ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!


Team Udayavani, Mar 27, 2024, 2:31 PM IST

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಮಹಾನಗರ: ಬಸ್‌ಗಳಲ್ಲಿ ಬಾಗಿಲು ಅಳವಡಿಸಲು ಜಿಲ್ಲಾಧಿಕಾರಿಯವರು ನೀಡಿರುವ ಗಡುವು ಸಮೀಪಿಸುತ್ತಿದೆ. ಆದರೆ ಹೆಚ್ಚಿನ ಬಸ್‌ಗಳು ಬಾಗಿಲು ರಹಿತವಾಗಿಯೇ ಓಡಾಡುತ್ತಿವೆ! ಬಸ್‌ನಿಂದ ನಿರ್ವಾಹಕರು, ಪ್ರಯಾಣಿಕರು ಬಿದ್ದು ಮೃತಪಟ್ಟ ಒಂದೆರಡು ಘಟನೆಗಳ ಹಿನ್ನೆಲೆಯಲ್ಲಿ ಫೆ. 28ರಂದು ನಡೆದಿದ್ದ ರಸ್ತೆ ಸುರಕ್ಷೆ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಬಸ್‌ಗಳಿಗೆ ಬಾಗಿಲು ಅಳವಡಿಸುವುದಕ್ಕೆ ಒಂದು ತಿಂಗಳ ಗಡುವು ನೀಡಿದ್ದರು.

ಸಿಟಿ ಬಸ್‌ಗಳಿಗೆ ಅನ್ವಯವಾಗದು: ಬಸ್‌ಗಳಿಗೆ ಬಾಗಿಲು ಅಳವಡಿಸಬೇಕು ಎಂಬ ನಿಯಮ ಸಿಟಿಬಸ್‌ಗಳಿಗೆ ಅನ್ವಯಿಸುವುದಿಲ್ಲ. ನಗರದ ಪ್ರದೇಶಗಳಲ್ಲಿ ಓಡಾಡುವ ಬಸ್‌ ಗಳು ಅಲ್ಲಲ್ಲಿ ನಿಲುಗಡೆಯಾಗುತ್ತವೆ. ಪದೇ ಪದೇ ಬಾಗಿಲು ತೆಗೆದು ಹಾಕುವುದು ಅಸಾಧ್ಯ. ಇದರಿಂದ ಇತರ ವಾಹನಗಳಿಗೆ, ಅದರಲ್ಲಿಯೂ ಮುಖ್ಯವಾಗಿ ದ್ವಿಚಕ್ರ ವಾಹನಗಳಿಗೆ ಮತ್ತು ಪಾದಚಾರಿಗಳಿಗೆ ತೊಂದರೆಯಾಗುತ್ತದೆ. ಅಪಘಾತಕ್ಕೂ ಕಾರಣವಾಗುತ್ತದೆ ಎನ್ನುತ್ತಾರೆ ಸಿಟಿ ಬಸ್‌ಗಳ ಮಾಲಕರು.

ಜಿಲ್ಲಾಧಿಕಾರಿ ಹೇಳಿದ್ದೇನು?
2017ರಿಂದ ನೋಂದಣಿಯಾಗಿರುವ ಎಲ್ಲ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿದವಿತ್‌ ಸಲ್ಲಿಸಬೇಕು. 2017ರಿಂದ ನೋಂದಣಿಯಾದ ಎಲ್ಲ ಬಸ್‌ಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು.ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾರ್ವಜನಿಕರ ಜೀವರಕ್ಷಣೆ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಾಗದು. ನಿರ್ಲಕ್ಷ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಬಸ್‌ಗಳಲ್ಲಿ ಬಾಗಿಲನ್ನು ಅಳವಡಿಸಬೇಕೆಂದು ಸಾರ್ವಜನಿಕರಿಂದಲೂ ತೀವ್ರ ಒತ್ತಡ ಬರುತ್ತಿದೆ. ಜನಸಂಪರ್ಕ ಸಭೆಗಳಲ್ಲಿಯೂ ಮನವಿಗಳು ಬಂದಿವೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತಿತರ ರಾಜ್ಯಗಳ ಬಸ್‌ಗಳು ಬಾಗಿಲು ಅಳವಡಿಸಿ ಸಂಚರಿಸುತ್ತಿವೆ. ಬೆಂಗಳೂರಿನಲ್ಲಿಯೂ ಸಿಟಿ ಬಸ್‌ಗಳಲ್ಲಿ ಬಾಗಿಲು ಇರುವುದರಿಂದ ಸಾರ್ವಜನಿಕರ ಸಂಚಾರ ನಿರಾತಂಕವಾಗಿದೆ. ಇದರಿಂದ ಸಂಚಾರ ವ್ಯವಸ್ಥೆಯೂ ಸುಗಮವಾಗಿದೆ ಎಂಬುದಾಗಿ ಜಿಲ್ಲಾಧಿಕಾರಿಯವರು ಸಭೆಯಲ್ಲಿ ಹೇಳಿದ್ದರು.

ಆದೇಶ ತಲುಪಿಲ್ಲ, ಕಾನೂನಿಗೆ ಬದ್ಧ ನಮಗೆ ತಿಳಿದಿರುವಂತೆ ಸಿಟಿ ಬಸ್‌ ಗಳಲ್ಲಿ ಬಾಗಿಲು ಅಳವಡಿಕೆ ಕಡ್ಡಾಯವಿಲ್ಲ.
ಜಿಲ್ಲಾಧಿಕಾರಿಯವರ ಆದೇಶ ನಮಗೆ ತಲುಪಿಲ್ಲ. ಅದರಲ್ಲಿರುವ ಅಂಶಗಳಿಗೆ ಬದ್ಧರಾಗಿರುತ್ತೇವೆ. ಕಾನೂನು, ಆದೇಶಗಳನ್ನು ಪಾಲಿಸುತ್ತೇವೆ. ಬಹುತೇಕ ಎಕ್ಸ್‌ಪ್ರೆಸ್‌, ಸರ್ವಿಸ್‌ ಬಸ್‌ಗಳಲ್ಲಿ ಬಾಗಿಲು ಇದೆ. ಸಿಟಿ ಬಸ್‌ಗಳಿಗೆ ಬಾಗಿಲು ಅಳವಡಿಸಿದರೆ
ಸಮಸ್ಯೆಯಾಗುತ್ತದೆ. ಬಸ್‌ನಿರ್ವಾಹಕರು, ಸಾರ್ವಜನಿಕರ ಸುರಕ್ಷೆಗೆ ಆದ್ಯತೆ ನೀಡುತ್ತಿದ್ದೇವೆ. ಆದೇಶವನ್ನು ಗಮನಿಸಿ ಅದಕ್ಕೆ ಪೂರಕವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎನ್ನುತ್ತಾರೆ ದ.ಕ. ಜಿಲ್ಲಾ ಖಾಸಗಿ ಬಸ್‌ ಮಾಲಕರ ಸಂಘದ ಅಧ್ಯಕ್ಷ ಅಜೀಜ್‌ ಪರ್ತಿಪ್ಪಾಡಿ ಅವರು.

ಕಾನೂನು ಅಭಿಪ್ರಾಯ ಪಡೆದು ಕ್ರಮ ಬಸ್‌ಗಳಲ್ಲಿ ಬಾಗಿಲು ಅಳವಡಿಸುವ ಬಗ್ಗೆ ಕಾನೂನು ಸಲಹೆ ಪಡೆದು ಕ್ರಮ ಕೈಗೊಳ್ಳಲಾಗುವುದು. ಚುನಾವಣೆಯ ಬಳಿಕ ಈ ಬಗ್ಗೆ ಆದ್ಯತೆ ನೀಡಲಾಗುವುದು.
*ಶ್ರೀಧರ ಮಲ್ಲಾಡ್‌, ಆರ್‌ಟಿಒ, ಮಂಗಳೂರು

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.