ಅಪಘಾತ ವಲಯವಾದ ಹೊಸಪೇಟೆ-ಪಂಚ ಮಹಲ್‌ ಜಂಕ್ಷನ್‌


Team Udayavani, Dec 16, 2018, 10:48 AM IST

16-december-3.gif

ಮೂಲ್ಕಿ : ದಿನಕ್ಕೊಂದರಂತೆ ಸರಣಿ ಅಪಘಾತಗಳ ಮೂಲಕ ಅಪಘಾತ ತಾಣವಾಗಿ ಬೆಳೆದಿದೆ. ಮೂಲ್ಕಿ ಬಸ್‌ ನಿಲ್ದಾಣದ ಎದುರಿನ ಹೆದ್ದಾರಿಯಲ್ಲಿ ಅಡ್ಡವಾಗಿ ದಾಟುವ ಹೊಸಪೇಟೆ- ಪಂಚಮಹಲ್‌ ರಸ್ತೆ ಜಂಕ್ಷನ್‌. ಹೆದ್ದಾರಿ ಇಲಾಖೆ ಇಲ್ಲಿ ರಸ್ತೆಯನ್ನು ತಿರುವಿನಂತೆ ನಿರ್ಮಿಸಿರುವುದು ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಇಲ್ಲಿ ನಿತ್ಯವೂ ಒಂದಲ್ಲ ಒಂದು ಅಪಘಾತಗಳು ನಡೆಯುತ್ತಿದ್ದರೂ ಪೊಲೀಸ್‌ ಇಲಾಖೆಯ ಟ್ರಾಫಿಕ್‌ ವಿಭಾಗದಿಂದ ಕಟ್ಟು ನಿಟ್ಟಿನ ಶಾಶ್ವತ ಕ್ರಮ ಇನ್ನೂ ಕೈಗೊಂಡಿಲ್ಲ. ಅಪಘಾತ ನಡೆದ ಒಂದೆರಡು ದಿನ ಮಾತ್ರ ಇಲ್ಲಿಗೆ ಪೊಲೀಸ್‌ ನಿಯೋಜನೆ ಮಾಡಲಾಗುತ್ತದೆ. ಮತ್ತೆ ಯಾರೂ ಇತ್ತ ನಿಗಾ ವಹಿಸುವುದೇ ಇಲ್ಲ.

ಕಳೆದ ಎರಡು ದಿನ ಇಲ್ಲಿ ನಡೆದ ಅಪಘಾತವನ್ನು ಕಣ್ಣಾರೆ ಕಂಡಿರುವ ಸ್ಥಳೀಯರು, ದಿನವಿಡೀ ಇರುವ ಕೆಲವು ರಿಕ್ಷಾ ಚಾಲಕರು, ವ್ಯಾಪಾರಿಗಳು ವಾಹನವೊಂದು ಬ್ರೇಕ್‌ ಹಾಕಿದಾಗ ಬರುವ ಸದ್ದಿನಿಂದಲೂ ಬೆಚ್ಚಿ ಬೀಳುವ ಪರಿಸ್ಥಿತಿ ಉಂಟಾಗಿದೆ ಎನ್ನುತ್ತಾರೆ ಶುಕ್ರವಾರ ನಡೆದ ಅಪಘಾತದಲ್ಲಿ ಲಾರಿ ಚಕ್ರದಡಿ ಬಿದ್ದಿದ್ದ ಮಹಿಳೆಯೊಬ್ಬರನ್ನು ರಕ್ಷಿಸಲಾಗದೇ ತಮ್ಮ ಅಸಹಾಯಕತೆಯಿಂದ ನೊಂದಿರುವ ಸ್ಥಳೀಯರು.

ಈ ಹಿಂದೆ ಸುರತ್ಕಲ್‌ ಉತ್ತರ ಟ್ರಾಫಿಕ್‌ ಠಾಣೆಯ ಹಿರಿಯ ಅಧಿಕಾರಿ ಆಗಿದ್ದ ಮಂಜುನಾಥ್‌ ಅವರು ಮೂಲ್ಕಿಯನ್ನು ಅತೀ ಪ್ರಾಮುಖ್ಯ ಅಪಘಾತ ಸ್ಥಳ ಎಂದು ಪರಿಗಣಿಸಿ, ಈ ಬಗ್ಗೆ ನಿತ್ಯವೂ ತನ್ನ ಗಮನ ಹರಿಸುತ್ತಿದ್ದರು. ಆದರೆ ಅವರು ಇಲ್ಲಿಂದ ತೆರಳಿದ ಮೇಲೆ ಯಾರೂ ಇತ್ತ ಕಡೆ ಬಂದಿಲ್ಲ ಎನ್ನಲಾಗುತ್ತಿದೆ. 

ಕೆಲವು ಬಾರಿ ಹೋಮ್‌ ಗಾರ್ಡ್‌ ಸಿಬಂದಿಯನ್ನು ಇಲ್ಲಿಯ ಟ್ರಾಫಿಕ್‌ ನಿರ್ವಹಣೆಗಾಗಿ ನಿಯುಕ್ತಿಗೊಳಿಸಲಾಗುತ್ತಿತ್ತು. ಇದರಿಂದ ಇಲ್ಲಿಗೆ ಯಾವುದೇ ರೀತಿಯ ಪ್ರಯೋಜನ ಆಗದಿದ್ದರೂ ಕೆಲವು ಹಿರಿಯ ವಯಸ್ಸಿನ ಜನ ರಸ್ತೆ ದಾಟುವಲ್ಲಿ ಸ್ವಲ್ಪ ಮಟ್ಟಿಗೆ ಪ್ರಯೋಜನವಾಗುತ್ತಿತ್ತು. ಈ ಬಗ್ಗೆ ಟ್ರಾಫಿಕ್‌ ವಿಭಾಗದ ಪೊಲೀಸರನ್ನು ಕೇಳಿದರೆ, ಮಂಗಳೂರಿನ ಬಹುತೇಕ ಪ್ರದೇಶವನ್ನು ನಮ್ಮ ವ್ಯಾಪ್ತಿಗೆ ಕೊಡಲಾಗಿದೆ. ಹೀಗಾಗಿ ಸಿಬಂದಿ ಸಮಸ್ಯೆ ಹೆಚ್ಚಾಗಿದೆ ಎನ್ನುವ ಉತ್ತರ ಸಿಗುತ್ತಿದೆ. ಇತ್ತ ಮೂಲ್ಕಿ ಠಾಣೆಯ ಸಿಬಂದಿಯೂ ಈ ಬಗ್ಗೆ ತಲೆ ಕೆಡಿಸುವಂತಿಲ್ಲ. ಕಾರಣ ಇಲ್ಲಿ ಸಾರಿಗೆ ಸಂಚಾರ ವಿಭಾಗವೇ ಇಲ್ಲ ಎಂಬುದು ಪ್ರಮುಖ ಕಾರಣವಾಗಿದೆ. 

ಟ್ರಾಫಿಕ್‌ ಉಪ ಠಾಣೆ ಅಗತ್ಯ
ಪೊಲೀಸ್‌ ಇಲಾಖೆಯೇ ಎಲ್ಲದಕ್ಕೂ ಜವಾಬ್ದಾರಿ ಎನ್ನುವ ಆರೋಪವನ್ನು ಎಲ್ಲರೂ ಮಾಡುತ್ತಾರೆ. ಮೂಲ್ಕಿಗೆ ಒಂದು ಟ್ರಾಫಿಕ್‌ ಉಪಠಾಣೆಯನ್ನು ಕೊಟ್ಟರೆ ಇಲ್ಲಿಯ ಸಿಬಂದಿಗೆ ಟ್ರಾಫಿಕ್‌ ನಿರ್ವಹಣೆ ಮಾಡುವುದು ಸುಲಭವಾಗುತ್ತದೆ. ಟ್ರಾಫಿಕ್‌ ನಿರ್ವಹಣೆಯ ಹೆಚ್ಚುವರಿ ಜವಾಬ್ದಾರಿಯನ್ನು ಕನಿಷ್ಠ ಮೂಲ್ಕಿ ನಗರ ಪಂಚಾಯತ್‌ ವ್ಯಾಪ್ತಿಗಾದರೂ ಕೊಟ್ಟರೆ ಸಮಸ್ಯೆ ಪರಿಹರಿಸಿಕೊಳ್ಳಬಹುದು.
 - ಸುನಿಲ್‌ ಆಳ್ವ, ಅಧ್ಯಕ್ಷರು,
ನಗರ ಪಂಚಾಯತ್‌ ಮೂಲ್ಕಿ

ಸಭೆ ನಡೆಸಿ ಕ್ರಮ
ಹೆಚ್ಚುವರಿ ಸಿಬಂದಿ ನಿಯೋಜನೆ ಮಾಡಲಾಗಿದೆ. ಹೆದ್ದಾರಿ ದಾಟಲು ಜನರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕಾಗಿತ್ತು. ಜಂಕ್ಷನ್‌ನಲ್ಲಿ ಜನ ಜಂಗುಳಿ ಇರುವ ಕಾರಣ ಹೈಮಾಸ್ಟ್‌ ಲೈಟ್‌ ಮತ್ತು ಬ್ಲಿಂಕರ್‌ಗಳನ್ನು ಅಳ ವಡಿಸಿ ಹೆದ್ದಾರಿಯಲ್ಲಿ ಬರುವ ವಾಹನಗಳಿಗೆ ತೀವ್ರತೆ ತಿಳಿಯುವಂತೆ ಕ್ರಮ ಜರಗಿಸಬೇಕಾಗಿದೆ. ಸ್ಥಳೀಯಾಡಳಿತ ಮತ್ತು ನಾಗರಿಕರೊಂದಿಗೆ ಸಭೆ ನಡೆಸಿ ಈ ಬಗ್ಗೆ ಹೆದ್ದಾರಿ ಇಲಾಖೆಯ ಗಮನ ಸೆಳೆಯಲಾಗುವುದು.
ಅಮಾನುಲ್ಲಾ, ಇನ್‌ಸ್ಪೆಕ್ಟರ್‌,
  ಮಂಗಳೂರು ಪಾಂಡೇಶ್ವರ ಪಶ್ಚಿಮ
  ಮತ್ತು ಉತ್ತರ ಟ್ರಾಫಿಕ್‌ ವಿಭಾಗ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.