ಇಂದಿರಾ ಕ್ಯಾಂಟೀನ್‌ ಕಾಮಗಾರಿ ನಿಲುಗಡೆ 


Team Udayavani, Apr 29, 2018, 12:24 PM IST

29-April-9.jpg

ಬಂಟ್ವಾಳ:ಆಡಳಿತ ವ್ಯವಸ್ಥೆಯ ದುರುಪಯೋಗ ದೂರಿನಂತೆ ಬಿ.ಸಿ. ರೋಡ್‌ನ‌ಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಾಣ ಕಾಮಗಾರಿಯನ್ನು ಚುನಾವಣಾಧಿಕಾರಿ ನಿಲುಗಡೆ ಮಾಡಿದ್ದಾರೆ. ಬಂಟ್ವಾಳ ಪುರಸಭೆಯ ಜೆಸಿಬಿ ಬಳಸಿ ಕ್ಯಾಂಟೀನ್‌ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದುದನ್ನು ಆಕ್ಷೇಪಿಸಿ ಪುರಸಭಾ ಸದಸ್ಯ ಎ. ಗೋವಿಂದ ಪ್ರಭು ನೀಡಿದ ದೂರಿನ ಬಳಿಕ ನೀತಿ ಸಂಹಿತೆ ಉಲ್ಲಂಘನೆ ಆರೋಪದಂತೆ ಚುನಾವಣಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಕ್ಯಾಂಟೀನ್‌ ನಿರ್ಮಾಣ ಕಾಮಗಾರಿಗೆ ಗುತ್ತಿಗೆ ವಹಿಸಿದ ವ್ಯಕ್ತಿ ಬಳಕೆ ಮಾಡಿದ ಯಂತ್ರ ಕೆಎ 19 ಜಿ 0735 ಪುರಸಭೆಯದ್ದಾಗಿದ್ದು, ಇಲ್ಲಿ ಯಾಕೆ ಬಳಸಿದ್ದು ಎಂಬುದಾಗಿ ಪ್ರಶ್ನಿಸಲಾಗಿತ್ತು. ತ್ವರಿತ ಕಾಮಗಾರಿ ಉದ್ದೇಶದಿಂದ ಚುನಾವಣೆ ಸಂದರ್ಭ ಕಾಮಗಾರಿ ಮಾಡಿದ್ದನ್ನು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಎಂದು ದೂರಲಾಗಿತ್ತು. ಕ್ಯಾಂಟೀನ್‌ ನಿರ್ಮಾಣ ಕಾಮಗಾರಿ ಕಳೆದ ಒಂದು ತಿಂಗಳಿಂದ ನಡೆಯುತ್ತಿತ್ತು

ಮುಖ್ಯಾಧಿಕಾರಿ ವರ್ಗಾವಣೆ 
ಸಹಾಯಕ ಚುನಾವಣಾಧಿಕಾರಿ ವೈ. ರವಿ ಮಾಹಿತಿ ನೀಡಿ, ಗುತ್ತಿಗೆಯ ಶರ್ತದಂತೆ ಬಂಟ್ವಾಳ ಪುರಸಭೆಯು ಇಂದಿರಾ ಕ್ಯಾಂಟೀನ್‌ಗೆ ನೀರಿನ ವ್ಯವಸ್ಥೆ ಮಾಡಬೇಕಾಗಿತ್ತು. ಅದರ ಕಾಮಗಾರಿ ನಿರ್ವಹಿಸಲು ಸೂಚಿಸಿದಂತೆ ಪುರಸಭೆಯ ಜೆಸಿಬಿ ಬಳಸಿ ಕೆಲಸ ಮಾಡುತ್ತಿದ್ದರು. ದೂರು ಬಂದ ಬಳಿಕ ಕಾಮಗಾರಿ ನಿಲುಗಡೆ ಮಾಡಿದ್ದು, ಸಂಬಂಧಪಟ್ಟವರಿಗೆ ನೋಟಿಸು ನೀಡಿದ್ದಾಗಿ ತಿಳಿಸಿದ್ದಾರೆ. ಇದರ ಅನಂತರದ ಬೆಳವಣಿಗೆಯಲ್ಲಿ ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ಅವರನ್ನು ಮೂಡಬಿದಿರೆಗೆ ಸ್ಥಳಾಂತರ ಮಾಡಿದ್ದು, ಅಲ್ಲಿನ ಮುಖ್ಯಾಧಿಕಾರಿ ರಾಜಪ್ಪ ಅವರನ್ನು ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಯಾಗಿ ನಿಯುಕ್ತಿ ಕ್ರಮಗಳು ಆಗಲಿವೆ ಎಂದು ತಿಳಿಸಿದ್ದಾರೆ.

ಉಲ್ಲಂಘನೆ
ಚುನಾವಣೆ ಘೋಷಣೆ ಬಳಿಕ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸರಕಾರಕ್ಕೆ ಸಂಬಂಧಿಸಿದ ಯಾವುದೇ ಕಾಮಗಾರಿ ನಡೆಸುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಕ್ಯಾಂಟೀನ್‌ ನಿರ್ಮಾಣಕ್ಕೆ ಪುರಸಭೆ ಜೆಸಿಬಿ ನೀಡುವ ಅಗತ್ಯವಿಲ್ಲ. ಅದಕ್ಕೆ ನೀರು ಒದಗಿಸುವ ಕೆಲಸದ ಕಾಮಗಾರಿ ಕೂಡಾ ಪುರಸಭೆ ಮಾಡುವುದಕ್ಕಿಲ್ಲ.
-ಎ. ಗೋವಿಂದ ಪ್ರಭು
ಪುರಸಭೆ ಬಿಜೆಪಿ ವಿಪಕ್ಷ ಸದಸ್ಯರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.