ಅಪೂರ್ಣ ರಸ್ತೆ, ಚರಂಡಿ: ಸಾರ್ವಜನಿಕರಿಗೆ ಸಮಸ್ಯೆ


Team Udayavani, Apr 23, 2018, 12:43 PM IST

23-April-10.jpg

ಉಪ್ಪಿನಂಗಡಿ: ಉಪ್ಪಿನಂಗಡಿ- ಮರ್ದಾಳ ರಾಜ್ಯ ಹೆದ್ದಾರಿಯ ವಿಸ್ತರಣೆ ಕಾಮಗಾರಿ ನಡೆಸುವ ಅವಧಿ ಮುಗಿದರೂ ಹಳೆಗೇಟಿನಿಂದ ಕೊಯಿಲ ತನಕದ ಕಾಮಗಾರಿ ಇನ್ನೂ ಅಪೂರ್ಣವಾಗಿಯೇ ಇದೆ. ಇದೀಗ ಹಳೆಗೇಟಿನ ಬಳಿ ಚರಂಡಿ ಕಾಮಗಾರಿಯನ್ನು ಅರೆ ಬರೆ ಮಾಡಿದ್ದು, ಅಪಾಯಕ್ಕೆ ಎಡೆ ಮಾಡಿಕೊಟ್ಟಿದೆ.

ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಹಳೆಗೇಟು (ಸುಬ್ರಹ್ಮಣ್ಯ ಕ್ರಾಸ್‌) ನಿಂದ ಕೊಯಿಲ ವರೆಗೆ ರಸ್ತೆ ಕಾಮಗಾರಿಗೆ 7.25 ಕೋಟಿ ರೂ. ಅನುದಾನ ಬಿಡುಗಡೆಗೊಂಡಿತ್ತು. 2016ರ ಆಗಸ್ಟ್‌ ನಲ್ಲಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದ್ದರು. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾದರೂ 6 ಕಿ.ಮೀ. ಉದ್ದದ ಈ ಕಾಮಗಾರಿ ಯನ್ನು ಪೂರ್ಣಗೊಳಿಸಲು ಗುತ್ತಿಗೆದಾರ ನಿಗೆ ಸಾಧ್ಯವಾಗಲೇ ಇಲ್ಲ. ಇದೀಗ ಹಳೆಗೇಟುವಿನ ಕಂಚಿಬೆಟ್ಟು ಎಂಬಲ್ಲಿ ರಸ್ತೆ ಬದಿ ಆಳವಾದ ಚರಂಡಿ ಮಾಡಲಾಗಿದ್ದು, ಅದನ್ನು ಅರ್ಧದಲ್ಲಿಯೇ ಬಿಟ್ಟು ಗುತ್ತಿಗೆದಾರರು ನಾಪತ್ತೆಯಾಗಿದ್ದಾರೆ. ಕೆಲವು ಕಡೆ ಚರಂಡಿಗೆ ಕಾಂಕ್ರೀಟ್‌ ಹಾಕಲಾಗಿದ್ದು, ಇನ್ನು ಕೆಲವೆಡೆ ಸರಳುಗಳನ್ನು ಮಾತ್ರ ನಿಲ್ಲಿಸಲಾಗಿದೆ. ಇದು ಅಪಾಯಕ್ಕೆ ಎಡೆ ಮಾಡಿಕೊಟ್ಟಿದೆ.

ನೀರು ಹರಿಯಲು ವ್ಯವಸ್ಥೆಯಿಲ್ಲ
ಚರಂಡಿ ಅಪೂರ್ಣವಾಗಿದ್ದರಿಂದ ನೀರು ಹೋಗಲು ಸರಿಯಾದ ವ್ಯವಸ್ಥೆಯಿಲ್ಲ. 6 ಅಡಿ ಆಳ ಹಾಗೂ 400 ಮೀ. ಉದ್ದದ ಈ ಚರಂಡಿಯನ್ನು ಅಪೂರ್ಣವಾಗಿ ಬಿಟ್ಟಿದ್ದರಿಂದ ಇತ್ತೀಚೆಗೆ ಬಿದ್ದ ಒಂದೆರಡು ಮಳೆಗೆ ಚರಂಡಿಯಲ್ಲಿ ನೀರು ಶೇಖರಣೆಗೊಂಡಿತ್ತು. ಇದು ಜನವಸತಿ ಪ್ರದೇಶವಾಗಿದ್ದು, ಮಕ್ಕಳಿಗೂ ಅಪಾಯಕಾರಿಯಾಗಿದೆ. ಈಗಾಗಲೇ ಕೆಲವು ಮಕ್ಕಳು ಆಟವಾಡುತ್ತ ಚರಂಡಿಯಲ್ಲಿ ಬಿದ್ದು ತರಚು ಗಾಯ ಮಾಡಿಕೊಂಡಿದ್ದೂ ಇದೆ.

ರಸ್ತೆಯೂ ಅಪೂರ್ಣ
ಗುತ್ತಿಗೆದಾರ ಸಂಸ್ಥೆ ಎಂದೋ ಒಮ್ಮೆ ಬಂದು 4-5 ದಿನ ಗಳ ಕೆಲಸ ಮಾಡಿಸುತ್ತಿದೆ. ಹೀಗಾಗಿ, ಚರಂಡಿ ಮಾತ್ರ ಅಲ್ಲ, ರಸ್ತೆಯೂ ಅಪೂರ್ಣವಾಗಿದೆ. ಸುಮಾರು 2 ಕಿ.ಮೀ. ರಸ್ತೆಯನ್ನು ಇನ್ನೂ ನಿರ್ಮಿಸಿಲ್ಲ. ಮೊದಲು ನಿರ್ಮಿಸಿದ ರಸ್ತೆ ಕೆಲವೆಡೆ ಎದ್ದು ಹೋಗಿದೆ. ಆದರೂ ಇದನ್ನು ಪೂರ್ಣಗೊಳಿಸುವಲ್ಲಿ ಸಂಸ್ಥೆ ಮುಂದಾಗುತ್ತಿಲ್ಲ.

ಅಪೂರ್ಣ ಸ್ಥಿತಿಯಲ್ಲಿರುವ ಚರಂಡಿ ಯಲ್ಲಿ ಕಬ್ಬಿಣದ ಸರಳು ಗಳನ್ನು ನಿಲ್ಲಿಸಲಾ ಗಿದ್ದು, ಅವು ಬಾಣದಂತೆ ಬಲಿಗೆ ಕಾಯುತ್ತಿವೆ. ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ. ಅಧಿಕಾರಿಗಳೂ ಈ ಬಗ್ಗೆ ಸ್ಪಂದಿಸುವ ಗೋಜಿಗೆ ಹೋಗುತ್ತಿಲ್ಲ ಎಂದು ಸಾರ್ವಜನಿಕರು ಅಲವತ್ತುಕೊಂಡಿದ್ದಾರೆ.

ಸಮಸ್ಯೆ ಗಮನಕ್ಕೆ ಬಂದಿದೆ
ಇಕ್ಬಾಲ್‌ ಅಹ್ಮದ್‌ ಇನ್‌ಫ್ರಾ ಪ್ರಾಜೆಕ್ಟ್ ಸಂಸ್ಥೆಯ ಶರೀಫ್ ಕನ್‌ಸ್ಟ್ರಕ್ಷನ್‌ ಅವರು ಈ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿದ್ದು, ಕಳೆದ ವರ್ಷವೇ ಇದರ ಗುತ್ತಿಗೆ ಅವಧಿ ಮುಗಿದಿದೆ. ಗುತ್ತಿಗೆದಾರ ಸಂಸ್ಥೆಗೆ ಹಲವು ನೋಟಿಸ್‌ ಗಳನ್ನು ನೀಡಲಾಗಿದೆ. ಆದರೂ ಸರಿಯಾಗಿ ಸ್ಪಂದಿಸದ ಕಾರಣ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳಿಗೆ ಶಿಫಾರಸು ಮಾಡಲಾಗಿದೆ. ಕಾಮಗಾರಿ ಮುಗಿಸುವುದಾಗಿ ಭರವಸೆ ನೀಡಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಅದರಂತೆ ಹೆಚ್ಚು ವರಿ ಅವಧಿ ನೀಡಲಾಗಿದ್ದು, ಮೇ ವರೆಗೆ ಅವಕಾಶವಿದೆ. ಇಲ್ಲಿ ಚರಂಡಿಯನ್ನು ಅಪೂರ್ಣವಾಗಿ ನಿರ್ಮಿಸಿದ್ದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಗುತ್ತಿಗೆದಾರರಿಗೆ ಇದನ್ನು ಶೀಘ್ರ ಮುಗಿಸಲು ಸೂಚಿಸಲಾಗಿದೆ.
ಗೋಕುಲದಾಸ್‌
ಎಕ್ಸಿಕ್ಯೂಟಿವ್‌ ಎಂಜಿನಿಯರ್‌, ಪಿಡಬ್ಲ್ಯೂಡಿ

ಮನವಿಗೆ ಸ್ಪಂದಿಸಿಲ್ಲ
ಇಲ್ಲಿನ ಸಮಸ್ಯೆ ಬಗ್ಗೆ ಗುತ್ತಿಗೆದಾರರಿಗೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೂ ಯಾವುದೇ ಸ್ಪಂದನೆ ದೊರಕಿಲ್ಲ. ಎಂದೋ ಮುಗಿಯಬೇಕಾಗಿದ್ದ ಕಾಮಗಾರಿ ಇನ್ನೂ ಮುಗಿಯದ್ದರಿಂದ ಸಾರ್ವಜನಿಕರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದು, ಇದನ್ನು ಕೇಳುವವರೇ ಇಲ್ಲದಂತಾಗಿದೆ.
– ಇಕ್ಬಾಲ್‌, 
ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

6-uv-fusion

Uv Fusion: ಮೈಮನ ಪುಳಕಿತಗೊಳಿಸುವ ಅಯ್ಯನಕೆರೆ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

5-vijayanagara

Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.