
ಉಳ್ಳಾಲ ಇನ್ಸ್ ಪೆಕ್ಟರ್ ಇನ್ಸ್ಟಾ ಗ್ರಾಮ್ ಹ್ಯಾಕ್: ನಕಲಿ ಖಾತೆಯಿಂದ ಹಣಕ್ಕಾಗಿ ಬೇಡಿಕೆ
Team Udayavani, Jan 18, 2023, 5:06 PM IST

ಉಳ್ಳಾಲ: ಉಳ್ಳಾಲ ಠಾಣಾಧಿಕಾರಿ ಸಂದೀಪ್ ಅವರ ಹೆಸರಿನಲ್ಲಿ ಇನ್ಸ್ಟಾ ಗ್ರಾಮ್ ನಕಲಿ ಖಾತೆಯನ್ನು ತೆರೆದಿರುವ ಹ್ಯಾಕರ್ ಗಳು ಹಲವರಲ್ಲಿ ಹಣಕ್ಕಾಗಿ ಬೇಡಿಕೆಯನ್ನು ಇಡುತ್ತಿದ್ದಾರೆ. ಈ ಕುರಿತು ಠಾಣಾಧಿಕಾರಿ ತನ್ನ ಇನ್ಸ್ಟಾ ಗ್ರಾಮ್ ಹಾಗೂ ಫೇಸ್ ಬುಕ್ ಮುಖಪುಟದಲ್ಲಿ ದೂರು ಹಂಚಿಕೊಂಡಿದ್ದಾರೆ.
ಕಳೆದ ಎರಡು ದಿನಗಳಿಂದ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಸಂದೀಪ್ ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಎಲ್ಲಾ ಸ್ನೇಹಿತರಲ್ಲಿ ಕಷ್ಟದಲ್ಲಿರುವ ಕಾರಣ ಹೇಳಿ 7,500 ರೂ ಕೊಡುವಂತೆ ಸಂದೇಶ ಹಾಕಲಾಗುತ್ತಿದೆ. ಇದು ಠಾಣಾಧಿಕಾರಿ ಗಮನಕ್ಕೆ ಬಂದು ಸಾಮಾಜಿಕ ಜಾಲತಾಣಗಳಲ್ಲಿ ಹಣ ನೀಡದಂತೆ ಸಂದೇಶ ಹಾಕಿದ್ದಾರೆ.
ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಸೇರಿದಂತೆ ಗಣ್ಯರು, ಪತ್ರಕರ್ತರ ಫೇಸ್ ಬುಕ್ ಅಕೌಂಟ್ ಗಳನ್ನು ಹ್ಯಾಕ್ ಮಾಡಿ ಸ್ನೇಹಿತರನ್ನು ಮತ್ತೆ ತನ್ನ ಖಾತೆಗೆ ಸೇರಿಸಿಕೊಂಡು ಹಣವನ್ನು ಕೇಳುವ ಜಾಲ ದ.ಕ ಜಿಲ್ಲೆಯಾದ್ಯಂತ ಹಲವು ತಿಂಗಳಿನಿಂದ ನಡೆಯುತ್ತಿದೆ. ಈ ಕುರಿತು ಸೈಬರ್ ಸೆಲ್ನಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಹ್ಯಾಕರ್ ಗಳ ಪತ್ತೆ ಅಸಾಧ್ಯವಾಗುತ್ತಿದೆ. ಮೂಲವೊಂದರ ಪ್ರಕಾರ ಉತ್ತರಭಾರತ ಮೂಲದ ರೈತರುಗಳ ಬ್ಯಾಂಕ್ ಖಾತೆಗೆ, ಹ್ಯಾಕರ್ ಗಳು ಹಣವನ್ನು ಮೋಸದ ಮೂಲಕ ವರ್ಗಾಯಿಸುತ್ತಿದ್ದಾರೆ. ಅಲ್ಲಿ ರೈತರಿಗೆ ಸಣ್ಣ ಮೊತ್ತವನ್ನು ನೀಡಿ ಅವರಿಂದ ಬ್ಯಾಂಕ್ ಖಾತೆ ಸಂಖ್ಯೆ, ಒಟಿಪಿ ಪಡೆದುಕೊಂಡು ಹಣವನ್ನು ವರ್ಗಾಯಿಸುತ್ತಿದ್ದಾರೆ. ಜಿಲ್ಲೆಯ ಸೈಬರ್ ಸೆಲ್ ಪೊಲೀಸರು ಅಕೌಂಟ್ ಫ್ರೀಝ್ ಮಾಡಿ ಉತ್ತರಭಾರತಕ್ಕೆ ತಲುಪುವ ಹೊತ್ತಲ್ಲಿ ಬಡರೈತ ಮಾತ್ರ ಪೊಲೀಸರಿಗೆ ಎದುರಾಗುತ್ತಿದ್ದಾನೆ. ಆದರೆ ಆರೋಪಿಗಳ ಸುಳಿವು ಲಭ್ಯವಾಗುತ್ತಿಲ್ಲ.
ಸೆಂಟ್ರಲೈಜ್ ಆಗಬೇಕಿದೆ ಸೈಬರ್ ಠಾಣೆ: ಅಂತರ್ಜಾಲದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ವಂಚನೆಗಳು ನಡೆಯುತ್ತಲೇ ಇದೆ. ಇಡೀ ದೇಶದುದ್ದಕ್ಕೂ ವಂಚನೆಗಳು ನಿರಂತರವಾಗಿ ನಡೆಯುತ್ತಲೇ ಇರುತ್ತದೆ. ರಾಜ್ಯ ಪೊಲೀಸ್ ಇಲಾಖೆಯಡಿ ಸೈಬರ್ ಠಾಣೆಗಳಿರುವುದರಿಂದ ತನಿಖೆ ವೇಗವನ್ನು ಪಡೆಯದೆ ಹಲವು ಕೋನಗಳಲ್ಲಿ ಅಡಚಣೆಗಳು ಉಂಟಾಗಿ ಆರೋಪಿಗಳ ಪತ್ತೆ ಅಸಾಧ್ಯವಾಗುತ್ತಿದೆ. ಇದರಿಂದ ಕೇಂದ್ರದಿಂದಲೇ ಸೈಬರ್ ಠಾಣೆ ನಿರ್ವಹಿಸುವ ಯೋಜನೆ ಜಾರಿಯಾದಲ್ಲಿ ಜಿಲ್ಲೆಯಲ್ಲಿ ಆಗುವ ಅಪರಾಧದ ಕುರಿತು ದೇಶದುದ್ದಕ್ಕೂ ಏಕಸಮಯದಲ್ಲಿ ತನಿಖೆಯನ್ನು ಆರಂಭಿಸಿ ತಕ್ಷಣಕ್ಕೆ ಆರೋಪಿ ಪತ್ತೆ ಸಾಧ್ಯವಾಗಬಹುದು ಅನ್ನುವ ಅಭಿಪ್ರಾಯ ಪೊಲೀಸರದ್ದಾಗಿದೆ.
ಇದನ್ನೂ ಓದಿ: ಪಡುಬಿದ್ರಿ ಬ್ರಹ್ಮಸ್ಥಾನ: ಬಯಲು ಆಲಯದ ಚಿದಂಬರ ರಹಸ್ಯ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಡೂರು: ಅರಿವು ಮೂಡಿಸುವುದೇ ಗುರುವಿನ ಧರ್ಮ: ರಂಭಾಪುರಿ ಶ್ರೀ

Goa ಸ್ಮಾರ್ಟ್ ಸಿಟಿ ಯೋಜನೆಯ ತನಿಖೆ ನಡೆಸಬೇಕು: ಕಾಂಗ್ರೆಸ್ ಒತ್ತಾಯ

”ನನಗಿದು ಸ್ಪೆಷಲ್ ಸಿನಿಮಾ…”: ‘ಯದಾ ಯದಾ ಹೀ’ ಕುರಿತು ಹರಿಪ್ರಿಯಾ ಮಾತು

ದಾವಣಗೆರೆ: ಮಕ್ಕಳಿಬ್ಬರಿಗೆ ಟಿಕ್ಸೋಟೇಪ್ ಸುತ್ತಿ ಕೊಲೆಗೈದ ತಂದೆ!; ಬಂಧನ

ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ