Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Team Udayavani, Mar 28, 2024, 9:42 PM IST
ಬಜಪೆ: ದ್ವಿಚಕ್ರ ವಾಹನ ಕಳ್ಳನೋರ್ವನನ್ನು ಬಜಪೆ ಠಾಣೆಯ ಎಎಸ್ಐ ರಾಮ ಪೂಜಾರಿ ಮತ್ತು ಸಿಬಂದಿ ಸ್ವಾಮಿಲಪದವು ಎನ್ನುವಲ್ಲಿ ಗುರುವಾರ ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಕುಂದಾಪುರ ಸಾಸ್ತಾನದ ಗೋಳಿಬೆಟ್ಟುಮನೆಯ ಪ್ರಹ್ಲಾದ್ (30) ಬಂಧಿತ. ಗುರುವಾರದಂದು ಮುಂಜಾನೆ ವಾಹನ ತಪಾಸಣೆ ಮಾಡುತ್ತಿರುವಾಗ ಸ್ಕೂಟರ್ ಅನ್ನು ನಿಲ್ಲಿಸಲು ಸೂಚನೆ ನೀಡಿದಾಗ ನಿಲ್ಲಿಸದೆ ಇದ್ದು, ಆಗ ಆತನನ್ನು ಹಿಡಿದು ವಿಚಾರಿಸಿದಾಗ ಸ್ಕೂಟರ್ ಅನ್ನು ಬಂಟ್ವಾಳದ ಮೆಲ್ಕಾರ್ ಎಂಬಲ್ಲಿಂದ ಕಳವು ಮಾಡಿದಾಗಿ ತಿಳಿಸಿದ್ದ.
ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈತನ ವಿರುದ್ಧ ಹಿಂದೆ ಕುಂದಾಪುರ, ಮಂಗಳೂರು ಉತ್ತರ, ಕೋಟ, ಬ್ರಹ್ಮಾವರ, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನಕ್ಕೆ ಹಾಗೂ ಬೈಕ್ ಕಳ್ಳತನಕ್ಕೆ ಸಂಬಂಧಪಟ್ಟ ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರಿಸಿಕೊಂಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ