ದಕ್ಷಿಣ ಕನ್ನಡದಲ್ಲಿ ಹೋಂ ಸ್ಟೇ ನಿರ್ಮಾಣಕ್ಕೆ ಹೆಚ್ಚಿದ ಬೇಡಿಕೆ

ಎರಡೇ ವರ್ಷಗಳಲ್ಲಿ 2ರಿಂದ 25ಕ್ಕೆ ಏರಿದ ಹೋಂ ಸ್ಟೇಗಳು

Team Udayavani, Oct 12, 2019, 5:49 AM IST

d-40

ಮಂಗಳೂರು: ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಹೋಂ ಸ್ಟೇ ಪರಿಕಲ್ಪನೆಗೆ ಉತ್ತೇಜನ ಮತ್ತು ಬೇಡಿಕೆ ಉಂಟಾಗಿದೆ. 2 ವರ್ಷದ ಹಿಂದೆ ಕೇವಲ 2 ಹೋಂ ಸ್ಟೇಗಳಷ್ಟೇ ಇದ್ದ ಜಿಲ್ಲೆಯಲ್ಲಿ ಈಗ ಇರುವ ಹೋಂ ಸ್ಟೇಗಳ ಸಂಖ್ಯೆ 25. ಧರ್ಮಸ್ಥಳ ಮತ್ತು ಮೂಡುಬಿದಿರೆಗಳಲ್ಲಿ ತಲಾ 1, ಬಂಟ್ವಾಳ-ಬೆಳ್ತಂಗಡಿಗಳಲ್ಲಿ ತಲಾ 2 ಮತ್ತು ಮಂಗಳೂರಿನಲ್ಲಿ 19 ಅಧಿಕೃತ ಹೋಂ ಸ್ಟೇಗಳಿವೆ. ಈ ಪೈಕಿ 5 ಕಡಲ ತೀರದಲ್ಲಿವೆ.

ಕಳೆದ 3 ವರ್ಷಗಳಲ್ಲಿ ಜಿಲ್ಲೆಯಲ್ಲಿ ಪ್ರವಾಸಿಗರ ಸಂಖ್ಯೆಯೂ ಏರಿಕೆಯಾಗಿದೆ. 2016 -17ರಲ್ಲಿ 1 ಕೋಟಿ, 2017-18ರಲ್ಲಿ 1.2 ಕೋಟಿ, 2018-19ರಲ್ಲಿ 1.4 ಕೋಟಿ ಮತ್ತು 2019ರಲ್ಲಿ ಈಗಾಗಲೇ 1 ಕೋಟಿ ಪ್ರವಾಸಿಗರು ಬಂದು ಹೋಗಿದ್ದಾರೆ. ಬೀಚ್‌ ಹೋಂ ಸ್ಟೇಗಳಿಗೆ ಬೇಡಿಕೆ ಹೆಚ್ಚು.

ಪ್ರವಾಸೋದ್ಯಮ ಇಲಾಖೆಯಿಂದ ಪರವಾನಿಗೆ
ಹೋಂ ಸ್ಟೇ ಆರಂಭಿಸಲು ಪ್ರವಾಸೋದ್ಯಮ ಇಲಾಖೆ 5 ವರ್ಷಗಳಿಗೆ ಪರವಾನಿಗೆ ನೀಡುತ್ತದೆ. ಇದಕ್ಕೆ 500 ರೂ. ನೋಂದಣಿ ಶುಲ್ಕ ಪಾವತಿಸಬೇಕು. ಪ್ರವಾಸಿಗರಿಗೆ ನೀಡುವ ಕೊಠಡಿ ಕನಿಷ್ಠ 2, ಗರಿಷ್ಠ 5ರ ಮಿತಿಯಲ್ಲಿರಬೇಕು. ಪೊಲೀಸ್‌ ಇಲಾಖೆ, ಸ್ಥಳೀಯಾಡಳಿತ ಸಂಸ್ಥೆಗಳ ನಿರಾಕ್ಷೇಪಣ ಪತ್ರ ಆವಶ್ಯಕ. ಮಹಾನಗರ ಪಾಲಿಕೆ ವ್ಯಾಪ್ತಿಯಾದರೆ ಮಂಗಳೂರು ಪೊಲೀಸ್‌ ಆಯಕ್ತರು ಮತ್ತು ಪಾಲಿಕೆ, ಹೊರಗಿನದಾದರೆ ಎಸ್‌ಪಿ ಮತ್ತು ಗ್ರಾ.ಪಂ., ನಗರ ಸಭೆ, ಪುರಸಭೆಯಿಂದ ಎನ್‌ಒಸಿ ಬೇಕು.

ಯಾವುದೇ ಅನಪೇಕ್ಷಿತ ವಿದ್ಯಮಾನ, ವ್ಯವಹಾರಗಳಿಗೆ ಆಸ್ಪದ ನೀಡಬಾರದು. ಪ್ರತಿ ಪ್ರವಾಸಿಗರಿಂದ ಗುರುತು ಚೀಟಿ ಪಡೆದೇ ವಸತಿ ನೀಡಬೇಕು. ಹೋಂ ಸ್ಟೇಗೆ ಬರುವ ಅತಿಥಿಗಳ ವಿವರ ನೋಂದಣಿ ಪುಸ್ತಕ ಮತ್ತು ಗಣಕೀಕರಣಗೊಳಿಸಬೇಕು.

ಗ್ರಾಮೀಣ ಶೈಲಿಗೆ ಬೇಡಿಕೆ
ಕರಾವಳಿಗೆ ಬರುವ ಪ್ರವಾಸಿಗರು ಹೆಚ್ಚಾಗಿ ಗುತ್ತಿನ ಮನೆ ಸೇರಿದಂತೆ ಗ್ರಾಮೀಣ ಶೈಲಿಯ ಹೋಂ ಸ್ಟೇಗಳಲ್ಲಿ ಇರಲು ಇಷ್ಟಪಡುತ್ತಾರೆ. ತುಳುನಾಡಿನ ಪಾರಂಪರಿಕ ವಿನ್ಯಾಸದ ಹೋಂ ಸ್ಟೇಗಳಿಗೆ ಬೇಡಿಕೆ ಹೆಚ್ಚು.

ಕರಾವಳಿ ಪ್ರವಾಸೋದ್ಯಮಕ್ಕೆ ರಾಜ್ಯ ಸರಕಾರ ಹೆಚ್ಚಿನ ಉತ್ತೇಜನ ನೀಡುತ್ತಿದೆ. ಹೋಂ ಸ್ಟೇ ನಿರ್ಮಾಣಕ್ಕೆ ಹೆಚ್ಚಿನ ಮಂದಿ ಮುಂದೆ ಬರುತ್ತಿದ್ದಾರೆ. ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಸರಕಾರದ ವಲಯದಲ್ಲಿ ಚರ್ಚೆ ಮಾಡುತ್ತೇವೆ.
– ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ

ಹೋಂ ಸ್ಟೇ ಸೇರಿದಂತೆ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನದಿ ಅಳಿವೆ, ಬೋಟ್‌ ಹೌಸ್‌, ಧಾರ್ಮಿಕ ಕ್ಷೇತ್ರಗಳು, ಜಲ ಕ್ರೀಡೆಗಳು ಸೇರಿದಂತೆ ಇನ್ನಿತರ ವಲಯಗಳ ಬಗ್ಗೆ 2 ತಿಂಗಳಿನಲ್ಲಿ ಸಮಗ್ರ ಯೋಜನೆ ರೂಪಿಸುತ್ತೇವೆ. ಸಲಹೆ ಪಡೆಯುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಟೂರಿಸಂ ಟಾಸ್ಕ್ ಫೋರ್ಸ್‌ ರಚನೆ ಮಾಡಲಾಗುತ್ತದೆ.
– ಸಿ.ಟಿ. ರವಿ, ಪ್ರವಾಸೋದ್ಯಮ ಸಚಿವ

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಹೊಸದಾಗಿ ಹೋಂ ಸ್ಟೇ ಆರಂಭಿಸಲು ಸದ್ಯ 30ಕ್ಕೂ ಹೆಚ್ಚು ಮಂದಿ ಮುಂದೆ ಬಂದಿದ್ದಾರೆ.
– ಸುಧೀರ್‌ ಗೌಡ, ದ.ಕ. ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕ

– ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.