ಉಳ್ಳಾಲ: ಬೆಂಗಳೂರು ಮೂಲದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
Team Udayavani, Dec 4, 2022, 10:05 PM IST
ಉಳ್ಳಾಲ: ತೊಕ್ಕೊಟ್ಟಿನ ಲಾಡ್ಜ್ ವೊಂದರಲ್ಲಿ ತಂಗಿದ್ದ ಬೆಂಗಳೂರು ಮೂಲದ ಯುವಕನ ಮೃತದೇಹ ಸಮೀಪದ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಹಕಾರದಿಂದ ಮೃತದೇಹ ಮೇಲಕ್ಕೆ ಎತ್ತಲಾಗಿದ್ದು, ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ಮಹಂತೇಶ್ ಎ.ಎಸ್. (36) ಮೃತ ಯುವಕ. ನ. 30ರಂದು ತೊಕ್ಕೊಟ್ಟಿಗೆ ಬಂದಿದ್ದ ಆತ ಲಾಡ್ಜ್ನಲ್ಲಿ ತಂಗಿದ್ದರು. ಆಬಳಿಕ ಹೊರಗೆ ತೆರಳಿದವರು ವಾಪಸಾಗಿರಲಿಲ್ಲ. ಡಿ. 1ರಂದು ಸಂಜೆ ರೂಂಗೆ ಬಂದು ತಪಾಸಣೆ ನಡೆಸಿದಾಗ ಮಹಾಂತೇಶ್ ಇರಲಿಲ್ಲ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಡಿ. 2ರಂದು ಬೆಂಗಳೂರಿನ ಮಹಾಂತೇಶ್ ಸಹೋದರಿ ಉಳ್ಳಾಲ ಠಾಣೆಯಲ್ಲಿ ಸಹೋದರ ನಾಪತ್ತೆ ಕುರಿತು ದೂರು ದಾಖಲಿಸಿದ್ದರು.
ರವಿವಾರ ಮಧ್ಯಾಹ್ನ ಅಬ್ದುಲ್ ಸಮದ್ ಎಂಬವರ ಮನೆಯ ಹಿಂದಿನ ಬಾವಿಯಲ್ಲಿ ಮಹಂತೇಶ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಮದ್ ಮನೆ ಕೆಲಸದಾಕೆ ಸುಗಂಧಿ ಎಂಬವರು ಬಾವಿಯೊಳಗೆ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ನೋಡಿದಾಗ ಅಪರಿಚಿತ ವ್ಯಕ್ತಿಯ ಶವ ಕಂಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬಂದಿ ಮತ್ತು ಉಳ್ಳಾಲ ಪೊಲೀಸರು ಕೊಳೆತ ಶವವನ್ನು ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ