ನಗರದಲ್ಲಿ ಹೆಚ್ಚಾಗುತ್ತಿದೆ ನಿಷೇಧಿತ ಪ್ಲಾಸ್ಟಿಕ್‌ ಬಳಕೆ


Team Udayavani, Aug 25, 2018, 11:18 AM IST

25-agust-6.jpg

ಮಹಾನಗರ: ಪ್ಲಾಸ್ಟಿಕ್‌ ನಿಷೇಧ ಕಾನೂನು ರಾಜ್ಯಾದ್ಯಂತ ಜಾರಿಯಲ್ಲಿದ್ದರೂ, ನಗರದಲ್ಲಿ ಬಹಳಷ್ಟು ಅಂಗಡಿಗಳಲ್ಲಿ ಎಗ್ಗಿಲ್ಲದೆ ಪ್ಲಾಸ್ಟಿಕ್‌ ಚೀಲಗಳ ಮಾರಾಟ-ಬಳಕೆ ನಡೆಯುತ್ತಿದೆ. ಅಂಗಡಿಗಳಿಗೆ ತೆರಳಿ ದಂಡ ಹಾಕಬೇಕಿದ್ದ ಪಾಲಿಕೆ ಅಧಿಕಾರಿಗಳಿಗೆ ಈ ವಿಚಾರ ತಿಳಿದರೂ, ಮೌನವಾಗಿದ್ದಾರೆ. ಇದೀಗ ಎಚ್ಚೆತ್ತುಕೊಂಡಿರುವ ಪಾಲಿಕೆಯು ಮೂರು ತಂಡ ರಚನೆ ಮಾಡಿ ಅನಧಿಕೃತವಾಗಿ ಪ್ಲಾಸ್ಟಿಕ್‌ ಮಾರಾಟ ಮಾಡುವ ಅಂಗಡಿಗಳ ವಿರುದ್ಧ ಕಾರ್ಯಾಚರಣೆ ನಡೆಸಲು ಮುಂದಾಗಿದೆ.

ರಾಜ್ಯದಲ್ಲಿ 4 ರಿಂದ 5 ಮೈಕ್ರಾನ್‌ ಪ್ಲಾಸ್ಟಿಕ್‌ ಚೀಲಗಳ ಮಾರಾಟ ನಿಷೇಧವಿದೆ. ಈ ಪ್ರಮಾಣದ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡಿದರೆ ಅಂಗಡಿ ಮಾಲಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂಬ ನಿಯಮ 2015- 16ರಲ್ಲಿ ಜಾರಿಗೆ ಬಂದಿದೆ. ಅಲ್ಲದೆ, ಅಂಗಡಿಗಳಿಗೆ ಪರವಾನಗಿ ನೀಡುವ ವೇಳೆ ಪ್ಲಾಸ್ಟಿಕ್‌ ಬಳಸಬಾರದೆಂಬ ಸ್ಪಷ್ಟ ನಿಯಮ ಮತ್ತು ಎಚ್ಚರಿಕೆಯನ್ನೂ ಪಾಲಿಕೆ ನೀಡುತ್ತದೆ. ಆದರೆ ಮಂಗಳೂರಿನ ಹೆಚ್ಚಿನ ಅಂಗಡಿ ಮಾಲಕರು ಈ ನಿಯಮಗಳಿಗೆ ಕ್ಯಾರೇ ಅನ್ನುತ್ತಿಲ್ಲ.

ಮೂರು ತಂಡ ರಚನೆ
ಅನಧಿಕೃತವಾಗಿ ಪ್ಲಾಸ್ಟಿಕ್‌ ಚೀಲ ಮಾರಾಟ ಮಾಡುವ ಅಂಗಡಿಗಳ ಬಗ್ಗೆ ನಿಗಾ ಇಡಲು ಪಾಲಿಕೆಯು ಇದೀಗ ಮೂರು ತಂಡಗಳನ್ನು ರಚನೆ ಮಾಡಿದೆ. ಈ ತಂಡದಲ್ಲಿ ಆರೋಗ್ಯ ಅಭಿಯಂತರ, ಆರೋಗ್ಯ ನಿರೀಕ್ಷಕರು, ಪರಿಸರ ಅಭಿಯಂತರರು ಇರುತ್ತಾರೆ. ಮುಂದಿನ ವಾರದಲ್ಲಿಯೇ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಜತೆ ಮೂರೂ ತಂಡದ ಸದಸ್ಯರು ನಗರದ ನಾನಾ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಲು ತೀರ್ಮಾನಿಸಿದ್ದಾರೆ.

ನಗರಕ್ಕೆ ಬರುತ್ತಿದೆ ಲೋಡ್‌ಗಟ್ಟಲೆ ಪ್ಲಾಸ್ಟಿಕ್‌
ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಧರ ಶೆಟ್ಟಿ ಅವರು ‘ಸುದಿನ’ಕ್ಕೆ ಪ್ರತಿಕ್ರಿಯಿಸಿ ‘ಮಂಗಳೂರಿನಲ್ಲಿ ಪ್ಲಾಸ್ಟಿಕ್‌ ಉತ್ಪಾದನೆ ಮಾಡುವಂತಹ ಕೈಗಾರಿಕೆ ಇಲ್ಲದ ಕಾರಣ ಗುಜರಾತ್‌ ಮತ್ತು ಬೆಂಗಳೂರಿನಿಂದ ನಗರಕ್ಕೆ ಲೋಡ್‌ಗಟ್ಟಲೆ ಪ್ಲಾಸ್ಟಿಕ್‌ಗಳು ಅನಧಿಕೃತವಾಗಿ ಬರುತ್ತಿವೆ. ಪಾಲಿಕೆ ಅಧಿಕಾರಿಗಳಿಗೆ ಈ ವಿಚಾರ ತಿಳಿದಿದ್ದರೂ ಮೌನವಾಗಿದ್ದಾರೆ. ಟ್ರಾಫಿಕ್‌ ಪೊಲೀಸರು ನಡು ರಸ್ತೆಯಲ್ಲಿ ಯಾವ ರೀತಿ ವಾಹನ ತಪಾಸಣೆ ನಡೆಸುತ್ತಾರೆಯೋ, ಪಾಲಿಕೆ ಅಧಿಕಾರಿಗಳು ಅದೇ ರೀತಿ ಅಂಗಡಿಗಳಿಗೆ ತೆರಳಿ ತಪಾಸಣೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ತಿಳಿಸಿದ್ದಾರೆ. 

ವರ್ಷಕ್ಕೆ 1,460 ಟನ್‌ ಪ್ಲಾಸ್ಟಿಕ್‌
ನಗರದಲ್ಲಿ ಮನೆ-ಮನೆಗೆ ತೆರಳಿ ಕಸ ವಿಲೇವಾರಿ ಮಾಡಲಾಗುತ್ತದೆ. ಆ ಸಮಯದಲ್ಲಿ ಸಿಗುವಂತಹ ಪ್ಲಾಸ್ಟಿಕ್‌ಗಳು ವರ್ಷಕ್ಕೆ ಸುಮಾರು 1,460 ಟನ್‌, ದಿನಕ್ಕೆ ಶೇ.3ರಷ್ಟು ಪ್ಲಾಸ್ಟಿಕ್‌ ನಗರದಲ್ಲಿಯೇ ಉತ್ಪಾದನೆಯಾಗುತ್ತದೆ. ಇವುಗಳನ್ನು ಪಚ್ಚನಾಡಿ ಬಳಿಕ ಲ್ಯಾಂಡ್‌ ಫಿಲ್‌ ಸೈಟ್‌ಗೆ ರವಾನಿಸಲಾಗುತ್ತದೆ.  

ಹಲವೆಡೆ ಜಾಗೃತಿ
ರಾಜ್ಯ ಸರಕಾರ ಪ್ಲಾಸ್ಟಿಕ್‌ ಬಳಕೆಯನ್ನು ಈಗಾಗಲೇ ನಿಷೇಧ ಮಾಡಿದೆ. ಮಂಗಳೂರು ನಗರದಲ್ಲಿ ಪ್ಲಾಸ್ಟಿಕ್‌ ಉತ್ಪಾದನೆ ಮಾಡುವಂತಹ ಯಾವುದೇ ಕೈಗಾರಿಕೆಗಳಿಲ್ಲ. ಪ್ಲಾಸ್ಟಿಕ್‌ ವಸ್ತುಗಳ ಬಳಕೆ ನಿಷೇಧಕ್ಕೆ ಸಂಬಂಧ ಪಟ್ಟಂತೆ ಈಗಾಗಲೇ ಅನೇಕ ಕಡೆಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
 -ಜಯಪ್ರಕಾಶ್‌ ನಾಯಕ್‌,
ಹಿರಿಯ ವೈಜ್ಞಾನಿಕ ಅಧಿಕಾರಿ

ಮುಂದಿನ ವಾರವೇ ಕಾರ್ಯಾಚರಣೆ
ನಗರದಲ್ಲಿ ಅನಧಿಕೃತವಾಗಿ ಪ್ಲಾಸ್ಟಿಕ್‌ ಮಾರಾಟ ಮಾಡುವ ಅಂಗಡಿಗಳ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು. ಈಗಾಗಲೇ ಪಾಲಿಕೆಯಿಂದ ಮೂರು ತಂಡಗಳನ್ನು ಗುರುತಿಸಲಾಗಿದೆ. ಮುಂದಿನ ವಾರದಿಂದಲೇ ಕಾರ್ಯಾಚರಣೆ ಪ್ರಾರಂಭವಾಗುತ್ತದೆ.
– ಮಧು,ಪಾಲಿಕೆ ಪರಿಸರ
ಅಭಿಯಂತರ

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.