆ ದರೋಡೆಗೆ ಯತ್ನಿಸುವ ಸಾಧ್ಯತೆ ಇತ್ತು ಎಂದು ರಾಜೇಶ್ ವಿವರಿಸುತ್ತಾರೆ. ರಾಜೇಶ್ ಅವರ ಕುಟುಂಬದ ಸದಸ್ಯರು ಜಾಸರಗೋಡಿಗೆ ತೆರಳಿದ್ದು, ಮನೆಯಲ್ಲಿ ಒಬ್ಬರೇ ಇದ್ದರು.
ಸ್ಥಳಕ್ಜೆ ಉಳ್ಳಾಲ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ