ಮನೆಹಾನಿ ಪರಿಹಾರ ಮೊತ್ತದಲ್ಲಿ ಏರಿಕೆ: ಸಚಿವ ಆರ್‌. ಅಶೋಕ್‌


Team Udayavani, Jul 8, 2022, 6:30 AM IST

ಮನೆಹಾನಿ ಪರಿಹಾರ ಮೊತ್ತದಲ್ಲಿ ಏರಿಕೆ: ಸಚಿವ ಆರ್‌. ಅಶೋಕ್‌

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಳೆಯಿಂದ ಪೂರ್ತಿ ಹಾನಿಗೊಂಡ ಮನೆಗೆ 5 ಲಕ್ಷ ರೂ. ಹಾಗೂ ಶೇ. 50ರಷ್ಟು ಹಾನಿಯಾಗಿರುವ ಮನೆಗಳಿಗೆ 3 ಲಕ್ಷ ರೂ.ನಷ್ಟು ಮೊತ್ತವನ್ನು ಪರಿಹಾರವಾಗಿ ನೀಡಲಾಗುವುದು. ಈ ಕುರಿತ ಪರಿಷ್ಕೃತ ಆದೇಶವನ್ನು ಶುಕ್ರವಾರ ಬೆಂಗಳೂರಿನಲ್ಲಿ ಹೊರಡಿಸಲಾಗುವುದು ಎಂದು ಕಂದಾಯ ಖಾತೆ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ.

ದ.ಕ. ಜಿಲ್ಲೆಯ ಮಳೆಹಾನಿ ಹಾಗೂ ಪ್ರಾಕೃತಿಕ ವಿಕೋಪಗಳ ಕುರಿತು ಇಲ್ಲಿನ ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ಗುರುವಾರ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಪೂರ್ತಿ ಹಾನಿಯಾದ ಮನೆಗೆ 5 ಲಕ್ಷ ರೂ, ಶೇ. 50ರಷ್ಟು ಹಾನಿಯಾದರೆ 3 ಲಕ್ಷ ರೂ. ಹಾಗೂ ಭಾಗಶಃ ಹಾನಿಯಾದರೆ 50 ಸಾವಿರ ರೂ., ಮನೆಗೆ ನೀರು ನುಗ್ಗಿದರೆ 10 ಸಾವಿರ ರೂ. ನೀಡಬೇಕು. ಅದರಲ್ಲಿ 50 ಸಾವಿರ ರೂ. ಹಾಗೂ 10 ಸಾವಿರ ರೂ. ಮೊತ್ತವನ್ನು ಏಕಗಂಟಿನಲ್ಲಿ ಕೊಡಬೇಕು ಹಾಗೂ ಇತರ ಮೊತ್ತವನ್ನು ಕಂತುಗಳಲ್ಲಿ ಕೊಡಬೇಕು. ಮೂರು ದಿನದೊಳಗೆ ಪರಿಹಾರ ನೀಡುವ ಮೂಲಕ ಜನರ ಕಷ್ಟದ ಸಂದರ್ಭದಲ್ಲಿ ನೆರವಾಗುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಿರಾಶ್ರಿತರ ಆರೋಗ್ಯಕ್ಕೆ ಪೂರಕವಾಗಿ ಅನ್ನ, ಸಾಂಬಾರ್‌, ಪಲ್ಯ ಎಲ್ಲ ಕೊಡಬೇಕು, ಬಟ್ಟೆಬರೆ ಬೇಕಾದರೆ ಕೊಡಿ. ಅವರ ಎಲ್ಲ ವಸ್ತುಗಳೂ ಹಾಳಾಗಿರುತ್ತವೆ. ಹಾಗಾಗಿ ಅಗತ್ಯವಿರುವುದನ್ನು ಒದಗಿಸಿಕೊಡಬೇಕು ಎಂದು ಸೂಚಿಸಿದರು.

ಕಡಲ್ಕೊರೆತಕ್ಕೆ ಪರಿಹಾರ :

ಕಡಲ್ಕೊರೆತ ಹಾನಿಗೆ ದೊಡ್ಡ ಮೊತ್ತ ಬೇಕಾಗಬಹುದು, ಈ ಬಗ್ಗೆ ಸಿಎಂ ಜತೆಗೆ ಮಾತನಾಡೋಣ, ಈ ಭಾಗದ ಶಾಸಕರೂ ಬನ್ನಿ ಎಂದು ತಿಳಿಸಿದರು.

ಬೆಳೆಹಾನಿಗೆ ಪರಿಹಾರವನ್ನು ಕೂಡಲೇ ಕೊಡಲಾಗುವುದು. ಎಲ್ಲ ಅಧಿಕಾರಿಗಳು ಸಮರೋಪಾದಿ ಯಲ್ಲಿ ಕೆಲಸ ಮಾಡಿ. ಬೇಕಾದ ಉಪಕರಣ ಖರೀದಿಸುವುದಕ್ಕೂ ಅನುದಾನ ನೀಡಲಾಗುವುದು ಎಂದರು.

ಸಚಿವ ವಿ. ಸುನಿಲ್‌ ಕುಮಾರ್‌ ಮಾತನಾಡಿ, ಮಳೆ – ಹವಾಮಾನ ಪರಿಸ್ಥಿತಿ ಪರಿಶೀಲಿಸಿ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಚಿವ ಎಸ್‌. ಅಂಗಾರ ಮಾತನಾಡಿ, ಕಡಲ್ಕೊರೆತ ತಡೆಗೆ ಎಡಿಬಿಯಿಂದ ನಿರ್ವಹಿಸಿದ ಕಾಮಗಾರಿಗಳ ಬಗ್ಗೆ ತನಿಖೆಗೆ ಸೂಚಿಸಲಾಗಿದೆ, ವರದಿ ಬಂದ ಅನಂತರ ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಮೇಯರ್‌ ಪ್ರೇಮಾನಂದ ಶೆಟ್ಟಿ, ಡಿ.ಸಿ. ಡಾ| ರಾಜೇಂದ್ರ ಕೆ.ವಿ., ಮಂಗಳೂರು ಸ್ಮಾರ್ಟ್‌ ಸಿಟಿ ಎಂ.ಡಿ. ಪ್ರಶಾಂತ್‌ ಮಿಶ್ರ, ಪೊಲೀಸ್‌ ಆಯುಕ್ತ ಶಶಿಕುಮಾರ್‌, ಜಿ.ಪಂ. ಸಿಇಒ ಡಾ| ಕುಮಾರ್‌, ಎಸ್ಪಿ ಹೃಷಿಕೇಶ್‌ ಸೋನಾವಣೆ ಹಾಜರಿದ್ದರು. ಶಾಸಕರಾದ ವೇದವ್ಯಾಸ ಕಾಮತ್‌, ರಾಜೇಶ್‌ ನಾಯಕ್‌, ಯು.ಟಿ. ಖಾದರ್‌, ಹರೀಶ್‌ ಪೂಂಜ, ಡಾ| ಭರತ್‌ ಶೆಟ್ಟಿ, ಪ್ರತಾಪ್‌ ಸಿಂಹ ನಾಯಕ್‌ ಇದ್ದರು.

ಭೂಕಂಪ: ಭೀತಿ ಬೇಡ :

ಘಟ್ಟ ಪ್ರದೇಶದಲ್ಲಿ ಸಾಮಾನ್ಯವಾಗಿ ಭೂಕುಸಿತ ಆಗುತ್ತಿದೆ, ಸುಳ್ಯ ಸಂಪಾಜೆ ಭಾಗದಲ್ಲಿ ಮೊನ್ನೆ ಲಘು ಭೂಕಂಪ ಆಗಿದೆ, ಇದಕ್ಕೆ ಯಾವುದೇ ಭೀತಿ ಪಡಬೇಕಾಗಿಲ್ಲ, ಇದು 3.1ರಷ್ಟು ತೀವ್ರತೆಯ ಭೂಕಂಪವಷ್ಟೇ ಎಂದು ಸಚಿವ ಅಶೋಕ್‌ ತಿಳಿಸಿದರು.

ಇಲ್ಲಿ  7 ಬಾರಿ ಭೂಕಂಪವಾಗಿದ್ದು ಹೈದರಾಬಾದ್‌, ಬೆಂಗಳೂರಿನ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಳೆ ಬಂದು ಭೂಮಿ ಒಳಗಿನ ಪದರ ಮೇಲೆ ನೀರು ಸೇರಿಕೊಂಡು ಇದು ಆಗುತ್ತಿದೆ. ಈ ಕುರಿತು ನಿಗಾ ಇರಿಸಲು ಸೂಚನೆ ನೀಡಿದ್ದೇನೆ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.