ವಿದ್ಯಾರ್ಥಿಗಳ ಆತಂಕ ನಿವಾರಣೆಗೆ ‘ಪರೀಕ್ಷಾಹಬ್ಬ’


Team Udayavani, Mar 22, 2019, 5:20 AM IST

22-march-3.jpg

ದೇರಳಕಟ್ಟೆ: ಗುರುವಾರದಿಂದ ಆರಂಭಗೊಂಡ ಎಸೆ ಸೆಲ್ಸಿ ಪರೀಕ್ಷೆಗೆ ಉಳ್ಳಾಲ ವ್ಯಾಪ್ತಿಯ ವಿವಿಧ ಶಾಲೆಯ ಪರೀಕ್ಷೆ ಕೇಂದ್ರಗಳಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಬಂಟ್ವಾಳ ತಾ| ಮೊಂಟೆ ಪದವು ಸರಕಾರಿ ಪ್ರೌಢಶಾಲೆ ಮತ್ತು ಮಂಗಳೂರು ತಾಲೂಕಿನ ದೇರಳಕಟ್ಟೆಯ ನೇತಾಜಿ ಸುಭಾಶ್ಚಂದ್ರ ಬೋಸ್‌ ಸರಕಾರಿ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ‘ಪರೀಕ್ಷಾ ಹಬ್ಬ’ದ ಮೂಲಕ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸ್ವಾಗತಿಸಲಾಯಿತು.

ಪ್ರಥಮ ಪರೀಕ್ಷೆ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಮತ್ತು ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ಪರೀಕ್ಷೆ ನಡೆದಿದ್ದು, ಮೊದಲ ದಿನದ ಪರೀಕ್ಷೆಯ ಆತಂಕದಲ್ಲಿ ಬಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಹಬ್ಬದಿಂದ ವಿದ್ಯಾರ್ಥಿಗಳಿಗೆ ಹೊಸ ಹುಮ್ಮಸು ನೀಡಿದರೆ, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಸ್ಥಳೀಯ ಗಣ್ಯರು ಶುಭ ಹಾರೈಸಿ ಸ್ವಾಗತಿಸಿದರು.

ಪರೀಕ್ಷಾ ಹಬ್ಬ
ಮೊಂಟೆಪದವು ಶಾಲೆಯಲ್ಲಿ ಪರೀಕ್ಷಾ ಹಬ್ಬದ ಅಂಗವಾಗಿ ಶಾಲೆಯನ್ನು ಬಣ್ಣದ ಕಾಗದಗಳಿಂದ ಮತ್ತು ತಳಿರು ತೋರಣ ಕಟ್ಟಿ ಶೃಂಗಾರಿಸಲಾಗಿತ್ತು. ಮುಖ್ಯ ಶಿಕ್ಷಕ ಸಂತೋಷ್‌ ಕುಮಾರ್‌ ಟಿ.ಎನ್‌. ನೇತೃತ್ವದಲ್ಲಿ ನಡೆದ ಶಾಲಾ ಹಬ್ಬದಲ್ಲಿ ಮೊಂಟೆಪದವು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ದುಲ್‌ ಜಲೀಲ್‌ ಮೋಂಟುಗೋಳಿ ಉಪಹಾರ ವ್ಯವಸ್ಥೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹನೀಫ್‌ ಚಂದಹಿತ್ಲು ಮುನ್ನೂರು ಮಕ್ಕಳಿಗೆ ಪರೀಕ್ಷೆ ಬರೆಯಲು ಲೇಖನಿ ಕೊಡುಗೆಯಾಗಿ ನೀಡಿದರು.

ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದ ಪ್ರಧಾನ ಅರ್ಚಕ ಶಂಕರ ಭಟ್‌ ಮಠ, ಬೋಳ ಸಂತ ಲಾರೆನ್ಸ್‌ ಚರ್ಚ್‌ ಧರ್ಮಗುರು ಮೈಕೆಲ್‌ ಡಿ’ಸೋಜಾ, ಮರಿಕ್ಕಳ ಜುಮ್ಮಾ ಮಸೀದಿ ಧರ್ಮಗುರು ಸಿದ್ದಿಕ್‌ ಸಅದಿ ಪರೀûಾರ್ಥಿಗಳಿಗೆ ಶುಭಾ ಕೋರಿದರು. ಕಾಲೇಜು ಪ್ರಿನ್ಸಿಪಾಲ್‌ ವನಿತಾ ದೇವಾಡಿಗ, ಪ್ರೌಢಶಾಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮುರಳೀಧರ ಶೆಟ್ಟಿ ಮೋರ್ಲ, ಅಬ್ದುಲ್ಲ ಕೆ. ಕೊಡಂಚಿಲ್‌, ಜೋಸೆಫ್‌ ಕುಟ್ಟಿನ್ಹ, ಅಬ್ದುಲ್‌ ರಹಿಮಾನ್‌ ಚಂದಹಿತ್ಲು, ಉಮ್ಮರ್‌, ಎಡಂಬಲೆ ಗೋಪಾಲ ಭಟ್‌, ಸಹ ಶಿಕ್ಷಕ ರಾಜಪ್ಪ ಹಾಗೂ ಲಕ್ಷ್ಮಣ್‌ ಪಿ.ಎಸ್‌. ಉಪಸ್ಥಿತರಿದ್ದರು.

ಸರಕಾರಿ ಪ್ರೌಢಶಾಲೆ ಮೊಂಟೆಪದವು, ಅಲ್‌ ಮದೀನಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆ ಮಂಜನಾಡಿ ನರಿಂಗಾನ, ಸರಕಾರಿ ಪ್ರೌಢಶಾಲೆ ಕಲ್ಲರಕೋಡಿ ಹಾಗೂ ಕೈರಂಗಳ ಪುಣ್ಯಕೋಟಿ ನಗರದ ಶಾರದಾಗಣಪತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಸಹಿತ ಒಟ್ಟು ಮುನ್ನೂರು ಪರೀಕ್ಷಾರ್ಥಿಗಳನ್ನು ಬ್ಯಾಂಡ್‌ ಬಾರಿಸುವ ಮೂಲಕ ಸ್ವಾಗತಿಸಲಾಯಿತು.

ದೇರಳಕಟ್ಟೆ: ವಿಶೇಷ ದ್ವಾರ
ಮಂಗಳೂರು ತಾ| ದೇರಳಕಟ್ಟೆಯ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿ ಸಲು ವಿಶೇಷವಾಗಿ ಕಲ್ಲಡ್ಕದ ಬೊಂಬೆಗಳು ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿ ಗಳನ್ನು ಸ್ವಾಗತಿ ಸಿತು. ಶಾಲೆಯ ಮುಂಭಾ ಗದಲ್ಲಿ ವಿಶೇಷ ದ್ವಾರವನ್ನು ರಚಿಸಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿಹಾಬುದ್ಧೀನ್‌ ಮತ್ತು ಕಾರ್ಯದರ್ಶಿ ಸಂದೀಪ್‌ ಲೇಖನಿಯನ್ನು ನೀಡಿ ಶುಭಾ ಹಾರೈಸಿದರು.

ವಿನೂತನ ಪರೀಕ್ಷಾ ಹಬ್ಬ
ವಿದ್ಯಾರ್ಥಿಗಳಲ್ಲಿರುವ ಭಯದ ವಾತಾವರಣ ದೂರ ಮಾಡಿ ಅವರಲ್ಲಿ ಪರೀಕ್ಷಗೆ ಸ್ಫೂರ್ತಿ ತುಂಬುವ ನಿಟ್ಟಿನಲ್ಲಿ ಪರೀಕ್ಷಾ ಹಬ್ಬ ಸಹಕಾರಿಯಾಗಿದ್ದು, ಎಲ್ಲ ಧರ್ಮದ ಗಣ್ಯರ ಸಮ್ಮುಖದಲ್ಲಿ ವಿದ್ಯಾರ್ಥಿಗಳನ್ನು ಬರ ಮಾಡಿಕೊಳ್ಳುವ ಮೂಲಕ ವಿನೂತನವಾಗಿ ಪರೀಕ್ಷಾ ಹಬ್ಬವನ್ನು ಆಚರಿಸಲಾಯಿತು.
– ಸಂತೋಷ್‌ ಕುಮಾರ್‌ ಟಿ.ಎನ್‌.,
ಮುಖ್ಯ ಶಿಕ್ಷಕರು, ಸ.ಪ್ರೌ. ಶಾಲೆ ಮೊಂಟೆಪದವು

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.