ಇಂದಿರಾ ಕ್ಯಾಂಟೀನ್ ಕಾಮಗಾರಿ ಅಂತಿಮ ಹಂತಕ್ಕೆ
Team Udayavani, Jul 22, 2019, 5:56 AM IST
ಸುಳ್ಯ: ಹಲವು ತಿಂಗಳಿನಿಂದ ಉದ್ಘಾಟನೆಗೆ ಕಾಯುತ್ತಿರುವ ಇಂದಿರಾ ಕ್ಯಾಂಟೀನ್ ಶೀಘ್ರ ಕಾರ್ಯಾರಂಭಕ್ಕೆ ಸಂಬಂಧಿಸಿ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ಗುತ್ತಿಗೆ ಸಂಸ್ಥೆ ಕ್ಯಾಂಟೀನ್ ಆರಂಭಿಸಲು ತೆಗೆದುಕೊಂಡಿರುವ ಕಾಲಾ ವಕಾಶದಲ್ಲಿ ಇನ್ನು ಒಂದು ವಾರ ಮಾತ್ರ ಉಳಿದಿದೆ..!
ದ.ಕ.ಜಿಲ್ಲೆ ಸಹಿತ ರಾಜ್ಯದ ವಿವಿಧ ತಾಲೂಕಿನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಗೊಂಡು ಕಡಿಮೆ ದರದಲ್ಲಿ ಊಟ- ಉಪಾಹಾರ ವಿತರಣೆ ಆರಂಭ ಗೊಂಡಿತ್ತು. ಸುಳ್ಯದಲ್ಲಿ ಕಟ್ಟಡ ಸಿದ್ಧವಿದ್ದರೂ ಪ್ರಾರಂಭಕ್ಕೆ ಕಾಲ ಕೂಡಿ ಬಂದಿರಲಿಲ್ಲ. ಹೀಗಾಗಿ 15 ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲು ತಾಲೂಕು ಆಡಳಿತ ಸಂಬಂಧಿಸಿದ ಗುತ್ತಿಗೆ ಸಂಸ್ಥೆಗೆ ಸೂಚಿಸಿತ್ತು.
ಆವರಣ ಗೋಡೆ ನಿರ್ಮಾಣ ಪ್ರಗತಿ
ಕ್ಯಾಂಟೀನ್ ಸುತ್ತ ಆವರಣ ಗೋಡೆ ನಿರ್ಮಾಣ ಕಾಮಗಾರಿ ಆರಂಭಿಸಿದ್ದು, ಅದು ಅಂತಿಮ ಹಂತಕ್ಕೆ ತಲುಪಿದೆ. ಮುಂದಿನ 1 ವಾರದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ತಾಲೂಕು ಆಡಳಿತ ಸೂಚನೆ ನೀಡಿರುವುದರಿಂದ ಕಾಮಗಾರಿಗೆ ವೇಗ ನೀಡಲಾಗಿದೆ.
ಒಂದು ವಾರ ಬಾಕಿ
ಇಂದಿರಾ ಕ್ಯಾಂಟೀನ್ ಅನ್ನು ಕಾರ್ಯಾರಂಭಿಸುವ ಕುರಿತಂತೆ ಸಂಬಂಧಿಸಿದ ಸಂಸ್ಥೆಗೆ ಸೂಚನೆ ನೀಡಲಾಗಿತ್ತು. ಈ ವೇಳೆ ಅಂತಿಮ ಹಂತದ ಕೆಲಸ ಪೂರ್ಣಗೊಳಿಸಲು 15 ದಿನ ಕಾಲಾವಕಾಶ ಕೇಳಿದ್ದರು. ಇದರಲ್ಲಿ ಇನ್ನು ಒಂದು ವಾರ ಬಾಕಿ ಇದೆ. ಆವರಣ ಗೋಡೆ ಕಾಮಗಾರಿ ಪೂರ್ಣಗೊಳಿಸಿದ ತತ್ಕ್ಷಣ ಕ್ಯಾಂಟೀನ್ ಕಾರ್ಯಾರಂಭಿಸುವುದಾಗಿ ಗುತ್ತಿಗೆ ಸಂಸ್ಥೆ ತಿಳಿಸಿದೆ..
– ಕುಂಞಿ ಅಹ್ಮದ್ ತಹಶೀಲ್ದಾರ್, ಸುಳ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ