ಕಳವು ಕೃತ್ಯ ಹೆಚ್ಚಳ: ಮೂರು ತಿಂಗಳುಗಳಲ್ಲಿ 94 ಪ್ರಕರಣ


Team Udayavani, Oct 30, 2020, 5:12 AM IST

ಕಳವು ಕೃತ್ಯ ಹೆಚ್ಚಳ: ಮೂರು ತಿಂಗಳುಗಳಲ್ಲಿ 94 ಪ್ರಕರಣ

ಸಾಂದರ್ಭಿಕ ಚಿತ್ರ

ಮಹಾನಗರ: ಕೊರೊನೋತ್ತರ ಅವಧಿಯಲ್ಲಿ ಮಂಗಳೂರು ನಗರ ಸಹಿತ ದ.ಕ., ಉಡುಪಿ ಜಿಲ್ಲೆಗಳಲ್ಲಿ ಕಳ್ಳತನ ಮತ್ತು ಸುಲಿಗೆ ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ, ಬೆಳಗ್ಗೆ ಮತ್ತು ಸಂಜೆ ವೇಳೆ ವಾಕಿಂಗ್‌ ಹೋಗುವಾಗ, ಜನರ ಓಡಾಟ ಕಡಿಮೆ ಇರುವ ಪ್ರದೇಶಗಳಲ್ಲಿ, ಒಂಟಿಯಾಗಿ ಮಹಿಳೆ ಸಂಚರಿಸುವಾಗ ಸರ ಕಳ್ಳತನ, ಮೊಬೈಲ್‌ ಫೋನ್‌ ಕಳವು, ರಾತ್ರಿ ವೇಳೆ ಪೆಟ್ರೋಲ್‌ ಪಂಪ್‌ ಕಚೇರಿಗೆ ನುಗ್ಗಿ ಸುಲಿಗೆ, ಒಂಟಿ ಮಹಿಳೆ ಇರುವ ಮನೆಗೆ ನುಗ್ಗಿ ಸುಲಿಗೆ, ಕೊಲೆ ಇತ್ಯಾದಿ ಪ್ರಕರಣಗಳು ಅಲ್ಲಲ್ಲಿ ಆಗಿಂದಾಗ್ಗೆ ವರದಿಯಾಗುತ್ತಿವೆ.

2020ರ 10 ತಿಂಗಳುಗಳ ಅವಧಿಯಲ್ಲಿ (ಜನವರಿಯಿಂದ ಅಕ್ಟೋಬರ್‌ 14ರ ತನಕ) ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ 234 ವಿವಿಧ ಕಳವು ಪ್ರಕರಣಗಳು ನಡೆದಿವೆ. ಈ ಪೈಕಿ ಕೊರೊ ನೋತ್ತರ ಅವಧಿಯ ಜುಲೈ, ಆಗಸ್ಟ್‌, ಸೆಪ್ಟಂಬರ್‌ ತಿಂಗಳುಗಳಲ್ಲಿ ಅಧಿಕ ಸಂಖ್ಯೆಯ ಕಳ್ಳತನಗಳು ವರದಿಯಾಗಿವೆ. ಜುಲೈನಲ್ಲಿ 24, ಆಗಸ್ಟ್‌ನಲ್ಲಿ 37, ಸೆಪ್ಟಂಬರ್‌ನಲ್ಲಿ 33 ಕಳವು ಪ್ರಕರಣ ಸಹಿತ ಕೇವಲ 3 ತಿಂಗಳುಗಳಲ್ಲಿ 94 ಪ್ರಕರಣಗಳು ನಡೆದ ಬಗ್ಗೆ ಪೊಲೀಸ್‌ ಕಮಿಷನರೆಟ್‌ನ ಅಂಕಿ ಅಂಶಗಳು ತಿಳಿಸಿವೆ. ಲಾಕ್‌ಡೌನ್‌ ಬಳಿಕ ಉಂಟಾದ ನಿರುದ್ಯೋಗ ಮತ್ತು ತತ್ಸಂಬಂಧಿತ ಅಂಶಗಳು ಕಳವು ಪ್ರಕರಣ ಹೆಚ್ಚಲು ಕಾರಣ ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ. “ಕೊರೊನಾದಿಂದಾಗಿ ಅನೇಕ ಮಂದಿ ಉದ್ಯೋಗ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹಾಗಾಗಿ ಕೆಲವರು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಸಾಧ್ಯತೆ ಇದೆ ಎಂದು ಓರ್ವ ಹಿರಿಯ ಪೊಲೀಸ್‌ ಅಧಿಕಾರಿ ಉದಯವಾಣಿಗೆ ತಿಳಿಸಿದ್ದಾರೆ. “ದೊಡ್ಡ ಮಟ್ಟದ ಕಳವು ಪ್ರಕರಣಗಳು ಇಲ್ಲದಿದ್ದರೂ ಸಣ್ಣ ಪುಟ್ಟ ಕಳ್ಳತನಗಳು ಅಲ್ಲಲ್ಲಿ ನಡೆಯುತ್ತಿವೆ. ಕಳ್ಳರಿಗೆ ಈಗ ಎಷ್ಟು ಸಿಕ್ಕಿದರೂ ಸಾಕು ಎಂಬಂತೆ ಕೈಗೆ ಸಿಕ್ಕಿದಷ್ಟನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಆದ್ದರಿಂದ ಜನರು ವಿಶೇಷ ಜಾಗೃತರಾಗಿ ಇರಬೇಕು’ ಎಂದವರು ಸಲಹೆ ಮಾಡಿದ್ದಾರೆ.

ಕಾರ್ಯಾಚರಣೆ ಬಿಗಿ
ಇತ್ತೀಚೆಗೆ ಅಲ್ಲಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಹಾಗಾಗಿ ರಾತ್ರಿ ವೇಳೆ ಪೊಲೀಸ್‌ ಕಾರ್ಯಾಚರಣೆಯನ್ನು ಬಿಗಿಗೊಳಿಸಲಾಗಿದೆ. ಕೋವಿಡ್ ಸೋಂಕಿದ ಪೊಲೀಸರಲ್ಲಿ ಈಗ ಬಹುತೇಕ ಮಂದಿ ಗುಣಮುಖರಾಗಿ ಕರ್ತವ್ಯಕ್ಕೆ ಮರಳಿದ್ದಾರೆ. 253 ಮಂದಿ ಪೊಲೀಸರಿಗೆ ಕೊರೊನಾ ವೈರಸ್‌ ಸೋಂಕಿದ್ದು, ಸುಮಾರು 20 ಮಂದಿ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದವರೆಲ್ಲರೂ ಬಿಡುಗಡೆ ಆಗಿದ್ದಾರೆ. ಗಸ್ತು ಕಾರ್ಯಕ್ಕೆ ಯುವ ಪೊಲೀಸರನ್ನೇ ಅಧಿಕ ಸಂಖ್ಯೆಯಲ್ಲಿ ನಿಯೋಜನೆ ಮಾಡಲಾಗಿದೆ. ಈಗಾಗಲೇ ಕೆಲವು ಕಳವು ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸಲಾಗಿದೆ.
– ವಿನಯ್‌ ಎ. ಗಾಂವ್‌ಕರ್‌, ಡಿಸಿಪಿ

ಕಳವು ಪ್ರಕರಣಗಳ ವಿವರ
ಜನವರಿ 35
ಫೆಬ್ರವರಿ 25
ಮಾರ್ಚ್‌ 20
ಎಪ್ರಿಲ್‌ 7
ಮೇ 19
ಜೂನ್‌ 23
ಜುಲೈ 24
ಆಗಸ್ಟ್‌ 37
ಸೆಪ್ಟಂಬರ್‌ 33
ಅಕ್ಟೋಬರ್‌11
(ಅ. 14 ರ ತನಕ)
ಒಟ್ಟು 234

ಜನರಿಗೆ ಪೊಲೀಸರ ಸಲಹೆ
– ಜನರು ಹಣ, ಚಿನ್ನಾಭರಣಗಳನ್ನು ಲಾಕರ್‌ನಲ್ಲಿ ಇರಿಸಬೇಕು.
– ಮನೆ ಬಿಟ್ಟು ಹೋಗುವಾಗ ಸ್ಥಳೀಯ ಪೊಲೀಸ್‌ ಠಾಣೆಗೆ ತಿಳಿಸುವುದು.
– ಮನೆಯ ಬಾಗಿಲು, ಗ್ರಿಲ್ಸ್‌ಗಳನ್ನು ಭದ್ರ ಪಡಿಸುವುದು.
– ಮನೆಯಲ್ಲಿ ಅಗತ್ಯಕ್ಕೆ ಬೇಕಾದಷ್ಟು ನಗದನ್ನು ಮಾತ್ರ ಇರಿಸುವುದು.
– ಅಪರಿಚಿತರು ಮನೆ ಸುತ್ತ ಸುಳಿದಾಡುತ್ತಿದ್ದರೆ ಪೊಲೀಸರಿಗೆ ಮಾಹಿತಿ ನೀಡಿ
– ಸ್ಥಿತಿವಂತರು ಮನೆಗೆ ಸೈರನ್‌/ಅಲರಾಂ/ ಸಿ.ಸಿ. ಕೆಮರಾ ಅಳವಡಿಸುವುದು.
– ವಾಕಿಂಗ್‌/ ಜಾಗಿಂಗ್‌ ಹೋಗುವಾಗ ಚಿನ್ನಾಭರಣ ಧರಿಸದಿರುವುದು.
– ಬೈಕ್‌/ ಸ್ಕೂಟರ್‌ಗಳನ್ನು ಲಾಕ್‌ ಮಾಡಿ ಇಡುವುದು.
– ಮನೆ ಕೆಲಸದವರು ಇದ್ದರೆ ಅವರ ವಿಳಾಸ, ಹಿನ್ನೆಲೆ ತಿಳಿದುಕೊಂಡಿರುವುದು.
– ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರೆ ಸ್ಥಳೀಯ ಪೊಲೀಸ್‌ ಠಾಣೆಗೆ ಮುಂಚಿತವಾಗಿ ಮಾಹಿತಿ ನೀಡುವುದು.
– ಸಾಧ್ಯವಾದರೆ ಅಂಗಡಿ/ ವ್ಯಾಪಾರ ಮಳಿಗೆಗಳನ್ನು ರಾತ್ರಿ ವೇಳೆ ತೆರೆದಿಡುವುದನ್ನು ನಿಲ್ಲಿಸಿದರೆ ಒಳಿತು.

ಜಾಗೃತರಾಗಿ
ಖಾಲಿ ಇರುವ ಮನೆಗಳು, ಅಪಾರ್ಟ್‌ ಮೆಂಟ್‌, ಒಂಟಿ ಮನೆಗಳನ್ನು ಕೇಂದ್ರವಾಗಿರಿಸಿ ಕಳವು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಿ. ಮುಖ್ಯವಾಗಿ ಮನೆ, ಅಪಾರ್ಟ್‌ ಮೆಂಟ್‌ನಿಂದ ಬಹಳಷ್ಟು ದಿನಗಳವರೆಗೆ ದೂರ ಪ್ರವಾಸ ಹೋಗುವ ಸಂದರ್ಭ ಸಂಬಂಧಪಟ್ಟ ಪೊಲೀಸ್‌ ಠಾಣೆ, ಬೀಟ್‌ ಪೊಲೀಸರಿಗೆ ಸೂಚನೆ ನೀಡಬೇಕು. ಆ ಮನೆಯ ಮೇಲೆ ಪೊಲೀಸರು ವಿಶೇಷ ನಿಗಾ ಇರಿಸಲಿದ್ದಾರೆ. ಮಾತ್ರವಲ್ಲದೆ ಅಪಾರ್ಟ್‌ಮೆಂಟ್‌ ವಾಚ್‌ಮೆನ್‌ಗೂ ಮಾಹಿತಿ ನೀಡಬೇಕು.
– ವಿಕಾಸ್‌ ಕುಮಾರ್‌, ಪೊಲೀಸ್‌ ಕಮಿಷನರ್‌

 ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.