ಕರಾವಳಿಯಲ್ಲಿ ಏರಿಕೆಯಾಗುತ್ತಿದೆ ಲಸಿಕೆ ಗುರಿ
Team Udayavani, Jan 21, 2021, 7:25 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 12 ಕೇಂದ್ರಗಳಲ್ಲಿ ಬುಧವಾರ 1,097 ಮಂದಿಗೆ ಕೋವಿಡ್ ಲಸಿಕೆ ಗುರಿ ಹೊಂದಿದ್ದು, 681 ಮಂದಿಗೆ ಹಾಕಲಾಗಿದೆ. ಈ ಮೂಲಕ ಶೇ. 62.08 ಗುರಿ ಸಾಧನೆಯಾಗಿದೆ.
ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ಆರಂಭಗೊಂಡು ನಾಲ್ಕು ದಿನಗಳಾಗಿದ್ದು, ದಿನದಿಂದ ದಿನಕ್ಕೆ ಲಸಿಕೆ ಪಡೆದುಕೊಳ್ಳುವವರ ಸಂಖ್ಯೆ ಏರುತ್ತಿದೆ.
ಜ. 25: ಎರಡನೇ ಹಂತದ ಪಟ್ಟಿ :
ಲಸಿಕೆ ನೀಡುವ ಮೊದಲ ಹಂತದ ಅಭಿಯಾನ ಸದ್ಯ ನಡೆಯುತ್ತಿದ್ದು, ಸದ್ಯದಲ್ಲಿಯೇ 2ನೇ ಹಂತದ ಅಭಿಯಾನ ನಡೆಯಲಿದೆ. ಸಿದ್ಧತೆಗಳು ಈಗಾಗಲೇ ನಡೆಯುತ್ತಿವೆ. ಎರಡನೇ ಹಂತದಲ್ಲಿ ಪೊಲೀಸ್ ಇಲಾಖೆ, ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಲಸಿಕೆ ನೀಡಲಾಗುತ್ತದೆ. ಇಲಾಖೆಯಿಂದ ಹೆಸರಿನ ಪಟ್ಟಿ ಸಲ್ಲಿಕೆಗೆ ಜ. 25ರಂದು ಕೊನೆಯ ದಿನವಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲೆ: ಶೇ. 64.5 ಪ್ರಗತಿ :
ಉಡುಪಿ: ಜಿಲ್ಲೆಯಲ್ಲಿ ಬುಧವಾರ 829 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. 1,256 ಮಂದಿಗೆ ಮಂದಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿತ್ತು. ಇದುವರೆಗೆ ಜಿಲ್ಲೆಯಲ್ಲಿ 2,230 ಗುರಿ ನೀಡಲಾಗಿತ್ತು. 1,439 ಮಂದಿಗೆ ಲಸಿಕೆ ಹಾಕಲಾಗಿದೆ. ಒಟ್ಟು ಶೇ. 64.5 ಪ್ರಗತಿ ಸಾಧಿಸಿದೆ. ಜ. 21ಕ್ಕೆ 1,300 ಲಸಿಕೆ ವಿತರಣೆ ಗುರಿ ನಿಗದಿ ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ