ಪಾಲಿಕೆ ವ್ಯಾಪ್ತಿಯಲ್ಲಿ ಇಂದ್ರಧನುಷ್‌ ನಗರ ಲಸಿಕಾ ಅಭಿಯಾನ


Team Udayavani, Jul 14, 2018, 2:40 AM IST

vaccination-13-7.jpg

ಮಹಾನಗರ: ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಲ್ಲಿ ಇಂದ್ರಧನುಷ್‌-ನಗರ ಲಸಿಕಾ ಅಭಿಯಾನ ಜು. 16, 17, 18, 20, ಆ. 13, 14, 17 ಹಾಗೂ 18 ಮತ್ತು ಸೆ. 10, 11, 14, 15ರಂದು ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ರಾವ್‌ ತಿಳಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಈ ಕುರಿತು ಮಾಹಿತಿ ನೀಡಿದ ಅವರು, ಅಂದಾಜು 318 ಗರ್ಭಿಣಿಯರು, 815 ಮಂದಿ ಎರಡು ವರ್ಷದೊಳಗಿನ ಮಕ್ಕಳು ಹಾಗೂ 22 ಮಂದಿ 5ರಿಂದ 6 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ. ಹೊರ ಜಿಲ್ಲೆಯವರು ಲಸಿಕಾ ಕೇಂದ್ರಕ್ಕೆ ಬಂದರೆ ಅವರಿಗೂ ಲಸಿಕೆ ಹಾಕಿಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಈ ಹಿಂದೆ ಲಸಿಕೆ/ಚುಚ್ಚುಮದ್ದು ಪಡೆಯಲು ಬಾಕಿ ಇರುವ ಮತ್ತು ಈಗ ಲಸಿಕೆ ಪಡೆಯಬೇಕಾದ ಗರ್ಭಿಣಿಯರು, ಈ ಹಿಂದೆ ಲಸಿಕೆ/ಚುಚ್ಚುಮದ್ದು ಪಡೆಯಲು ಬಾಕಿ ಇರುವ ಮತ್ತು ಪ್ರಸ್ತುತ ಲಸಿಕೆ/ಚುಚ್ಚುಮದ್ದು ಪಡೆಯಬೇಕಾಗಿರುವ ಎರಡು ವರ್ಷದೊಳಗಿನ ಮಕ್ಕಳು, ಈ ಹಿಂದೆ ಲಸಿಕೆ/ಚುಚ್ಚುಮದ್ದು ಪಡೆಯಲು ಬಾಕಿ ಇರುವ ಮತ್ತು ಈಗ ಲಸಿಕೆ ಪಡೆಯಬೇಕಾಗಿರುವ 5ರಿಂದ 6 ವರ್ಷದ ಶಾಲೆ ಬಿಟ್ಟ ಮಕ್ಕಳು ತಪ್ಪದೇ ಲಸಿಕೆ ಹಾಕಿಸಿಕೊಳ್ಳಬೇಕು. ಈ ಅಭಿಯಾನದಡಿ ಗರ್ಭಿಣಿಯರಿಗೆ ಟಿಟಿ ಲಸಿಕೆ, ಎರಡು ವರ್ಷದೊಳಗಿನ ಮಕ್ಕಳಿಗೆ ಬಿಸಿಜಿ, ಪೋಲಿಯೋ, ದಡಾರ ಮತ್ತು ರುಬೆಲ್ಲಾ ಪ್ರತ್ಯೇಕ ಲಸಿಕೆ ಹಾಗೂ ಡಿಪಿಟಿ ಮುಂತಾದವು ಮತ್ತು 5-6 ವರ್ಷದೊಳಗಿನ ಮಕ್ಕಳಿಗೆ ಡಿಪಿಟಿ ಬೂಸ್ಟರ್‌ನ್ನು ಹಾಕಲಾಗುವುದು ಎಂದು ಅವರು ವಿವರಿಸಿದರು. ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ಅಶೋಕ್‌, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ| ರಾಜೇಶ್‌, ಡಾ| ಸಿಕಂದರ್‌ ಪಾಶಾ ಮತ್ತಿತರರು ಉಪಸ್ಥಿತರಿದ್ದರು.

ಲಸಿಕೆ ಹಾಕುವ ಕೇಂದ್ರಗಳ ವಿವರ
ಜು. 16ರಂದು ಬೆಳಗ್ಗೆ 10 ಗಂಟೆಗೆ ಜೆಪ್ಪು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಭಿಯಾನ ಉದ್ಘಾಟನೆಗೊಳ್ಳಲಿದೆ. ಜೆಪ್ಪು, ಪಡೀಲ್‌ (ಮರೋಳಿ), ಶಕ್ತಿನಗರ, ಬಂದರು, ಕಸಬಾ ಬೆಂಗ್ರೆ, ಕುಳಾಯಿ (ಹೊನ್ನಕಟ್ಟೆ), ಸುರತ್ಕಲ್‌, ಎಕ್ಕೂರು, ಕೂಳೂರು-ಕುಂಜತ್ತಬೈಲ್‌, ಲೇಡಿಹಿಲ್‌ಗ‌ಳಲ್ಲಿ ಉಚಿತವಾಗಿ ಲಸಿಕೆ/ ಚುಚ್ಚುಮದ್ದು ದೊರೆಯಲಿದೆ. ಇದಲ್ಲದೆ 83 ಲಸಿಕಾ ಬೂತ್‌ಗಳಲ್ಲಿಯೂ ಲಸಿಕೆ ಹಾಕಲಾಗುವುದು. ಗರ್ಭಿಣಿಯರು ಮತ್ತು ನಿರ್ಧರಿತ ವಯೋಮಾನದ ಮಕ್ಕಳು ಸಂಪೂರ್ಣವಾಗಿ ಲಸಿಕೆ ಪಡೆದಿದ್ದಾರೆಯೇ ಎಂದು ಸನಿಹದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಕ್ಷೇತ್ರದ ಆರೋಗ್ಯ ಕಾರ್ಯಕರ್ತೆ, ಆಶಾ ಕಾರ್ಯಕರ್ತೆ ಅಥವಾ ಅಂಗನವಾಡಿ ಕಾರ್ಯಕರ್ತೆಯರಲ್ಲಿ ಖಾತರಿಪಡಿಸಿಕೊಳ್ಳಬೇಕು. ಬಾಕಿ ಇದ್ದಲ್ಲಿ ಲಸಿಕೆ ಹಾಕಿಸಬೇಕು ಎಂದು ಡಾ| ರಾಮಕೃಷ್ಣ ರಾವ್‌ ತಿಳಿಸಿದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.