ನಗರದಲ್ಲಿ ಹೋಂಸ್ಟೇ ನಿರ್ಮಾಣಕ್ಕೆ ಹೆಚ್ಚುತ್ತಿದೆ ಬೇಡಿಕೆ !
Team Udayavani, Dec 31, 2021, 3:20 AM IST
ಮಹಾನಗರ: ಕೊರೊನಾ ಎರಡನೇ ಅಲೆ ತೀವ್ರತೆ ಕಡಿಮೆ ಯಾದ ಬಳಿಕ ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರ ಚಿಗುರೊಡೆ ಯುತ್ತಿದ್ದು, ಹೋಂ ಸ್ಟೇ ನಿರ್ಮಾಣಕ್ಕೆ ಹೆಚ್ಚಿನ ಮಂದಿ ಉತ್ಸುಕರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 56 ಹೋಂ ಸ್ಟೇಗಳು ತಲೆಯೆತ್ತಿದ್ದು, ಮಂಗಳೂರು ನಗರದಲ್ಲಿಯೇ 45 ಹೋಂ ಸ್ಟೇಗಳು ನಿರ್ಮಾಣವಾಗಿವೆ.
ರಾಜ್ಯ ಕರಾವಳಿ ಭಾಗವು ಪ್ರವಾಸಿ ತಾಣಗಳಿಗೆ ಪ್ರಸಿದ್ಧಿ ಪಡೆದಿದೆ. ರಾಜ್ಯ, ಹೊರ ರಾಜ್ಯ ಸಹಿತ ವಿದೇಶಗಳಿಂದಲೂ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಕೊರೊನಾ ಕಡಿಮೆಯಾದ ಹಿನ್ನೆಲೆಯಲ್ಲಿ ಇದೀಗ ಪ್ರವಾಸಿಗರ ಸಂಖ್ಯೆ ಮತ್ತೆ ಚೇತರಿಕೆಯತ್ತ ಸಾಗುತ್ತಿದ್ದು, ಪ್ರವಾಸಿಗರನ್ನು ಸೆಳೆಯಲು ಹೋಂ-ಸ್ಟೇಗಳ ಉತ್ತೇಜನಕ್ಕೆ ಇಲಾಖೆ ಮುಂದಾಗಿದೆ. ಅದರಂತೆ, ಮೂರು ತಿಂಗಳುಗಳಿನಿಂದೀಚೆಗೆ ಹೆಚ್ಚಿನ ಮಂದಿ ಹೋಂ ಸ್ಟೇ ನಿರ್ಮಾಣದ ಬಗ್ಗೆ ಪ್ರವಾಸೋ ದ್ಯಮ ಇಲಾಖೆಯಲ್ಲಿ ವಿಚಾರಿಸುತ್ತಿದ್ದಾರೆ. ಕೊರೊನಾ ಕಾರಣದಿಂದಾಗಿ ಕೆಲವು ಮಂದಿ ಕೆಲಸ ಕಳೆದುಕೊಂಡು ಮನೆಯಲ್ಲೇ ಉಳಿದುಕೊಂಡಿದ್ದು, ಅವರು ಕೂಡ ಹೋಂ ಸ್ಟೇ ನಿರ್ಮಾಣಕ್ಕೆ ಮುಂದೆ ಬರುತ್ತಿದ್ದಾರೆ ಎನ್ನುತ್ತಾರೆ ಅಧಿಕಾರಿಗಳು.ಕೊರೊನಾ ಕಾರಣದಿಂದಾಗಿ ಪ್ರವಾಸಿಗರ ಕೊರತೆ ಕಾರಣ, ಈ ಹಿಂದೆ ಬಹುತೇಕ ಹೋಂ-ಸ್ಟೇಗಳು ಬಾಗಿಲು ಮುಚ್ಚಿದ್ದವು. ಇದೀಗ ಮತ್ತೆ ಪ್ರವಾಸೋದ್ಯಮ ಚಟುವಟಿಕೆ ಗಳು ಆರಂಭವಾಗಿವೆ.
ಗ್ರಾಮೀಣ ಶೈಲಿಯ ಹೋಂ-ಸ್ಟೇಗಳು:
ಕರಾವಳಿ ಪ್ರಾಕೃತಿಕ ಪ್ರವಾಸಿ ತಾಣವಾಗಿರು ವುದರಿಂದ ಇಲ್ಲಿಗೆ ಪ್ರವಾಸಕ್ಕೆಂದು ಬರುವ ವರು ಹೆಚ್ಚಾಗಿ ಈ ಭಾಗದ ಗುತ್ತಿನ ಮನೆ, ಪಾರಂಪರಿಕ ಹಳೆ ಮನೆ ಸಹಿತ ಗ್ರಾಮೀಣ ಶೈಲಿಯ ಹೋಂ-ಸ್ಟೇಗಳಲ್ಲಿ ಇರಲು ಇಷ್ಟಪಡುತ್ತಾರೆ. ಇದೇ ಕಾರಣಕ್ಕೆ ಕರಾವಳಿ ಭಾಗದಲ್ಲಿ ತುಳುನಾಡ ಪಾರಂಪರಿಕ ಮನೆಗಳ ವಿನ್ಯಾಸದ ಹೋಂ ಸ್ಟೇಗಳಿಗೂ ಬೇಡಿಕೆ ಕಂಡುಬರುತ್ತಿದೆ. ಅದೇ ಕಾರಣಕ್ಕೆ ಹೋಂ ಸ್ಟೇಗಳ ವಿನ್ಯಾಸವೂ ಕೆಲವು ಕಡೆ ಬದಲಾವಣೆ ಮಾಡಲಾಗಿದೆ ಎನ್ನುತ್ತಾರೆ ಹೋಂ ಸ್ಟೇ ಮಾಲಕರೊಬ್ಬರು.
ಚೇತರಿಕೆಯತ್ತ ಪ್ರವಾಸೋದ್ಯಮ :
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋ ದ್ಯಮ ಕ್ಷೇತ್ರ ಸದ್ಯ ಚೇತರಿಕೆಯತ್ತ ಸಾಗುತ್ತಿದೆ. ಜಿಲ್ಲೆಯಲ್ಲಿ ಪ್ರವಾಸೋ ದ್ಯಮ ಕ್ಷೇತ್ರದ ಉತ್ತೇಜನಕ್ಕೆ ಇಲಾಖೆ ಹಲವು ಯೋಜನೆಗಳನ್ನು ಹಮ್ಮಿ ಕೊಂಡಿದೆ. ಸದ್ಯ ಹೋಂ ಸ್ಟೇ ನಿರ್ಮಾಣಕ್ಕೆ ಹೆಚ್ಚಿನ ಮಂದಿ ಉತ್ಸುಕ ರಾಗಿದ್ದಾರೆ ಜಿಲ್ಲೆಯಲ್ಲಿ ಸದ್ಯ 56 ಹೋಂ ಸ್ಟೇ ನಿರ್ಮಾಣವಾಗಿದ್ದು, ಮತ್ತಷ್ಟು ಮಂದಿ ಉತ್ಸುಕರಾಗಿದ್ದಾರೆ. ಕೆಲವು ತಿಂಗಳಿನಿಂದ ಜಿಲ್ಲೆಗೆ ಆಗಮಿ ಸುವ ಪ್ರವಾಸಿಗರ ಸಂಖ್ಯೆಯಲ್ಲೂ ಏರಿಕೆಯಾಗಿದೆ.–ಮಾಣಿಕ್ಯ, ದ.ಕ. ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ
- ನವೀನ್ ಭಟ್ ಇಳಂತಿಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ