ಅಪೂರ್ಣ ತಾಲೂಕು ಕ್ರೀಡಾಂಗಣ: ಒಳಚರಂಡಿ ದುರ್ವಾಸನೆಗೆ ಜನ ತತ್ತರ

4 (ಶಾಂತಿನಗರ), 5ನೇ (ಹಳೆಗೇಟು) ವಾರ್ಡ್‌: ದಶಕದ ಸವಾಲುಗಳು

Team Udayavani, May 19, 2019, 12:09 PM IST

10

ಸುಳ್ಯ : ನ.ಪಂ.ನ 4 (ಶಾಂತಿನಗರ), 5ನೇ (ಹಳೆಗೇಟು) ವಾರ್ಡ್‌ಗಳು ನಗರ ಮತ್ತು ತಾಲೂಕಿಗೆ ಸಂಬಂಧಿಸಿದ ಎರಡು ಪ್ರಮುಖ ಸಮಸ್ಯೆ ಹೊತ್ತುಕೊಂಡು ದಶ ವರ್ಷಗಳೇ ಕಳೆದಿದೆ. ಒಂದೆಡೆ ನಗರದ ಒಳಚರಂಡಿ ಘಟಕದ ದುರ್ವಾಸನೆ, ಇನ್ನೊಂದೆಡೆ ಪಾಳುಬಿದ್ದಿರುವ ತಾಲೂಕು ಕ್ರೀಡಾಂಗಣ. ಹತ್ತಾರು ವರ್ಷದಿಂದ ಇವೆರೆಡು ಸಮಸ್ಯೆ ಬಗೆಹರಿದಿಲ್ಲ. ನಗರಾಡಳಿತದ ಮೂಲಕ ಸರಕಾರದ ಹಂತದಲ್ಲಿ ಒತ್ತಡ ತಂದು ಇದಕ್ಕೂಂದು ಪರಿಹಾರ ಕಂಡುಕೊಳ್ಳಬೇಕು ಎನ್ನುವುದು ವಾರ್ಡ್‌ನ ಮತದಾರರ ಬೇಡಿಕೆ. ಆ ನಿರೀಕ್ಷೆಯಲ್ಲಿ ಹಕ್ಕು ಚಲಾಯಿಸುತ್ತೇವೆ ಅನ್ನುವುದು ಸ್ಥಳೀಯರ ಅಭಿಮತ.

ಪ್ರಯೋಜನಕ್ಕಿಲ್ಲ ಒಳಚರಂಡಿ ಘಟಕ

ಹಳಗೇಟು ವಾರ್ಡ್‌-5ಕ್ಕೆ ಸೇರಿರುವ ಹೊಸಗದ್ದೆ ಪ್ರದೇಶದಲ್ಲಿ ಒಳ ಚರಂಡಿ ಘಟಕವಿದೆ. ನಗರದಿಂದ ಹರಿದು ಬರುವ ತ್ಯಾಜ್ಯ ನೀರನ್ನು ಮರು ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ 2.87 ಕೋಟಿ ರೂ. ಒಳಚರಂಡಿ ಘಟಕ ಕ್ರಿಯಾಯೋಜನೆಗೆ ಸರಕಾರವು 2001ರ ಜುಲೈ ತಿಂಗಳಲ್ಲಿ ಒಪ್ಪಿಗೆ ನೀಡಿತ್ತು. 2001ರ ನವೆಂಬರ್‌ನಲ್ಲಿ ತಾಂತ್ರಿಕ ಮಂಜೂರಾತಿ ದೊರೆಯಿತು. ಒಳಚರಂಡಿಯಲ್ಲಿ ಹರಿದು ಬರುವ ತ್ಯಾಜ್ಯ ನೀರಿನ ಸಂಸ್ಕರಣೆಗೆ ಹಳೆಗೇಟು ವಾರ್ಡ್‌ನ ಹೊಸಗದ್ದೆ ಬಳಿ  ತ್ಯಾಜ್ಯ ಶುದ್ಧೀಕರಣ ಘಟಕ ಸಾಪಿಸುವವಿಚಾರಕ್ಕೆ ಸ್ಥಳೀಯ ಪರಿಸರದ 300ಕ್ಕೂ

ಅಧಿಕ ಮನೆ ಮಂದಿ ತೀವ್ರ ವಿರೋಧ ವ್ಯಕ್ತಪಡಿಸಿದರು. ಆದರೆ ಪ್ರತಿಭಟನೆ ಲೆಕ್ಕಿಸದೆ ಅಲ್ಲಿ ಘಟಕ ನಿರ್ಮಿಸಲಾಗಿತ್ತು. ಬಾಗಿಲು ಮುಚ್ಚಬೇಕು ಶುದ್ಧಿಕರಣಕ್ಕೆಂದು 6ಕ್ಕಿಂತ ಅಧಿಕ ಬೃಹತ್‌ ಹೊಂಡ ನಿರ್ಮಿಸಲಾಗಿದೆ. ಯೋಜನೆ ಪ್ರಕಾರ ನಗರದ ಎರಡು ವಲಯಗಳಿಂದ ಬರುವ ತ್ಯಾಜ್ಯ ಹೊಂಡದಲ್ಲಿ ಶೇಖರಣೆಯಾಗಿ ಬೇರೆ ಬೇರೆ ಹೊಂಡಕ್ಕೆ ಹರಿದು, ಹಂತ ಹಂತವಾಗಿ ಶುದ್ಧೀಕರಣಗೊಂಡು, ಕೃಷಿ ಚಟುವಟಿಕೆಗೆ ಮರು ಬಳಸುವ ಉದ್ದೇಶವಿತ್ತು. ಆದರೆ ಒಳಚರಂಡಿ ಸಂಪರ್ಕ ಲೋಪದ ಪರಿಣಾಮ ಯಶಸ್ಸು ಕಾಣಲಿಲ್ಲ. ಎರಡು ವಲಯದ ಪೈಕಿ ಕೆಲವೆಡೆ ಸಂಪರ್ಕ ನೀಡಲಾಗಿದೆ. ಆ ತ್ಯಾಜ್ಯದ ಬಹುಪಾಲು ನಗರದೊಳಗೆ ಸೋರಿಕೆ ಆಗುತ್ತಿದೆ. ಅಲ್ಪ ಪ್ರಮಾಣದ ತ್ಯಾಜ್ಯ ನೀರು ಘಟಕದ ಒಂದು ಹೊಂಡಕ್ಕೆ ಬಂದು ಬೀಳುತ್ತಿದೆ. ನಿಯಮಾನುಸಾರ ಆ ತ್ಯಾಜ್ಯ ನೀರನ್ನು ಸಂಸ್ಕರಿಸಬೇಕು. ಆ ವ್ಯವಸ್ಥೆ ಇಲ್ಲದ ಕಾರಣ ದುರ್ವಾಸನೆ ಹಬ್ಬಿ ಮನೆ ಬಾಗಿಲು ಮುಚ್ಚಿಕೊಂಡೇ ದಿನ ಕಳೆಯಬೇಕು ಎನ್ನುತ್ತಾರೆ ಈ ವಾರ್ಡ್‌ ನಿವಾಸಿಗರು.

ಅಪೂರ್ಣ ತಾಲೂಕು ಕ್ರೀಡಾಂಗಣ
ಶಾಂತಿನಗರ 4ನೇ ಮತ್ತು ಹಳೆಗೇಟು 5ನೇ ವಾರ್ಡ್‌ ವ್ಯಾಪ್ತಿಯ ಶಾಂತಿನಗರದಲ್ಲಿ ಹದಿಮೂರು ವರ್ಷದ ಹಿಂದೆ 5.85 ಎಕ್ರೆ ಪ್ರದೇಶದಲ್ಲಿ 60 ಲಕ್ಷ ರೂ. ವ್ಯಯಿಸಿ ನಿರ್ಮಿಸಲು ಉದ್ದೇಶಿಸಿದ್ದ ತಾಲೂಕು ಕ್ರೀಡಾಂಗಣ ಪಾಳು ಬಿದ್ದಿದೆ. 60 ಲಕ್ಷ ರೂ. ಖರ್ಚಾದ ಅನಂತರ ಕಾಮಗಾರಿ ಮುಂದುವರಿಯಲಿಲ್ಲ. ಇದಕ್ಕೆ ಕಾರಣ, ಅನುದಾನದ ಕೊರತೆ. ಹಾಗಾಗಿ ಪ್ರಥಮ ಹಂತದ ಕಾಮಗಾರಿಯಲ್ಲಿ ಸುಸ್ತಾದ ಈ ಕ್ರೀಡಾಂಗಣ ಅಕ್ಷರಶಃ ಪಾಳು ಬಿದ್ದಿದೆ. ಪರಿಣಾಮ ಲಕ್ಷಾಂತರ ರೂ. ತೆರಿಗೆ ಹಣ ಪೋಲಾಗಿದೆ. ಎರಡು ಕಟ್ಟಡಗಳು ಪಾಳು ಬಿದ್ದಿದ್ದು, ಕಿಟಕಿ ಗಾಜು ಒಡೆದು ಹೋಗಿವೆ. ಶೌಚಾಲಯದ ಬಾಗಿಲು ಸಾಮಗ್ರಿಗಳು ಒಡೆದು ಹೋಗಿವೆ. ಸೂಕ್ತ ರಕ್ಷಣೆ ಇಲ್ಲದ ಕಾರಣ ರಾತ್ರಿ ವೇಳೆ ಇಲ್ಲಿ ಅನೈತಿಕ ವ್ಯವಹಾರಗಳು ನಡೆಯುತ್ತಿವೆ ಎನ್ನುವುದು ಸ್ಥಳೀಯರ ಆರೋಪವಾಗಿದೆ. ಉಳಿದಂತೆ ಈ ಎರಡು ವಾರ್ಡ್‌ಗಳಲ್ಲಿ ರಸ್ತೆ, ನೀರು, ತಂಗುದಾಣ, ತ್ಯಾಜ್ಯ ಮೊದಲಾದ ಸಮಸ್ಯೆಗಳು ಇವೆ. ಇದನ್ನು ಬಗೆಹರಿಸುವುದು ಕಷ್ಟವೇನೂ ಅಲ್ಲ.

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.