ಅಪ್ರಾಪ್ತ ವಯಸ್ಸಿನಲ್ಲೇ ತಾಯ್ತನದ ಭಾರ


Team Udayavani, Aug 4, 2017, 6:25 AM IST

Molestation-600.jpg

ಉಭಯ ಜಿಲ್ಲೆಗಳಲ್ಲಿ ಮೂರೂವರೆ ವರ್ಷಗಳಲ್ಲಿ 23 ಪ್ರಕರಣ ದಾಖಲು

ಮಂಗಳೂರು: ಆಟವಾಡುತ್ತ, ಶಾಲೆಗೆ ಹೋಗುತ್ತ, ಆಡಿ ನಲಿದಾಡಬೇಕಾದ ಅಪ್ರಾಪ್ತ ವಯಸ್ಸಿನ ಮಕ್ಕಳೇ ಗರ್ಭಿಣಿಯರಾಗಿ ತಾಯ್ತನದ ಭಾರ ಹೊರುತ್ತಿರುವ ಕರುಣಾಜನಕ ಕತೆಯಿದು! ಅಷ್ಟಕ್ಕೂ ಈ ಮಕ್ಕಳು ಅವರಾಗಿಯೇ ಮಾಡಿಕೊಂಡ ತಪ್ಪಲ್ಲ. ಯಾರಧ್ದೋ ಮೋಸದಾಟಕ್ಕೆ ಬಲಿಯಾಗಿ ಹೆಣ್ಣು ಮಕ್ಕಳು ಅಪ್ರಾಪ್ತ ವಯಸ್ಸಿನಲ್ಲೇ, ಅಂದರೆ 18 ವರ್ಷಕ್ಕೂ ಮೊದಲೇ ಗರ್ಭ ಧರಿಸುತ್ತಿರುವುದು, ಅನಿವಾರ್ಯವಾಗಿ ತಾಯ್ತನಕ್ಕೆ ದೂಡಲ್ಪಡುವ ಪ್ರಕರಣಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗುತ್ತಿವೆ.

ಉಭಯ ಜಿಲ್ಲೆಗಳಲ್ಲಿ ಕಳೆದ ಮೂರೂವರೆ ವರ್ಷಗಳಲ್ಲಿ ಇಂತಹ 23 ಪ್ರಕರಣಗಳು ರಾಜ್ಯ ಮಕ್ಕಳ ಕಲ್ಯಾಣ ಸಮಿತಿ ಮುಂದೆ ದಾಖಲಾಗಿರುವುದು ಆತಂಕಕ್ಕೀಡುಮಾಡಿದೆ. ದಕ್ಷಿಣ ಕನ್ನಡದ 13 ಮತ್ತು ಉಡುಪಿ ಜಿಲ್ಲೆಯ 10 ಮಕ್ಕಳು ಇದರಲ್ಲಿ ಸೇರಿದ್ದಾರೆ. ಅಪ್ರಾಪ್ತ ವಯಸ್ಸಿನಲ್ಲೇ ಗರ್ಭ ಧರಿಸಿದವರಲ್ಲಿ ಬಹುತೇಕರು 14 ವರ್ಷ ಮೇಲ್ಪಟ್ಟವರು. ಇವಿಷ್ಟು ಬೆಳಕಿಗೆ ಬಂದಿರುವ ಪ್ರಕರಣಗಳು. ಆದರೆ ಬೆಳಕಿಗೆ ಬಾರದ ಅದೆಷ್ಟೋ ಪ್ರಕರಣಗಳು ಇವೆ.

ಕಳೆದ ವರ್ಷ ಅತೀ ಹೆಚ್ಚು ಪ್ರಕರಣ
ದ.ಕ. ಜಿಲ್ಲೆಯಲ್ಲಿ 2014-15ರಿಂದ ಇಲ್ಲಿವರೆಗೆ ಒಟ್ಟು 13 ಇಂತಹ ದೂರುಗಳು ಮಕ್ಕಳ ಕಲ್ಯಾಣ ಸಮಿತಿ ಮುಖಾಂತರ ದಾಖಲಾಗಿವೆ. 2014-15ರಲ್ಲಿ ಎರಡು, 2015-16ರಲ್ಲಿ ನಾಲ್ಕು, 2016-17ರಲ್ಲಿ ಐದು ಹಾಗೂ 2017-18ರಲ್ಲಿ ಇಲ್ಲಿವರೆಗೆ 2 ಮಂದಿ ಅಪ್ರಾಪ್ತ ವಯಸ್ಸಿನಲ್ಲೇ ಗರ್ಭಿಣಿಯಾಗಿದ್ದಾರೆ. ಈ ಪೈಕಿ ನಾಲ್ವರಿಗೆ ಕಾನೂನು ಸಮ್ಮತ ಗರ್ಭಪಾತ ನಡೆಸಲಾಗಿದ್ದು, ಅಪ್ರಾಪ್ತ ವಯಸ್ಸಿನವರಿಗೆ ಜನಿಸಿದ ಮಕ್ಕಳ ಪೈಕಿ ಮೂವರನ್ನು ಕೌಟುಂಬಿಕ ರಕ್ಷಣೆಗಾಗಿ ದತ್ತು ನೀಡಲಾಗಿದೆ. ಮೂವರು ಮಕ್ಕಳನ್ನು ಆರೈಕೆ ಮತ್ತು ಸಂರಕ್ಷಣೆ ಉದ್ದೇಶಕ್ಕೆ ಸಂಬಂಧಪಟ್ಟ ಸಂಸ್ಥೆಗಳಿಗೆ ಹಸ್ತಾಂತರಿಸಲಾಗಿದೆ. ಈ ನಡುವೆ ತಂದೆ ಹಾಗೂ ಚಿಕ್ಕಪ್ಪನಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಮಗುವಿಗೆ ಜನ್ಮ ನೀಡಿದ ಎರಡು ದೂರುಗಳು ಜಿಲ್ಲೆಯಲ್ಲಿ ದಾಖಲಾಗಿವೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 10 ಮಂದಿ ಅಪ್ರಾಪ್ತ ವಯಸ್ಸಿನಲ್ಲೇ ಗರ್ಭ ಧರಿಸಿದ ಪ್ರಕರಣಗಳು ಅಧಿಕೃತವಾಗಿ ದಾಖಲಾಗಿವೆೆ.

ಹೆಚ್ಚುತ್ತಿದೆಯಾ ಅನೈತಿಕ ಚಟುವಟಿಕೆ?
ನಗರದಲ್ಲಿ ಹಣ ಮತ್ತು ಬಡತನ ಕಾರಣದಿಂದ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಯುವತಿಯರು ಗರ್ಭ ಧರಿಸುತ್ತಿರುವ ಪ್ರಕರಣಗಳೂ ನಿರಾತಂಕವಾಗಿ ನಡೆಯುತ್ತಿವೆ. ಮೆಡಿಕಲ್‌ ಶಾಪ್‌ಗ್ಳಲ್ಲಿ ಕೆಲಸ ಮಾಡುತ್ತಿರುವ ಹೆಸರು ಹೇಳಲಿಚ್ಛಿಸದ ಕೆಲವು ಸಿಬಂದಿಗಳು ಹೇಳುವ ಪ್ರಕಾರ, ಇಂತಹ ಪ್ರಕರಣಗಳಲ್ಲಿ ಅದೆಷ್ಟೋ ಮಂದಿ ಯುವತಿಯರು ಗರ್ಭಪಾತ ಮಾಡಿಸಿಕೊಳ್ಳಲು ಗುಳಿಗೆಗಳನ್ನು ಕೇಳಿಕೊಂಡು ಬರುತ್ತಿರುವ ಸಂಖ್ಯೆಯೂ ಹೆಚ್ಚುತ್ತಿದೆ ಎನ್ನುತ್ತಾರೆ. ನಗರದಲ್ಲಿ ಇತ್ತೀಚೆಗಷ್ಟೇ ಬೆಳಕಿಗೆ ಬಂದ ಅನೈತಿಕ ಚಟುವಟಿಕೆಯನ್ನೇ ತನ್ನ ವೃತ್ತಿಯಾಗಿಸಿ ಕೊಂಡ ಬಾಲಕಿಯೊಬ್ಬಳು ಗರ್ಭ ಧರಿಸಿದ ಘಟನೆ ಇದಕ್ಕೆ ಪುಷ್ಟಿ ನೀಡುತ್ತದೆ. ಇಲ್ಲಿಯೂ ಆಕೆಯ ಈ ಚಟುವಟಿಕೆಗೆ ಬಡತನವೇ ಕಾರಣ ಎಂದು ಹೇಳಲಾಗಿದೆ. ಸದ್ಯ ಆ ಬಾಲಕಿ ಪೊಲೀಸರ ವಶದಲ್ಲಿದ್ದಾಳೆ.

ಹೆಚ್ಚುತ್ತಿದೆ ಲೈಂಗಿಕ ದೌರ್ಜನ್ಯ ಪ್ರಕರಣ
ಉಭಯ ಜಿಲ್ಲೆಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳೂ ಹೆಚ್ಚುತ್ತಿವೆ. ಪೋಕ್ಸೋ ಕಾಯ್ದೆಯಡಿ ಕಳೆದ ಐದು ವರ್ಷದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ 191 ಪ್ರಕರಣ ದಾಖಲಾಗಿವೆ. ಉಡುಪಿಯಲ್ಲಿ ಒಟ್ಟು 110 ಲೈಂಗಿಕ ದೌರ್ಜನ್ಯ ಪ್ರಕರಣ ಕಂಡುಬಂದಿವೆ. 

ಶಿಕ್ಷಾರ್ಹ ಅಪರಾಧ
ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳಿಂದಾಗಿ ಹೆಣ್ಣು ಮಕ್ಕಳು ವಯೋಪೂರ್ವದಲ್ಲೇ ಗರ್ಭಿಣಿಯರಾಗುತ್ತಿರುವ ಪ್ರಕರಣ ನಡೆಯುತ್ತಲೇ ಇದೆ. ಆದರೆ ಕಾನೂನಿನ ಪ್ರಕಾರ 18 ವರ್ಷಕ್ಕಿಂತ ಮೊದಲು ಆಕೆ ಗರ್ಭ ಧರಿಸಿದರೆ ಅದಕ್ಕೆ ಕಾರಣನಾದ ಯುವಕನ ಮೇಲೆ ಬಾಲ್ಯವಿವಾಹ, ಪೋಕ್ಸೋ, ಅಪಹರಣ ಈ ಮೂರೂ ಕೇಸ್‌ಗಳು ದಾಖಲಾಗುತ್ತವಲ್ಲದೇ, ಎಲ್ಲಾ ಶಿಕ್ಷೆಯನ್ನು ಯುವಕನಿಗೇ ನೀಡಲಾಗುತ್ತದೆ. ಇಂತಹ ಪ್ರಕರಣಗಳಲ್ಲಿ ಗರಿಷ್ಠ ಪ್ರಮಾಣದ ಶಿಕ್ಷೆಯೊಂದಿಗೆ, ಜೀವಾವಧಿ ಶಿಕ್ಷೆಯೂ ಆಗುವ ಸಾಧ್ಯತೆಗಳಿವೆ. ಮಕ್ಕಳ ಮೇಲೆ ಯಾವುದೇ ರೀತಿಯ ದೌರ್ಜನ್ಯಗಳು ನಡೆದಲ್ಲಿ ಅವು ಶಿಕ್ಷಾರ್ಹ ಅಪರಾಧವಾಗಿ ಪರಿಗಣಿಸಲ್ಪಡುತ್ತದೆ. 

ಏನು ನಡೆಯುತ್ತಿದೆ ಎಂದು ತಿಳಿಯದಷ್ಟೂ ಮುಗ್ಧರಾಗಿರುವ ಮಕ್ಕಳ ಮೇಲೆ ತಮ್ಮ ಸ್ವಾರ್ಥಕ್ಕೋಸ್ಕರ ಲೈಂಗಿಕ ದೌರ್ಜನ್ಯ ನಡೆಸುವ ಹೀನ ಕೃತ್ಯಕ್ಕೆ ಮಕ್ಕಳು ಬಲಿಯಾಗುತ್ತಿರುವುದು ಕಳವಳಕಾರಿಯಾಗಿದೆ. ಮಕ್ಕಳ ಮುಗ್ಧತೆಯನ್ನೇ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಹೆಚ್ಚಾಗಿ 14 ವರ್ಷ ಮೇಲ್ಪಟ್ಟ ಮಕ್ಕಳು ಲೈಂಗಿಕ ದೌರ್ಜನ್ಯಗಳಿಗೆ ಒಳಗಾಗುತ್ತಿದ್ದು, ಜಿಲ್ಲೆಯಲ್ಲಿ ಈವರೆಗೆ 13 ದೂರು ಬಂದಿದೆ. ಇಂತಹ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಬಾಲಕಿಯರಿಗೆ ಶಾಲೆಗಳಲ್ಲಿ ಅರಿವು ಮೂಡಿಸುವ ಕೆಲಸಗಳೂ ನಡೆಯುತ್ತಿವೆ. ಬಾಲ್ಯವಿವಾಹಕ್ಕೆ ಸಂಬಂಧಿಸಿ ಯಾವುದೇ ದೂರು ಬಂದಿಲ್ಲ.
– ಕೆ. ನಿಕೇಶ್‌ ಶೆಟ್ಟಿ , ದ.ಕ. ಜಿಲ್ಲಾ  ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ

– ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.