ಸಾಂಪ್ರದಾಯಿಕ ಮಣ್ಣಿನ ಮಡಕೆಗೆ ಹೆಚ್ಚಿದ ಬೇಡಿಕೆ


Team Udayavani, Apr 26, 2019, 5:50 AM IST

32

ಸವಣೂರು: ಈ ಬಾರಿಯ ಬೇಸಗೆಯಲ್ಲಿ ಬಿರು ಬಿಸಿಲು ಹೆಚ್ಚಿ, ಅರೆಗಳಿಗೆ ನಡೆಯುವಷ್ಟರಲ್ಲೇ ಮೈಯೆಲ್ಲಾ ಬೆವರುಮಯವಾಗುತ್ತಿದೆ. ಈ ನಡುವೆ ಜನರನ್ನು ದಾಹ ಕಾಡುತ್ತಿದೆ. ಬಿಸಿಲಿನ ತೀವ್ರತೆ ಹೆಚ್ಚಿರುವುದರಿಂದ ಈಗ ಕುಡಿಯುವ ನೀರಿನ ಸಂಗ್ರಹಕ್ಕಾಗಿ ಸಾಂಪ್ರದಾಯಿಕ ಮಡಕೆಗಳಿಗೆ ಬೇಡಿಕೆ ಹೆಚ್ಚಿದ್ದು, ವ್ಯಾಪಾರವೂ ವೃದ್ಧಿಸಿದೆ.

ತಾಲೂಕಿನ ವಿವಿಧೆಡೆ ಮಡಕೆ ಮಾರಾಟ ಮಾಡುವ ಅಂಗಡಿಗಳಲ್ಲಿ ಮಡಕೆ ಖರೀದಿಸುವ ದೃಶ್ಯಗಳು ಕಾಣಸಿಗುತ್ತವೆ. ಬೇಸಗೆಯಲ್ಲಿ ಮುಖ್ಯ ವ್ಯಾಪಾರಗಳಲ್ಲಿ ಒಂದಾಗಿರುವ ಮಡಕೆ ವ್ಯಾಪಾರವೂ ಜನವರಿಯಿಂದಲೇ ಶುರುವಾಗಿದೆ. ನಾನಾ ಬಗೆಯ ಆಕೃತಿಯ ಮಡಕೆಗಳು ಗ್ರಾಹಕರನ್ನು ಸೆಳೆಯುತ್ತಿವೆ. ಮಡಕೆಯ ವಿನ್ಯಾಸ, ಅದರ ಗಾತ್ರದ ಆಧಾರದ ಮೇಲೆ ದರ ನಿಗದಿಪಡಿಸಿದ್ದಾರೆ.

ನೀರು ಕೂಲ್‌
ಬೇಸಗೆಯಲ್ಲಿ ಕೆಲವರು ತಣ್ಣನೆಯ ನೀರಿಗಾಗಿ ಫ್ರಿಜ್‌ ಬಳಸುತ್ತಾರೆ. ದುಬಾರಿ ರೆಫ್ರಿಜಿರೇಟರ್‌ ಖರೀದಿಸಲಾಗದವರು ಮಡಕೆಯ ಮೊರೆ ಹೋಗುತ್ತಾರೆ. ಎಂಥಾ ಸುಡುಬೇಸಗೆಯಲ್ಲೂ ವಿದ್ಯುತ್‌ ಅಗತ್ಯವಿಲ್ಲದೇ ತಂಪಾದ ನೀರು ಕೊಡುವ ಮಣ್ಣಿನ ಮಡಕೆ ಬಡವರ ಫ್ರಿಜ್‌ ಎಂದೇ ಜನಜನಿತವಾಗಿದೆ. ಫ್ರಿಜ್‌ನಲ್ಲಿನ ನೀರು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬ ಮಾಹಿತಿಯಿಂದ ಮಣ್ಣಿನ ಮಡಕೆಗೆ ಬೇಡಿಕೆ ವ್ಯಕ್ತವಾಗಿದೆ. ಮಡಕೆಯಲ್ಲಿನ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಉಪಕಾರಿ. ಬೇಸಗೆಯಲ್ಲಿ ಮಡಕೆ ಖರೀದಿ ಜಾಸ್ತಿ. ಫ್ರಿಜ್‌ಗಿಂತಲೂ ಬಹಳಷ್ಟು ಜನರು ಮಡಕೆ ಖರೀದಿಸಿ ನೀರು ಕುಡಿಯುತ್ತಾರೆ.

ಆರೋಗ್ಯಕ್ಕೆ ತಂಪು
ನೈಸರ್ಗಿಕವಾಗಿ ನೀರನ್ನು ತಂಪಾಗಿಸುವ ಗುಣ ಹೊಂದಿರುವ ಮಡಕೆ, ಫ್ರಿಜ್‌ಗಿಂತ ಉತ್ತಮ. ಆರೋಗ್ಯದ ದೃಷ್ಟಿಯಿಂದಲೂ ಅನುಕೂಲ. ದಾಹವನ್ನು ಬೇಗ ತಣಿಸಿ ಉಷ್ಣಾಂಶ ಕಡಿಮೆ ಮಾಡುತ್ತದೆ. ಮಣ್ಣಿನಲ್ಲಿರುವ ವಿಶಿಷ್ಟ ಗುಣಗಳು ದೇಹದೊಳಗಿನ ಕೆಲವು ಬ್ಯಾಕ್ಟೀರಿಯಾಗಳ ಮೇಲೆ ಪ್ರಭಾವ ಬೀರುತ್ತವೆ. ಇದು ಆರೋಗ್ಯ ರಕ್ಷಣೆಗೆ ಅನುಕೂಲವಾಗುತ್ತದೆ. ಕಡಿಮೆ ಖರ್ಚಿನಲ್ಲಿ ಬಹು ರೀತಿಯ ಲಾಭ ನೀಡುವ ಮಡಕೆಯಿಂದ ಪರಿಸರಕ್ಕೂ ಯಾವುದೇ ಹಾನಿಯಿಲ್ಲ. ಮಣ್ಣಿನ ಮಡಕೆಯೊಳಗೆ ತುಂಬಿಸಿದ ನೀರಿಗೆ ತಾಮ್ರದ ತಗಡನ್ನು ಹಾಕಿದರೆ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುತ್ತಾರೆ. ಕಳೆದ 4 ವರ್ಷಗಳಿಂದ ಮಣ್ಣಿನ ಮಡಕೆಯ ನೀರನ್ನು ಬಳಸುತ್ತಿರುವ ಬೆಳಂದೂರು ಈಡನ್‌ ಗ್ಲೋಬಲ್‌ ಶಿಕ್ಷಣ ಸಂಸ್ಥೆಯ ಶಿಕ್ಷಕ ಶಶಿಕುಮಾರ್‌ ಬಿ.ಎನ್‌ ಅವರು.

ನಾನಾ ಗಾತ್ರದ ಮಡಕೆ ಲಭ್ಯ
ನಮ್ಮಲ್ಲಿ ಒಂದು ಲೀಟರ್‌ನಿಂದ ಹಿಡಿದು 25 ಲೀಟರ್‌ ಸಾಮರ್ಥಯದವರೆಗೆ ತರಹೇವಾರಿ ಮಡಕೆಗಳು ಸಿಗುತ್ತವೆ. ನಳ್ಳಿ ಅಳವಡಿಸಿರುವ ದೊಡ್ಡ ಮಡಕೆಗಳೂ ಇವೆ. ಹೋದ ವರ್ಷವೂ ಬೇಸಗೆಯಲ್ಲಿ ವ್ಯಾಪಾರ ಜೋರಾಗಿತ್ತು. ನಮ್ಮಲ್ಲಿ ಗಾತ್ರ ಹಾಗೂ ವಿನ್ಯಾಸ ಆಧರಿಸಿ 120ರಿಂದ 2,500 ರೂಪಾಯಿವರೆಗೆ ಮಡಕೆ ಮಾರಾಟ ಮಾಡಲಾಗುತ್ತದೆ. ಜನವರಿಯಿಂದ ಮಣ್ಣಿನ ಮಡಕೆ ವ್ಯಾಪಾರ ಆರಂಭವಾಗುತ್ತದೆ. ಮಾರ್ಚ್‌, ಎಪ್ರಿಲ್‌ ಮತ್ತು ಮೇಯಲ್ಲಿ ಮಡಕೆಗಳಿಗೆ ಬೇಡಿಕೆ ಹೆಚ್ಚಿರುತ್ತದೆ. ಇದೀಗ ದಿನಕ್ಕೆ 10 ರಿಂದ 20 ಮಡಕೆಗಳು ಕೌಡಿಚ್ಚಾರು ಕುಂಬಾರರ ಗುಡಿಕೈಗಾರಿಕೆ ಸಂಸ್ಥೆಯಿಂದ ಮಾರಾಟವಾಗುತ್ತಿದೆ. ತಾಲೂಕಿನಲ್ಲಿ ದಿನವೊಂದಕ್ಕೆ 100ಕ್ಕಿಂತ ಹೆಚ್ಚು ಮಣ್ಣಿನ ಮಡಕೆಗಳು ಮಾರಾಟವಾಗುತ್ತದೆ ಎಂದು ಹೇಳುತ್ತಾರೆ ದೀಪಕ್‌ ಕುಲಾಲ್‌ ಕೌಡಿಚ್ಚಾರು.

 ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.