ಇಂಡಿಯನ್ ಡಿಜಿಟಲ್ ಯುನಿವರ್ಸಿಟಿ ಮೂಲಕ 15 ಲಕ್ಷ ಶಿಕ್ಷಕರಿಗೆ ತರಬೇತಿ
Team Udayavani, Nov 6, 2022, 9:13 AM IST
ಉಳ್ಳಾಲ : ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಬಳಿಕ ಬದಲಾಗುತ್ತಿರುವ ಉನ್ನತ ಶಿಕ್ಷಣಕ್ಕೆ ಶಿಕ್ಷಕರನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಇಂಡಿಯನ್ ಡಿಜಿಟಲ್ ಯುನಿವರ್ಸಿಟಿ ಮೂಲಕ 15 ಲಕ್ಷ ಶಿಕ್ಷಕರಿಗೆ ಆನ್ಲೈನ್ ಮತ್ತು ಆಫ್ಲೈನ್ನ ಮೂಲಕ ತರಬೇತಿ ನೀಡಲು ಉದ್ದೇಶಿಸಿದ್ದು, ದೇಶಾದ್ಯಂತ ಸುಮಾರು 100 ಕೇಂದ್ರಗಳಲ್ಲಿ ತರಬೇತಿ ನೀಡಲು ವಿ.ವಿ. ಧನಸಹಾಯ ಆಯೋಗ ಯೋಜಿಸಿದೆ ಎಂದು ಆಯೋಗದ ಅಧ್ಯಕ್ಷ ಎಂ. ಜಗದೀಶ್ ಕುಮಾರ್ ತಿಳಿಸಿದರು.
ನಿಟ್ಟೆ ವಿ.ವಿ.ಯ ಪದವಿ ಪ್ರದಾನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊದಿಗೆ ಮಾತನಾಡಿದ ಅವರು, ಜುಲೈ 2023ರಿಂದ ಕಾರ್ಯನಿರ್ವಹಣೆ ಆರಂಭಿಸಲಿರುವ ಇಂಡಿಯನ್ ಡಿಜಿಟಲ್ ಯೂನಿವರ್ಸಿಟಿ ಮೂಲಕ ಶಿಕ್ಷಕರಿಗೆ ಭಾಗಶಃ ಆನ್ಲೈನ್ ಮೂಲಕ ತರಬೇತಿ ನೀಡಲು ಉದ್ದೇಶಿಸಲಾಗಿದೆ. ತರಬೇತಿಯ ವಿಧಾನಗಳನ್ನು ರೂಪಿಸಲು ಮತ್ತು ತರಬೇತಿ ಕೇಂದ್ರಗಳನ್ನು ಆಯ್ಕೆ ಮಾಡಲು ಶಿಕ್ಷಣ ಸಚಿವಾಲಯ, ಎಐಸಿಟಿಇ, ಯುಜಿಸಿ ಮತ್ತು ಇತರ ಮಧ್ಯಸ್ಥಗಾರರ ಪ್ರತಿನಿಧಿ ಗಳನ್ನು ಒಳಗೊಂಡ ಸಮಿತಿಯನ್ನು ಯುಜಿಸಿ ರಚಿಸಿದೆ. ತರಬೇತಿಗಾಗಿ ಐಐಟಿ ಮತ್ತು ಐಐಎಂ ತಜ್ಞರನ್ನು ನೇಮಿಸಿಕೊಳ್ಳಲಾಗುವುದು ಎಂದರು.
ಆಮೂಲಾಗ್ರ ಬದಲಾವಣೆ
ದೇಶದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಗಾಗಿ ಎಐಸಿಟಿಇ, ಯುಜಿಸಿ, ಎನ್ಸಿಟಿಇ ಮೊದಲಾದ ಮಂಡಳಿಗಳನ್ನು ವಿಲೀನಗೊಳಿಸಿ ರಾಷ್ಟ್ರೀಯ ಉನ್ನತ ಶಿಕ್ಷಣ ನಿಯಂತ್ರಣ ಮಂಡಳಿಯನ್ನು ರಚಿಸ ಲಾಗುತ್ತಿದೆ. ವೈದ್ಯಕೀಯ, ಕಾನೂನು, ಕೃಷಿ ಸೇರಿದಂತೆ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳೂ ಇದರ ವ್ಯಾಪ್ತಿಗೆ ಬರಲಿವೆ. ನ್ಯಾಕ್, ಎನ್ಐಆರ್ಎಫ್ ಮೊದಲಾದ ಮಾನ್ಯತಾ ಸಂಸ್ಥೆಗಳನ್ನು ಒಗ್ಗೂಡಿಸಿ ನ್ಯಾಶನಲ್ ಅಕ್ರೆಡಿಟೇಷನ್ ಕೌನ್ಸಿಲನ್ನು ರಚಿಸಲಾಗುತ್ತದೆ. ಅವರು ಭಾರತೀಯ ಉನ್ನತ ಶಿಕ್ಷಣ ಆಯೋಗ ಮಸೂದೆಯನ್ನು ಕಾಯ್ದೆಯಾಗಿ ಜಾರಿಗೊಳಿಸಲು ಶಿಕ್ಷಣ ಸಂಸ್ಥೆಗಳನ್ನು ಸಜ್ಜುಗೊಳಿಸಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ