ಪ್ರತಿಯೋರ್ವರು ಸ್ವತ್ಛತೆ ಕಾಪಾಡಿ ದೇಶದ ಗೌರವ ಹೆಚ್ಚಿಸಿ: ಕೃಷ್ಣ ಹೆಬ್ಟಾರ್‌


Team Udayavani, Sep 24, 2019, 5:11 AM IST

krishna-hebbar

ಕುಳಾಯಿ: ಸ್ವತ್ಛತೆ ಪ್ರತಿ ಮನೆಗಳಲ್ಲೂ ಇರಲಿ. ತನ್ಮೂಲಕ ದೇಶಕ್ಕೆ ಪ್ರತಿಯೋರ್ವ ನಾಗರಿಕನೂ ತನ್ನ ಬದ್ಧತೆಯನ್ನು ತೋರಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರತಿಯೋರ್ವ ನಾಗರಿಕನೂ ಸಂಘ ಸಂಸ್ಥೆಗಳೂ ಸ್ವತ್ಛತಾ ಅಭಿಯಾನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡುತ್ತಿರುವ ನಮ್ಮ ದೇಶವು ಸ್ವತ್ಛತೆಯನ್ನು ಕಾಪಾಡಿಕೊಂಡಲ್ಲಿ ದೇಶದ ಗೌರವವು ಹೆಚ್ಚುವುದು ಹಾಗೂ ಪ್ರವಾಸೋದ್ಯಮದ ಬೆಳವಣಿಗೆಗೆ ವಿಪುಲವಾದ ಅವಕಾಶಗಳಾಗುವುದೆಂದು ಕುಳಾಯಿ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರ ಕೃಷ್ಣ ಹೆಬ್ಟಾರ್‌ ಹೇಳಿದರು. ಅವರು ರಾಮಕೃಷ್ಣ ಮಿಷನ್‌ ಮಂಗಳೂರು, ನಾಗರಿಕ ಸಲಹಾ ಸಮಿತಿ ಸುರತ್ಕಲ್‌ ಹಾಗೂ ಇತರ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಎಂ.ಆರ್‌.ಪಿ.ಎಲ್‌. ನೆರವಿನೊಂದಿಗೆ ನಡೆಯುವ ರಾಮಕೃಷ್ಣ ಮಿಷನ್‌ ಸ್ವತ್ಛ ಸುರತ್ಕಲ್‌ ಅಭಿಯಾನದ 48ನೇ ವಾರದ ಸ್ವತ್ಛತಾ ಶ್ರಮದಾನವನ್ನು ಕುಳಾಯಿ ಪರಿಸರದಲ್ಲಿ ಉದ್ಘಾಟಿಸಿ ಮಾತನಾಡಿದರು.

ಮಾಜಿ ಮೇಯರ್‌ ಹಾಗೂ ಮಾಜಿ ಮನಪಾ ಸದಸ್ಯ ಗಣೇಶ್‌ ಹೊಸಬೆಟ್ಟು ಮಾತನಾಡಿ ಮುಂದಿನ ದಿನಗಳಲ್ಲಿ ಕಸದ ವಿಲೇವಾರಿಗೆ ಹೊಸ ವಿಧಾನಗಳು ಬರಲಿದ್ದು ಕಸವನ್ನು ಸ್ಥಳೀಯವಾಗಿ ನಿರ್ವಹಿಸುವ ಅಗತ್ಯವಿದೆಯೆಂದರು.
ಶ್ರಮದಾನದಲ್ಲಿ ಕೈಜೋಡಿಸಿದ ವಿವಿಧ ಸಂಘಟನೆಗಳು
48ನೇ ವಾರದ ಶ್ರಮದಾನದಲ್ಲಿ ಗೋವಿಂದದಾಸ ಕಾಲೇಜಿನ ಎನ್ನೆಸೆಸ್‌ ವಿದ್ಯಾರ್ಥಿಗಳು, ಸ್ಪಂದನಾ ಫ್ರೆಂಡ್ಸ್‌ ಕುಳಾಯಿ, ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ, ಯಂಗ್‌ ಫ್ರೆಂಡ್ಸ್‌ ಕುಳಾಯಿ, ಕೆ.ಸಿ. ಫ್ರೆಂಡ್ಸ್‌ ಕುಳಾಯಿ ಮುಂತಾದ ಸಂಘಟನೆಗಳ 90ಕ್ಕೂ ಮಿಕ್ಕಿ ಸ್ವಯಂಸೇವಕರು 5 ಗುಂಪುಗಳಾಗಿ ಶ್ರಮದಾನದಲ್ಲಿ ಭಾಗವಹಿಸಿದ್ದರು.

ನಾಗರಿಕ ಸಮಿತಿ ಕುಳಾಯಿ ಅಧ್ಯಕ್ಷ ಭರತ್‌ ಶೆಟ್ಟಿ, ರಂಜಿತ್‌ ಕುಳಾಯಿ, ರಾಜೇಶ್‌ ಕುಳಾಯಿ, ಲೋಕನಾಥ್‌ ಅಮೀನ್‌ ನೇತೃತ್ವದ ಮೊದಲ ಗುಂಪು ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಭಾರತಿ ಆಂಗ್ಲ ಮಾಧ್ಯಮ ಶಾಲೆಯವರೆಗಿನ ಪ್ರದೇಶವನ್ನು ಸ್ವತ್ಛಗೊಳಿಸಿತು.

ಎಂ.ಟಿ. ಸಾಲ್ಯಾನ್‌, ಬಿ.ಬಿ.ರೈ, ರಮೇಶ್‌ ಅಳಪೆ, ದೀಪಕ್‌ ಕುಳಾಯಿ, ರವಿ ಮೂಡಬೆಟ್ಟು, ರಾಘವೇಂದ್ರ ನೇತೃತ್ವದ ಎರ ಡನೇ ಗುಂಪು ವಿಷ್ಣುಮೂರ್ತಿ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಉತ್ತರ ದಿಕ್ಕಿಗೆ ಶ್ರಮದಾನ ಮಾಡಿದರು.
ಗೋವಿಂದದಾಸ ಕಾಲೇಜಿನ ಎನ್ನೆಸ್ಸೆಸ್‌ ಅ ಧಿಕಾರಿ ಪೂರ್ಣಿಮಾ ಗೋಖಲೆ, ಪ್ರವೀಣ್‌ ಕುಳಾಯಿ, ಕೃಷ್ಣ ಪಿ. ಅಂಚನ್‌, ವಿದ್ಯಾರ್ಥಿ ನಾಯಕರಾದ ಸಮನ್ವಿತಾ, ಮನೀಷ್‌, ಯಶಸ್ವಿನಿ ನೇತೃತ್ವದ ಮೂರನೇ ತಂಡದವರು ವಿಷ್ಣುಮೂರ್ತಿ ದೇವಸ್ಥಾನದ ಮುಂಭಾಗದಿಂದ ರಾಷ್ಟ್ರೀಯ ಹೆದ್ದಾರಿವರೆಗಿನ ಸ್ಥಳವನ್ನು ಶುಚಿಗೊಳಿ ಸಿದರು.

ಗೋವಿಂದದಾಸ ಕಾಲೇಜಿನ ಉಪ ಪ್ರಾಂಶುಪಾಲ ಕೃಷ್ಣಮೂರ್ತಿ, ಪ್ರಾಧ್ಯಾಪಕ ರಮೇಶ್‌ ಭಟ್‌, ಭಾರತೀಯ ಸೇನೆಯ ನಿವೃತ್ತ ಅ ಧಿಕಾರಿ ಗೋಪಿನಾಥ್‌ ರಾವ್‌, ಆನಂದ್‌ ರಾವ್‌ ಕುಳಾಯಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೆ.ಪಿ. ಚಂದ್ರಶೇಖರ್‌ ನೇತೃತ್ವದ 5ನೇ ತಂಡದವರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿಬಿದ್ದಿದ್ದ ಬೃಹತ್‌ ತ್ಯಾಜ್ಯವನ್ನು ಜೆ.ಸಿ.ಬಿ ಹಾಗೂ ಲಾರಿಯ ಸಹಾಯದಿಂದ ಕಿಂಗ್ಸ್‌ ಮಾರ್ಬಲ್‌ ಮಾಲಕರ ಸಹಕಾರದೊಂದಿಗೆ ತೆರವುಗೊಳಿಸಿ ಸುಂದರಗೊಳಿಸಲಾಯಿತು.

ಅಂಕುರ್‌ ಶಾಲಾ ಸಂಚಾಲಕ ಶಂಭು ಮೂಲ್ಯ, ಮಾಜಿ ಮನಪಾ ಸದಸ್ಯೆ ವೇದಾವತಿ ಉಪಸ್ಥಿತರಿದ್ದರು. ಯೋಗೀಶ್‌ ಸನಿಲ್‌ ಸ್ವಾಗತಿಸಿ, ರಾಮಕೃಷ್ಣ ಮಿಷನ್‌ ಸ್ವತ್ಛ ಸುರತ್ಕಲ್‌ ಅಭಿಯಾನದ ಸಂಯೋಜಕ ಸತೀಶ್‌ ಸದಾನಂದ್‌ ಸ್ವಯಂಸೇವಕರಿಗೆ ಅಗತ್ಯ ಮಾಹಿತಿ ನೀಡಿದರು.

ಸ್ವತ್ಛತೆಯ ಅರಿವು ಜಾಗೃತಿ
ಪರಿಸರದ ನಿವಾಸಿಗಳಿಗೆ, ವಲಸೆ ಕಾರ್ಮಿಕರಿಗೆ ಹಾಗೂ ಅಂಗಡಿ ಮಾಲೀಕರಿಗೆ ಶಿಕ್ಷಕಿ ಸಾವಿತ್ರಿ ರಮೇಶ್‌ ಭಟ್‌, ಶಾರದಾ ಮಾತೃ ಮಂಡಳಿಯ ಸುಜಯಾ ಶೆಟ್ಟಿ, ತಾರಾ ಅಶೋಕ್‌, ಶಕುಂತಳಾ ಪ್ರಕಾಶ್‌, ಸುರೇಶ್‌ ಶೆಣೈ ನೇತೃತ್ವದ ನಾಲ್ಕನೇ ತಂಡದವರು ಮಲೇರಿಯಾ ಡೆಂಗ್ಯೂ ಮುಂತಾದ ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಸ್ವತ್ಛತೆಯ ಮಹತ್ವದ ಬಗ್ಗೆ ಮಾಹಿತಿಯನ್ನು ನೀಡಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.