ದಕ್ಷಿಣ ಕನ್ನಡ: ಸಾಲು ಸಾಲು ಕೈಗಾರಿಕಾ ವಿಪತ್ತು!
Team Udayavani, Apr 22, 2022, 6:03 AM IST
ಸುರತ್ಕಲ್: ದಕ್ಷಿಣ ಕನ್ನಡ ಜಿಲ್ಲೆಯ ಕೈಗಾರಿಕಾ ಪ್ರದೇಶಗಳಲ್ಲಿ ಒಂದಾಗಿರುವ ಸುರತ್ಕಲ್, ಬೈಕಂಪಾಡಿ, ಪಣಂಬೂರು ಕೈಗಾರಿಕಾ ಪ್ರಾಂಗಣದಲ್ಲಿ ಕಳೆದ ಒಂದು ವರುಷದ ಅವಧಿಯಲ್ಲಿ ಹಲವು ವಿಪತ್ತುಗಳು ಸಂಭವಿ ಸಿವೆ. ಹಲವಾರು ಕಾರ್ಮಿಕರು ಗಾಯಗೊಂಡು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆದಿದ್ದಾರೆ.
ಇದಕ್ಕೆ ಇತ್ತೀಚೆಗಿನ ಸೇರ್ಪಡೆ ಪೆರ್ಮುದೆಯ ಮೀನು ಸಂಸ್ಕರಣ ಘಟಕದಲ್ಲಿ ತ್ಯಾಜ್ಯ ಟ್ಯಾಂಕ್ ಸ್ವತ್ಛಗೊಳಿಸಲು ಇಳಿದ ಪಶ್ಚಿಮ ಬಂಗಾಲ ಮೂಲದ ಕಾರ್ಮಿಕರಲ್ಲಿ ಐವರು ಸಾವಿಗೀಡಾಗಿರುವುದು.
ವಿಶೇಷ ಆರ್ಥಿಕ ವಲಯದಲ್ಲಿ ಈ ಹಿಂದೆ ಸುಗಂಧ ದ್ರವ್ಯ ತಯಾರಿ ಘಟಕದಲ್ಲಿ ಅಗ್ನಿ ಅನಾಹುತ ವಾಗಿತ್ತು. ಆದರೆ ಕಾರ್ಮಿಕರಿಗೆ ಅಪಾಯವಾಗಿರಲಿಲ್ಲ. ಈಗ ಮೀನು ಸಂಸ್ಕರಣ ಘಟಕದಲ್ಲಿ ದುರಂತ ಸಂಭವಿಸಿದೆ.
ಇದೇ ಜನವರಿಯಲ್ಲಿ ಬೈಕಂಪಾಡಿ ಕೈಗಾರಿಕ ಪ್ರದೇಶದಲ್ಲಿರುವ ಮೀನು ಸಂಸ್ಕರಣೆ ಘಟಕದಲ್ಲಿ ರಾಸಾಯನಿಕ ಸೋರಿಕೆಯಾಗಿ 20 ಉದ್ಯೋಗಿಗಳು ಉಸಿರಾಟದ ತೊಂದರೆ ಅನುಭವಿಸಿದ್ದು, ಆಸ್ಪತ್ರೆಗೆ ಸೇರಿಸಿ ತುರ್ತು ಚಿಕಿತ್ಸೆ ಕೊಡಿಸಬೇಕಾಯಿತು. ಅಲ್ಲಿದ್ದ ಬಹು ತೇಕರು ಅನ್ಯ ರಾಜ್ಯದ ವಲಸೆ ಕಾರ್ಮಿಕರು. ಇದೇ ತಿಂಗಳಲ್ಲಿ ಖಾಸಗೀ ಸ್ಪ್ರಿಂಗ್ ಉತ್ಪಾದನ ಘಟಕದಲ್ಲಿದ್ದ ಫರ್ನೇಸ್ ಆಯಿಲ್ಗೆ ಬೆಂಕಿ ತಗುಲಿ ಅನಾಹುತ ಸಂಭವಿಸಿ ಕೋಟ್ಯಂತರ ರೂ. ನಷ್ಟವಾಗಿತ್ತು. ಕಾರ್ಮಿಕರು ಜೀವಾಪಾಯದಿಂದ ಪಾರಾಗಿದ್ದರು. ವಾರಗಳ ಹಿಂದೆ ಪಣಂಬೂರು ಬಂದರು ಮುಂಭಾಗದಲ್ಲಿ ಸರಕು ಹೇರಿಕೊಂಡು ಬಂದ ಕಂಟೈನರ್ನಲ್ಲಿ ಅಗ್ನಿ ಅನಾಹುತ ಸಂಭವಿಸಿ ಲಕ್ಷಾಂತರ ರೂ. ನಷ್ಟವಾಗಿತ್ತು.
ಉಡುಪಿ ಜಿಲ್ಲೆಯ ಕಾಪುವಿನ ಗುಜರಿ ದಾಸ್ತಾನು ಮಳಿಗೆಯಲ್ಲೂ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಇಬ್ಬರನ್ನು ಸಾವನ್ನಪ್ಪಿದ್ದನ್ನು ಸ್ಮರಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ