ಪಡೀಲ್‌ ಕ್ರಾಸ್‌ ಬಳಿ ಅವೈಜ್ಞಾನಿಕ ತಿರುವಿನಿಂದ ನಿಲ್ಲದ ಅಪಘಾತ ಸರಣಿ

ಜನರ ಪ್ರಾಣಕ್ಕೆ ಕುತ್ತು ತಂದರೂ ಎಚ್ಚೆತ್ತುಕೊಳ್ಳದ ಹೆದ್ದಾರಿ ಇಲಾಖೆ

Team Udayavani, Jan 28, 2021, 5:20 AM IST

ಪಡೀಲ್‌ ಕ್ರಾಸ್‌ ಬಳಿ ಅವೈಜ್ಞಾನಿಕ ತಿರುವಿನಿಂದ ನಿಲ್ಲದ ಅಪಘಾತ ಸರಣಿ

ಮಹಾನಗರ: ರಾಷ್ಟ್ರೀಯ ಹೆದ್ದಾರಿ 75ರ ಮರೋಳಿ-ಪಡೀಲ್‌ ನಡು ವಿನ “ಕೆಂಬಾರ್‌ ಪಡೀಲ್‌ ಕ್ರಾಸ್‌’ ತಿರುವಿನಲ್ಲಿ ಅಪಘಾತ ಸರಣಿ ಮುಂದುವರಿದಿದೆ. ಆದರೆ ಹೆದ್ದಾರಿ ಪ್ರಾಧಿಕಾರ ಅಥವಾ ಗುತ್ತಿಗೆದಾರ ಸಂಸ್ಥೆ ಅಪಘಾತ ತಡೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಬದಲು ಸಾರ್ವಜನಿಕರ ಕಣ್ಣೊರೆಸುವ ಕೆಲಸ ಮಾಡುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಹೆದ್ದಾರಿ ನಿರ್ಮಾಣಗೊಂಡ ಅನಂ ತರ ಸುಮಾರು 5 ವರ್ಷಗಳಲ್ಲಿ ನೂರಕ್ಕೂ ಅಧಿಕ ಅಪಘಾತಗಳು ಸಂಭವಿಸಿವೆ. ಸುಮಾರು 7 ಮಂದಿ ಯುವಕರು ಸಹಿತ ಅನೇಕ ಮಂದಿ ಪ್ರಾಣಕಳೆದುಕೊಂಡಿದ್ದಾರೆ. ಹತ್ತಾರು ಮಂದಿ ಗಾಯಾಳುಗಳಾಗಿದ್ದಾರೆ. ಕಳೆದೊಂದು ವಾರದಲ್ಲಿ ಮತ್ತೆ 5 ಅಪಘಾತಗಳು ಸಂಭವಿಸಿ ಮೂವರು ಗಾಯಗೊಂಡಿದ್ದಾರೆ.

ನಿತ್ಯ ನಿರಂತರ ಅಪಘಾತ  :

ಪ್ರತಿನಿತ್ಯವೂ  ಒಂದೆರಡು ಅಪಘಾತಗಳು ಇಲ್ಲಿ ಮಾಮೂಲು. ಬುಧವಾರ ಬೆಳಗ್ಗೆ ಇಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಬಿದ್ದು ಸವಾರ ಗಾಯಗೊಂಡಿದ್ದಾರೆ. ಎರಡು ದಿನಗಳ ಹಿಂದೆ ಇಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ವಾಹನ ಢಿಕ್ಕಿಯಾಗಿದೆ. ಅಪಘಾತ ನೋಡಿ ಸಾಕಾಗಿದೆ. ಪೊಲೀಸರು, ಹೆದ್ದಾರಿ ಇಲಾಖೆಯವರು, ಜನಪ್ರತಿನಿಧಿಗಳು ಸಹಿತ ಸಂಬಂಧಿಸಿದವರೆಲ್ಲರೂ ಸ್ಥಳಕ್ಕೆ ಬಂದು ನೋಡಿ ಹೋಗಿದ್ದಾರೆ. ಆದರೆ ಇನ್ನೂ ಯಾವುದೇ ಪರಿಹಾರ ದೊರೆತಿಲ್ಲ. ತಿರುವಿನಿಂದ ಕೂಡಿದ ರಸ್ತೆಯಿಂದಾಗಿ ಜೀವಗಳು ಹೋಗುತ್ತಲೇ ಇವೆ ಎಂದು ಸ್ಥಳೀಯರು ಅಲವತ್ತುಕೊಂಡಿದ್ದಾರೆ.

ಆಯಿಲ್‌, ಡೀಸೆಲ್‌ ರಸ್ತೆಗೆ :

ಇಷ್ಟೊಂದು ಕಡಿದಾದ ತಿರುವು ಹೆದ್ದಾರಿಯಲ್ಲಿ ಎಲ್ಲಿಯೂ ಇದ್ದಂತಿಲ್ಲ. ಇಲ್ಲಿ ಏಕಾಏಕಿ ಎದುರಾಗುವ ತಿರುವು ಚಾಲಕರು/ ಸವಾರರು ವಾಹನದ ಮೇಲಿನ ನಿಯಂತ್ರಣ ಕಳೆದುಕೊಳ್ಳುವಂತೆ ಮಾಡುತ್ತದೆ. ಅಲ್ಲದೆ ಟ್ಯಾಂಕರ್‌, ಇತರ ಕೆಲವು ವಾಹನಗಳು ಏಕಾಏಕಿ ತಿರುವು ಪಡೆದುಕೊಳ್ಳುವಾಗ ಅವುಗಳಲ್ಲಿರುವ ಆಯಿಲ್‌, ಡೀಸೆಲ್‌ ಅಥವಾ ಡಾಮರಿನಂತಹ ದ್ರವಗಳು ರಸ್ತೆಗೆ ಚೆಲ್ಲುತ್ತದೆ. ಇದರಿಂದಾಗಿ ಅದರ ಹಿಂದೆ ಬರುವ ವಾಹನಗಳು ನಿಯಂತ್ರಣ ಕಳೆದುಕೊಳ್ಳುತ್ತವೆ.

ಬುಧವಾರ ಬೆಳಗ್ಗೆ ಕೂಡ ಬೈಕ್‌ವೊಂದು ಸ್ಕಿಡ್‌ ಆಗಿಬಿದ್ದ ಅನಂತರ ರಸ್ತೆಗೆ ಸ್ಥಳೀಯ ಯುವಕರು ಮಣ್ಣಿನ ಪುಡಿ ಹಾಕಿದ್ದಾರೆ. ಇಲ್ಲಿ ರಾತ್ರಿ ಹಗಲು ಅಪಘಾತದಲ್ಲಿ ಗಾಯಗೊಂಡವರ ಜೀವ ಉಳಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಆದರೆ ದಿನನಿತ್ಯ ಅಪಘಾತಗಳಾಗುತ್ತಿರುವುದರಿಂದ ನಮಗೂ ಸಾಕಾಗಿ ಹೋಗಿದೆ ಎನ್ನುತ್ತಾರೆ ಸ್ಥಳೀಯರು.

ಹುಲ್ಲು ತೆರವು  :

ಇಲ್ಲಿ ವಾರದ ಹಿಂದೆ ವಾಹನಗಳು ಪಾದಚಾರಿಗಳಿಗೆ ಢಿಕ್ಕಿ ಹೊಡೆದ ಅನಂತರ ಪಾಲಿಕೆಯವರು ರಸ್ತೆ ಪಕ್ಕದ ಹುಲ್ಲು, ಕುರುಚಲು ಗಿಡಗಳನ್ನು ತೆರವುಗೊಳಿಸಿದ್ದಾರೆ.

ಹೆದ್ದಾರಿ ಇಲಾಖೆಯವರು ಎರಡು ದಿನಗಳ ಹಿಂದೆ ಹೆದ್ದಾರಿ ಪಕ್ಕದ ಮರಗಳಿಗೆ ಬಿಳಿ ಬಣ್ಣವನ್ನು ಸವರಿದ್ದಾರೆ. ಅದನ್ನು ಬಿಟ್ಟರೆ ಬೇರೆ ಯಾವುದೇ ಕ್ರಮಗಳು ಆಗಿಲ್ಲ. ವಾಹನಗಳು ಢಿಕ್ಕಿ ಹೊಡೆದು ಹಾನಿಗೊಂಡ ಡಿವೈಡರ್‌ ಹಾಗೆಯೇ ಇದೆ. ಎಚ್ಚರಿಕೆ, ಸೂಚನೆ ಫ‌ಲಕಗಳಿಲ್ಲ. ವಾಹನ ಢಿಕ್ಕಿ ಹೊಡೆದು ಮುರಿದು ಹೋದ ವಿದ್ಯುತ್‌ ಕಂಬವನ್ನು ಮತ್ತೆ ಹಾಕಿಲ್ಲ. ಇದೇ ಸ್ಥಳದಲ್ಲಿ ತಿಂಗಳ ಹಿಂದೆ ಬೈಕ್‌ ಸವಾರನೋರ್ವ ಮೃತಪಟ್ಟಿದ್ದರು.

ತಿರುವು ಸರಿಪಡಿಸಿ :

ಇಲ್ಲಿ ನಡೆಯುತ್ತಿರುವ ಅಪಘಾತಗಳಿಗೆ ತಿರುವಿನಲ್ಲಿ ವಾಹನಗಳು ನಿಯಂತ್ರಣ ಕಳೆದುಕೊಳ್ಳುವುದೇ ಮುಖ್ಯ ಕಾರಣ. ಹೆಚ್ಚಾಗಿ ದ್ವಿಚಕ್ರ ವಾಹನ ಸವಾರರೇ ಬಲಿಯಾಗುತ್ತಿದ್ದಾರೆ. ತಿರುವು ಸರಿಪಡಿ ಸುವುದೊಂದೇ ಪರಿಹಾರ. ರಸ್ತೆಯ ಅಂಚಿನಲ್ಲಿ ಸ್ವಲ್ಪವೂ ಜಾಗ ಇಲ್ಲದೇ ಇರುವುದರಿಂದ ಇಲ್ಲಿ ನಡೆದುಕೊಂಡು ಹೋಗುವವರಿಗೂ ವಾಹನಗಳು ಢಿಕ್ಕಿ ಹೊಡೆಯುತ್ತಿವೆ ಎನ್ನುತ್ತಾರೆ ಸ್ಥಳೀಯರಾದ ಸುನೀತಾ ನೊರೊನ್ಹಾ, ಕುಶಲಾ ಅವರು.

ಹೆದ್ದಾರಿಗೆ ಅಗತ್ಯವಾದ ಭೂಸ್ವಾಧೀನಕ್ಕೂ ಕೆಲವೆಡೆ ಸಮಸ್ಯೆ ಇದೆ. ಅಪಘಾತಕ್ಕೆ ಕೆಲವೊಮ್ಮೆ ನಿರ್ಲಕ್ಷ್ಯದ ಚಾಲನೆಯೂ ಕಾರಣವಾಗಿರುತ್ತದೆ. ಅಪಘಾತ ಸಂಭವಿಸುತ್ತಿರುವ ಪಡೀಲ್‌ ಕ್ರಾಸ್‌ಗೆ ಶೀಘ್ರದಲ್ಲೇ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಕ್ರಮಕ್ಕೆ ಸೂಚನೆ ನೀಡುತ್ತೇನೆ.-ಶಿಶು ಮೋಹನ್‌,  ಯೋಜನಾ ನಿರ್ದೇಶಕರು, ರಾ.ಹೆ. ಪ್ರಾಧಿಕಾರ, ಮಂಗಳೂರು

ಮರೋಳಿ ಪಡೀಲ್‌ ಕ್ರಾಸ್‌ನಲ್ಲಿ ನಿರಂತರವಾಗಿ ಅಪಘಾತ ಸಂಭವಿಸುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಹೆದ್ದಾರಿಯವರಿಗೆ ಹಲವು ಬಾರಿ ತಿಳಿಸಲಾಗಿದೆ. ಆದರೆ ಪ್ರಯೋಜನವಾಗಿಲ್ಲ. ಶೀಘ್ರದಲ್ಲಿಯೇ ಇಲ್ಲಿ ನಡೆದಿರುವ ಸಾವು ನೋವಿನ ಅಂಕಿ ಅಂಶ ಸಹಿತವಾಗ ಸಮಗ್ರ ವರದಿಯನ್ನು ಇಲಾಖೆಗೆ ಸಲ್ಲಿಸಿ ಸಂಸದರು, ಜಿಲ್ಲಾಧಿಕಾರಿಯವರ ಗಮನಕ್ಕೂ ತರಲಾಗುವುದು. ತಿರುವು ಸರಿಪಡಿಸಿಕೊಡುವವರೆಗೂ ಪ್ರಯತ್ನ ನಿಲ್ಲಿಸುವುದಿಲ್ಲ. -ರೂಪಶ್ರೀ, ಸ್ಥಳೀಯ ಕಾರ್ಪೋರೆಟರ್‌

 

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.