ಎಪಿಡಿ ಫೌಂಡೇಶನ್‌ನಿಂದ ‘ನಿಮ್ಮ ಬೆರಳಿಗೆ ಶಾಯಿ’ ಮತದಾನ ಜಾಗೃತಿ ಕಾರ್ಯ!


Team Udayavani, Apr 5, 2018, 10:52 AM IST

5-April-5.jpg

ಮಹಾನಗರ: ಮಂಗಳೂರಿನ ನಗರ ಉತ್ತರ ಹಾಗೂ ದಕ್ಷಿಣ ಕ್ಷೇತ್ರಗಳಲ್ಲಿ ಮತ ಚಲಾವಣೆಯ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ನಗರದ ಎಪಿಡಿ ಫೌಂಡೇಶನ್‌ ಜಿಲ್ಲಾ ಸ್ವೀಪ್‌ ನಿರ್ದೇಶನದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಸಿದ್ಧತೆ ನಡೆಸಿದೆ. ಇದಕ್ಕಾಗಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸ್ವೀಪ್‌ ತಂಡ ಸಿದ್ಧಗೊಂಡಿದೆ.

ಮನಪಾದ ಕಸ ವಿಂಗಡಣೆ ಹಾಗೂ ನಗರ ಸುಂದರೀಕರಣ ಕ್ಷೇತ್ರದಲ್ಲಿ ಮಾಹಿತಿ, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿ ಯಶಸ್ವಿಯಾಗಿತ್ತು. ಇದೀಗ ತಂಡವು ಮತದಾನ ಜಾಗೃತಿಗಾಗಿ ‘ನಿಮ್ಮ ಬೆರಳಿಗೆ ಶಾಯಿ’ ಶೀರ್ಷಿಕೆಯಡಿ ಜಾಗೃತಿ ಕಾರ್ಯದಲ್ಲಿ ತೊಡಗಿಕೊಂಡಿದೆ. ತಂಡವು ಬುಧವಾರ ಮಂಗಳೂರು ವಿವಿ ಕಾಲೇಜಿಗೆ ಭೇಟಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಕಾರ್ಯವನ್ನು ಮಾಡಿದೆ.

ಎಪಿಡಿ ಫೌಂಡೇಶನ್‌ನಲ್ಲಿ 6 ಮಂದಿ ಆಪರೇಟರ್ ಕಾರ್ಯನಿರ್ವಹಿಸುತ್ತಿದ್ದು, ಮತದಾನ ಜಾಗೃತಿಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಬೆಂಗಳೂರಿನ ಇಎಫ್‌ಐಎಂ ಬ್ಯುಸಿನೆಸ್‌ ಸ್ಕೂಲ್‌ನಿಂದ 15 ಮಂದಿ ವಿದ್ಯಾರ್ಥಿಗಳ ತಂಡ ಆಗಮಿಸಿದೆ. ಇವರು ಸುಮಾರು 15 ದಿನಗಳ ಕಾಲ ಎಪಿಡಿ ಜತೆ ಕಾರ್ಯನಿರ್ವಹಿಸಿ 2 ಕ್ಷೇತ್ರಗಳ ಸುಮಾರು ಶೇ. 60 ಮತದಾರರನ್ನು ತಲುಪಿ ಜಾಗೃತಿ ಕಾರ್ಯ ನಡೆಸುವ ಗುರಿಹೊಂದಿದೆ.

ಏನೇನು ಕಾರ್ಯಕ್ರಮಗಳು.?
ಜಾಗೃತಿ ಕಾರ್ಯದ ಹಿನ್ನೆಲೆಯಲ್ಲಿ ಎ. 6ರಂದು ನಗರದ ಮನಪಾ ಕಚೇರಿಯ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಜಾಗೃತಿ ಕಾರ್ಯ ಹಮ್ಮಿಕೊಳ್ಳಲಾಗಿದೆ. ಮುಂದಿನ ವಾರ ಮೊಬೈಲ್‌ ಟಾರ್ಚ್‌ ಮೂಲಕ ಜಾಗೃತಿ ಕಾರ್ಯ ನಡೆಯಲಿದ್ದು, ಅದು ಎಲ್ಲಿ ನಡೆಯುತ್ತದೆ ಮತ್ತು ದಿನಾಂಕ ಇನ್ನೂ ನಿಗದಿಯಾಗಿಲ್ಲ. ಮುಂದಿನ ಹಂತದಲ್ಲಿ ಬ್ಯಾಕಥಾನ್‌ (ಹಿಮ್ಮುಖವಾಗಿ ನಡೆದು ಕೊಂಡು ಹೋಗುವುದು) ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಲಾಗುವುದು.

ಜತೆಗೆ ಮ್ಯಾನಿಕ್ಯುನ್‌ ಸ್ಟಾಚ್ಯು ಮೂಲಕವೂ ಜನರಲ್ಲಿ ಮತದಾನದ ಜಾಗೃತಿ ಕಾರ್ಯ ನಡೆಯಲಿದೆ. ಕಾಲೇಜುಗಳು, ಮಂಗಳೂರಿನ ಮೂರು ಮಾಲ್‌ಗ‌ಳು, ಮಾರ್ಕೆಟ್‌ಗಳಲ್ಲಿ ಕಾರ್ಯಕ್ರಮ ನಡೆಸುವ ಉದ್ದೇಶ ಹೊಂದಲಾಗಿದೆ. ಈ ರೀತಿ ಚುನಾವಣೆಯವರೆಗೆ ಇಂತಹ ಹತ್ತು ಹಲವು ಕಾರ್ಯಗಳ ಮೂಲಕ ಎಪಿಡಿ ಫೌಂಡೇಶನ್‌ ಕಾರ್ಯನಿರ್ವಹಿಸಲಿದೆ.

ಎಪಿಡಿಯ ನಿಮ್ಮ ಬೆರಳಿಗೆ ಶಾಯಿ ಕಾರ್ಯಕ್ರಮವು ಹೇಗೆ ಮತದಾನ ಮಾಡಬೇಕು, ಮತಗಟ್ಟೆಗಳ ಅವಧಿ, ಅವುಗಳು ಇರುವ ಸ್ಥಳ ಇತ್ಯಾದಿ ವಿಷಯಗಳ ಕುರಿತು ಮತದಾರರನ್ನು ಸುಶಿಕ್ಷಿತರನ್ನಾಗಿಸಲಿದೆ. ಪ್ರಜಾಪ್ರಭುತ್ವದಲ್ಲಿ ಮತದಾನ ನಾಗರಿಕರ ಪವಿತ್ರ ಕರ್ತವ್ಯ ಎಂಬ ಸಂವೇದನೆಯನ್ನು ಮೂಡಿಸಲಿದೆ. ಸಾಮಾಜಿಕ ಜಾಲತಾಣಗಳಲ್ಲೂ ಮತದಾನ ಜಾಗೃತಿ ಕಾರ್ಯ ಆಯೋಜನೆಗೊಂಡಿದೆ.

ಸರಣಿ ಕಾರ್ಯಕ್ರಮ
ಸಾರ್ವಜನಿಕ ಶಿಕ್ಷಣ ಹಾಗೂ ಸಮುದಾಯದ ಭಾಗವಹಿಸುವಿಕೆ ಎಂಬ ಉದ್ದೇಶದಿಂದ ಒಂದು ತಿಂಗಳ ಕಾಲ ಸರಣಿ ಕಾರ್ಯಕ್ರಮ ಆಯೋಜನೆಗೊಂಡಿದೆ. ವಸತಿ ಪ್ರದೇಶಗಳು, ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳು, ಮಾಲ್‌ಗ‌ಳು ಮತ್ತು ವಾಣಿಜ್ಯ ಸಂಸ್ಥೆಗಳು, ಕಾಲೇಜು ಮತ್ತು ವಿಶ್ವವಿದ್ಯಾಲಯಗಳು, ಮಾಹಿತಿ ತಂತ್ರಜ್ಞಾನ ಸಂಸ್ಥೆಗಳ ಆವ ರಣಗಳು, ಸರಕಾರಿ ಕಚೇರಿಗಳು, ಸಭಾಂಗಣಗಳು, ಮದುವೆ ಛತ್ರಗಳು, ಉದ್ಯಾನವನಗಳು, ಕಡಲ ಕಿನಾರೆಗಳು ಮತ್ತು ಇತರ ಮನೋರಂಜನ ತಾಣಗಳು ಇತ್ಯಾದಿ ಪ್ರದೇಶಗಳಲ್ಲಿ ಜಾಗೃತಿ ಕಾರ್ಯ ನಡೆಯಲಿದೆ. 

ಚಟುವಟಿಕೆ ಆರಂಭ
ಮಂಗಳೂರಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಾವು ಮತ ಚಲಾವಣೆಯ ಜಾಗೃತಿ ಕಾರ್ಯ ನಡೆಯಲಿದೆ. ಈಗಾಗಲೇ ಬೆಂಗಳೂರಿನಿಂದ 15 ವಿದ್ಯಾರ್ಥಿಗಳು ಈ ಕಾರ್ಯಕ್ಕೆ ಆಗಮಿಸಲಿದ್ದು, ಈಗಾಗಲೇ ಕಾರ್ಯ ಚಟುವಟಿಕೆ ಆರಂಭಗೊಂಡಿದೆ. ಮಾನವ ಸರಪಳಿ, ಮೊಬೈಲ್‌ ಟಾರ್ಚ್ ನಂತಹ ವಿಭಿನ್ನ ಕಾರ್ಯಗಳ ಮೂಲಕ ಜಾಗೃತಿ ಕಾರ್ಯ ನಡೆಯಲಿದೆ. 
– ಅಬ್ದುಲ್ಲಾ ರೆಹ್ಮಾನ್‌,
ಸ್ಥಾಪಕರು, ಎಪಿಡಿ ಫೌಂಡೇಶನ್ 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.