ಜಾಗೃತಿ ಅಭಿಯಾನದ ಸರಣಿ ಪೊಲೀಸರಿಂದ ಚಾಲನೆ


Team Udayavani, May 26, 2019, 11:16 AM IST

po

ಪುತ್ತೂರು: ವಾಹನಗಳಲ್ಲಿ ಅಪಾಯಕಾರಿಯಾಗಿ ಜನರನ್ನು ತುಂಬಿಸಿಕೊಂಡು ಹೋಗುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್‌ ಠಾಣೆಯ ವತಿಯಿಂದ ಜಾಗೃತಿ ಅಭಿಯಾನದ ಸರಣಿ ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ.

ಸರಕು ಸಾಗಾಟ ವಾಹನಗಳಲ್ಲಿ ಅತ್ಯಂತ ಅಪಾಯಕಾರಿ ರೀತಿಯಲ್ಲಿ ಕಾರ್ಮಿಕರನ್ನು ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟುವ ಉದ್ದೇಶದಿಂದ ಶುಕ್ರವಾರ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಪುತ್ತೂರು ನಗರ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಶಶಿಕುಮಾರ್‌ ಅವರ ನೇತೃತ್ವದಲ್ಲಿ ಆರಂಭದಲ್ಲಿ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗೀಯ ಕಚೇರಿಗೆ ತೆರಳಿದ ಪೊಲೀಸ್‌ ಅಧಿಕಾರಿಗಳ ತಂಡ ನಿಗಮದ ಎಲ್ಲ ಅಧಿಕಾರಿಗಳಿಗೆ ವಿಷಯ ಮನವರಿಕೆ ಮಾಡಿ ಸರಕಾರದ ಆದೇಶದ ಕುರಿತು ವಿವರಣೆ ನೀಡಿದರು. ಸಂಚಾರ ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಮಹಾಬಲ ಶೆಟ್ಟಿ ಜತೆಗಿದ್ದರು.

ರಿಕ್ಷಾ ಚಾಲಕರಿಗೆ ಸೂಚನೆ
ಅನಂತರ ನಗರದ ನಾನಾ ರಿಕ್ಷಾ ಪಾರ್ಕಿಂಗ್‌ ಪ್ರದೇಶಗಳಿಗೆ ತೆರಳಿ ಅಲ್ಲಿ ಚಾಲಕರಿಗೆ ಸಾಮೂಹಿಕವಾಗಿ ಮಾಹಿತಿ ನೀಡಿದರು. ಶಾಲಾ ಕಾಲೇಜುಗಳು ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದ್ದು, ಆಟೋ ರಿಕ್ಷಾಗಳಲ್ಲಿ ಮಿತಿಗಿಂತ ಅಧಿಕ ಪ್ರಮಾಣದ ಶಾಲಾ ಮಕ್ಕಳನ್ನು ತುಂಬಿಸಿಕೊಂಡು ಹೋಗಬಾರದು ಎಂದು ಸೂಚಿಸಲಾಯಿತು.

ಸುರಕ್ಷಿತ ವಿಧಾನ ಅನುಸರಿಸಿ
ಕಟ್ಟಡ ನಿರ್ಮಾಣ ಸಂಸ್ಥೆಗಳ ಮಾಲಕರು ಮತ್ತು ಗುತ್ತಿಗೆದಾರರ ಸಭೆ ನಡೆಸಿ ಕಾರ್ಮಿಕರನ್ನು ಸಾಗಿಸಲು ಸುರಕ್ಷಿತ ವಿಧಾನ ಅನುಸರಿಸುವಂತೆ ಮನವರಿಕೆ ಮಾಡಲಾಗುವುದು. ಸಾರಿಗೆ ವಾಹನ ಗಳಲ್ಲೇ ಕಾರ್ಮಿಕರು ಪ್ರಯಾಣಿಸುವಂತೆ ಖಾತ್ರಿ ಪಡಿಸಿ ಕೊಳ್ಳಬೇಕು. ಯಾವುದೇ ಕಾರಣಕ್ಕೂ ಸರಕು ವಾಹನಗಳಲ್ಲಿ ಅವರು ಪ್ರಯಾಣಿ ಸಬಾರದು ಎಂದು ತಿಳಿಸಿ ನಿರ್ಮಾಣ ಸಂಸ್ಥೆಗಳ ಮಾಲೀಕರು, ಗುತ್ತಿಗೆದಾರರ ಪೂರ್ಣ ವಿವರ ಸಂಗ್ರಹಿಸಿ ಇಟ್ಟುಕೊಂಡು ನಿರಂತರ ಗಮನ ಹರಿಸಲಾಗುವುದು ಎಂದು ಇನ್‌ಸ್ಪೆಕ್ಟರ್‌ ಶಶಿಕುಮಾರ್‌ ತಿಳಿಸಿದ್ದಾರೆ.

ಎಲ್ಲಡೆ ಮಾಹಿತಿ
ಕಟ್ಟಡ ನಿರ್ಮಾಣ ಸ್ಥಳಗಳಿಗೆ ಭೇಟಿ ನೀಡಿ ಖುದ್ದಾಗಿ ಕಾರ್ಮಿಕರನ್ನು ಕಂಡು ಅವರಿಗೆ ವಿಷಯ ಮನದಟ್ಟು ಮಾಡಲಾಗುವುದು. ಜಾತ್ರೆ, ಸಂತೆ, ಬಸ್‌ ನಿಲ್ದಾಣ, ಪ್ರವಾಸಿ ಸ್ಥಳ, ಶೈಕ್ಷಣಿಕ ಸಂಸ್ಥೆಗಳು ಸೇರಿದಂತೆ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಈ ಕುರಿತು ಮಾಹಿತಿ ನಿಚಡಲಾಗುವುದು. ಸರಕು ವಾಹನ ಮಾಲಕರು, ಚಾಲಕರ ಸಭೆ ನಡೆಸಿ ಯಾವುದೇ ಕಾರಣಕ್ಕೂ ಈ ವಾಹನಗಳಲ್ಲಿ ಜನರನ್ನು ಸಾಗಾಟ ಮಾಡದಂತೆ ಸೂಚನೆ ನೀಡಲಾಗುವುದು. ಒಂದು ವೇಳೆ ಇಂತಹ ವಾಹನಗಳಲ್ಲಿ ಜನರನ್ನು ಸಾಗಾಟ ಮಾಡಿದರೆ ಆ ವಾಹನದ ರಹದಾರಿ ಮತ್ತು ಡ್ರೈವಿಂಗ್‌ ಲೈಸನ್ಸ್‌ ರದ್ದುಪಡಿಸಲಾಗುವುದು ಎಂದು ತಿಳಿಸಲಾಗುವುದು. ಈ ಸಂಬಂಧ ಸರಕು ವಾಹನಗಳ ಮಾಲಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಗುವುದು. ಕಾರ್ಖಾನೆ ಮತ್ತು ಗಾರ್ಮೆಟ್ಸ್‌ ಮಾಲೀಕರ ಸಭೆ ನಡೆಸಿ ಜಾಗೃತಿ ಮೂಡಿಸಲಾಗುವುದು. ಖಾಸಗಿ ಸಂಸ್ಥೆಗಳ ಮಾಲೀಕರ ಸಭೆ ನಡೆಸಿ ವಿಷಯ ಮನವರಿಕೆ ಮಾಡಲಾಗುವುದು, ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ, ಚರ್ಚೆ, ಪ್ರಬಂಧ ಸ್ಪರ್ಧೆ ನಡೆಸುವುದು, ನಗರ ಪ್ರದೇಶಗಳಲ್ಲಿ ಜಾಗೃತಿ ಜಾಥಾ ಇತ್ಯಾದಿ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಇನ್‌ಸ್ಪೆಕ್ಟರ್‌ ತಿಳಿಸಿದ್ದಾರೆ.

ದಿನಕ್ಕೊಂದು ಜಾಗೃತಿ
ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಮತ್ತು ರಾಜ್ಯ ಪೊಲೀಸ್‌ ಮಹಾನಿರೀಕ್ಷರು ಹೊರಡಿಸಿದ ಆದೇಶದ ಪ್ರಕಾರ ವಿವಿಧ ಹಂತಗಳಲ್ಲಿ ಜಾಗೃತಿ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ದಿನಕ್ಕೊಂದು ಬಗೆಯ ಜಾಗೃತಿ ಉಪಕ್ರಮಗಳನ್ನು ಕೈಗೊಳ್ಳಲಾಗುವುದು.
ಶಶಿಕುಮಾರ್‌, ಇನ್‌ಸ್ಪೆಕ್ಟರ್‌, ಪುತ್ತೂರು ನಗರ ಪೊಲೀಸ್‌ ಠಾಣೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.