ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಗಣನೀಯ ಏರಿಕೆ !


Team Udayavani, Aug 5, 2021, 8:10 AM IST

Untitled-1

ಸಾಂದರ್ಭಿಕ ಚಿತ್ರ

ಮಹಾನಗರ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಗಣನೀಯ ಏರಿಕೆ ಕಂಡಿದ್ದು ಲಾಕ್‌ಡೌನ್‌ ದಿನಗಳಲ್ಲಿ ಇಂಥ ಕೃತ್ಯ ಹೆಚ್ಚಾಗಿ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ (ಪೋಕ್ಸೋ) ತನಿಖೆ ನಡೆಸುವ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯ ಮಹಿಳಾ ಪೊಲೀಸ್‌ ಠಾಣೆಯಲ್ಲಿ 2 ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬಹುತೇಕ ಪ್ರಕರಣಗಳಲ್ಲಿ ಆರೋಪಿಗಳ ಬಂಧನವಾಗಿದ್ದು, ಅನೇಕ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇವೆ.

6 ತಿಂಗಳುಗಳಲ್ಲಿ 16 ಪ್ರಕರಣ: 

ಮಂಗಳೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ 2019ರ ಜ. 1ರಿಂದ ಡಿ. 31ರ ವರೆಗೆ 11 ಪೊಕೊÕà ಪ್ರಕರಣಗಳು, 2020ರ ಜ. 1ರಿಂದ ಡಿ. 31ರವರೆಗೆ 14 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದರೆ ಈ ವರ್ಷ ಕೇವಲ ಆರು ತಿಂಗಳಲ್ಲೇ 16 ಪೋಕ್ಸೋ ಪ್ರಕರಣಗಳು ದಾಖಲಾಗಿವೆ.

ಬಾಲಕಿಯರ ಸಂಖ್ಯೆ ಅಧಿಕ :

18 ವರ್ಷದೊಳಗಿನ ಯಾವುದೇ ಮಕ್ಕಳ ಮೇಲೆ ದೌರ್ಜನ್ಯ ಎಸಗಿದರೆ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗುತ್ತದೆ. ಮಹಿಳಾ ಪೊಲೀಸ್‌ ಠಾಣೆಯಲ್ಲಿ ಮೂರು ವರ್ಷಗಳಲ್ಲಿ ದಾಖಲಾದ ಪೋಕ್ಸೋ ಪ್ರಕರಣಗಳಲ್ಲಿ 38 ಮಂದಿ ಬಾಲಕಿಯರು ದೌರ್ಜನ್ಯಕ್ಕೊಳಗಾದವರು. ಇಬ್ಬರು ಬಾಲಕರು ಇದ್ದಾರೆ. ಇದರಲ್ಲಿ ಸಂತ್ರಸ್ತ ಮಕ್ಕಳೆಲ್ಲರೂ ದ.ಕ ಜಿಲ್ಲೆಯವರೇ ಎಂಬುದು ಕೂಡ ಗಮನಾರ್ಹ.

ಜಾಗೃತಿಯೂ ಹೆಚ್ಚಳ:

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಬೆಳಕಿಗೆ ಬರುತ್ತಿವೆ. ಇಂತಹ ಕೃತ್ಯಗಳು ಹೆಚ್ಚುತ್ತಿರುವ ಸಾಧ್ಯತೆ ಇದೆ. ಆದರೆ ಜನರಲ್ಲಿ ಇಂತಹ ಪ್ರಕರಣಗಳ ಬಗ್ಗೆ ಜಾಗೃತಿ ಮೂಡಿರುವುದರಿಂದ ದೂರು ದಾಖಲಾಗುತ್ತಿದೆ. ಅಪರಾಧಿಗಳಿಗೆ ಶಿಕ್ಷೆ ಯಾಗುತ್ತಿದೆ. ಕೆಲವು ಪ್ರಕರಣಗಳಲ್ಲಿ ಬಾಲಪರಾಧಿಗಳು ಕೂಡ ಇದ್ದಾರೆ. ಅಂತೆಯೇ ಕಾಯಿದೆಯ ದುರು ಪಯೋಗ ವಾಗದಂತೆ ನೋಡಿಕೊಳ್ಳುವುದು ಕೂಡ ಅಗತ್ಯವಾಗಿರುತ್ತದೆ ಎನ್ನುತ್ತಾರೆ ಪೊಕೊÕà ಪ್ರಕರಣ ಗಳನ್ನು ನಿರ್ವಹಿಸುತ್ತಿರುವ ಪೊಲೀಸ್‌ ಅಧಿಕಾರಿಗಳು.

ಹೆತ್ತವರೇ ಎಚ್ಚರ :

ಅನೇಕ ಸಂದರ್ಭಗಳಲ್ಲಿ ಬಾಲಕರು, ಬಾಲಕಿಯರು ಏನೂ ಅರಿಯದೆ ಲೈಂಗಿಕ ದೌರ್ಜನ್ಯಕ್ಕೆ ಒಳಪಡುತ್ತಾರೆ. ಇನ್ನು ಕೆಲವೊಮ್ಮೆ ಕುತೂಹಲ, ಸ್ವಯಂ ಆಸಕ್ತಿಯಿಂದ ಇಂತಹ ಕೃತ್ಯದಲ್ಲಿ ತೊಡಗಿ ಆರೋಪಿಗಳಿಗೆ ಸಹಕರಿಸುವ ಅಪಾ ಯಗಳೂ ಇರುತ್ತವೆ. ಹಾಗಾಗಿ ಹೆತ್ತವರು ಮಕ್ಕಳ ಪ್ರತಿಯೊಂದು ನಡವಳಿಕೆ, ಚಟುವಟಿಕೆ ಬಗ್ಗೆಯೂ ಹೆಚ್ಚು ಕಾಳಜಿ ವಹಿಸುವುದು ಅಗತ್ಯ ಎನ್ನುತ್ತಾರೆ ಮಾನಸಿಕ ಆರೋಗ್ಯ ತಜ್ಞರು.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಅನೇಕ ಕಾರಣಗಳಿವೆ. ಇದರಲ್ಲಿ ಲಾಕ್‌ಡೌನ್‌ ಕೂಡ ಒಂದು ಕಾರಣವಾಗಿರುವ ಸಾಧ್ಯತೆ ಇದೆ. ಸಂಬಂಧಿಕರಿಂದಲೇ ದೌರ್ಜನ್ಯ ನಡೆದಿರುವ ಪ್ರಕರಣಗಳೂ ಇವೆ. ಲಾಕ್‌ಡೌನ್‌ ಸಂದರ್ಭ ಮನೆಯಲ್ಲೇ ಇದ್ದು ಮಾನಸಿಕವಾಗಿ ದುರ್ಬಲರಾಗಿ, ಅತಿಯಾದ ಮದ್ಯಸೇವನೆ ಮಾಡಿದ ಸಂಬಂಧಿಕರು, ತೀರಾ ಪರಿಚಿತರೇ ಇಂಥ ಕೃತ್ಯ ನಡೆಸಿರುವುದು ವರದಿಯಾಗಿದೆ. ಜತೆಗೆ ಮಕ್ಕಳು ಮೊಬೈಲ್‌ನಲ್ಲಿ ಅಂತರ್ಜಾಲ ಮೂಲಕ ಅಶ್ಲೀಲ ಚಿತ್ರ, ದೃಶ್ಯಗಳನ್ನು ವೀಕ್ಷಿಸಿ ಕುತೂಹಲ ಉಂಟಾಗಿ ಅದು ಅವರನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವವರೆಗೂ ಕೊಂಡೊಯ್ದಿರುವ ಸಾಧ್ಯತೆಗಳೂ ಇವೆ. ಹಾಗಾಗಿ ಮಕ್ಕಳು ಶೈಕ್ಷಣಿಕ ಅಥವಾ ಇನ್ನಿತರ ಉದ್ದೇಶಕ್ಕೆ ಆನ್‌ಲೈನ್‌ ಬಳಕೆ ಮಾಡುವಾಗ ಅದರ ಮೇಲೆ ಹೆತ್ತವರು ನಿಗಾ, ನಿಯಂತ್ರಣ ಹೊಂದಿರುವುದು ಅಗತ್ಯ.  –ಡಾ| ರಮಿಳಾ ಶೇಖರ್‌,

ಮಾನಸಿಕ ಆರೋಗ್ಯತಜ್ಞೆ 

ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾದರೆ ಅವರ ಇಡೀ ಬದುಕು ಕತ್ತಲಾಗುವ ಅಪಾಯ ವಿರುತ್ತದೆ. ಅದು ದೇಶದ ಮಾನವ ಸಂಪನ್ಮೂಲದ ಮೇಲೆ ಪ್ರಭಾವ ಬೀರುತ್ತದೆ. ಹಾಗಾಗಿ ಸರಕಾರವು ವಿಶ್ವದಲ್ಲೇ ಕಠಿನವೆನಿಸಿದ ಪೋಕ್ಸೋ ಕಾಯಿದೆಯನ್ನು ಜಾರಿಗೆ ತಂದಿದ್ದು, ಈ ಕಾಯ್ದೆಯಡಿ ಅಪರಾಧಿಗಳಿಗೆ ಗರಿಷ್ಠ ಜೀವಾವಧಿ ಕಠಿನ ಕಾರಾ ಗೃಹ, ಮರಣದಂಡನೆ ಶಿಕ್ಷೆ ವಿಧಿಸಲು ಕೂಡ ಅವಕಾಶವಿದೆ. -ವಿಜಯ ವಾಸು ಪೂಜಾರಿ, ನ್ಯಾಯವಾದಿ

 

-ಸಂತೋಷ್‌ ಬೊಳ್ಳೆಟ್ಟು

 

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.