ಅಭಿವೃದ್ಧಿಗೆ ಆಸಕ್ತಿ ಮುಖ್ಯ: ಅಂಗಾರ

ಪಂಜ: 1.50 ಕೋ. ರೂ. ವೆಚ್ಚದ ಕಾಂಕ್ರೀಟ್‌ ರಸ್ತೆಗೆ ಚಾಲನೆ

Team Udayavani, Mar 23, 2022, 1:35 PM IST

angara

ಸುಳ್ಯ: ದೇಶ, ಯಾವುದೇ ಕ್ಷೇತ್ರ ಅಭಿವೃದ್ಧಿ ಹೊಂದಬೇಕಾದರೆ ಅಭಿವೃದ್ಧಿ ಕೆಲಸ ಮಾಡಲು ಆಸಕ್ತಿ ಮುಖ್ಯವಾಗಿರುತ್ತದೆ. ನಮ್ಮಲ್ಲಿರುವ ಆಸಕ್ತಿ ಕಾರ್ಯರೂಪಕ್ಕೆ ಬಂದಾಗ ಅಭಿವೃದ್ಧಿ ನಡೆಯಲು ಸಾಧ್ಯವಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ಹೇಳಿದರು.

ಲೋಕೋಪಯೋಗಿ ಇಲಾಖೆಯ ಅನುದಾನ 1.50 ಕೋಟಿ ರೂ. ವೆಚ್ಚದಲ್ಲಿ ಪಂಜ ಗ್ರಾಮದ ಕುದ್ವ-ಪಂಚಲಿಂಗೇಶ್ವರ ದೇವಸ್ಥಾನ- ನಾಗತೀರ್ಥ-ಸಂಪ-ಡಬ್ಬಲ್‌ ಕಟ್ಟೆ- ಮಂಚಿಕಟ್ಟೆ ಸಂಪರ್ಕ ರಸ್ತೆಯ ಕಾಂಕ್ರೀಟ್‌ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು, ಪಂಜ ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ ದೇರಾಜೆ, ಪೂರ್ವಾಧ್ಯಕ್ಷ ಡಾ| ರಾಮಯ್ಯ ಭಟ್‌, ಕಲ್ಮಡ್ಕ ಗ್ರಾ.ಪಂ. ಉಪಾಧ್ಯಕ್ಷ ಮಹೇಶ್‌ ಕುಮಾರ್‌ ಕರಿಕ್ಕಳ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಸಣ್ಣೇಗೌಡ, ಪ್ರಮುಖರಾದ ಡಾ| ಲೀಲಾವತಿ, ಸುಬ್ರಹ್ಮಣ್ಯ ಕುಳ, ಲಿಗೋಧರ ಆಚಾರ್ಯ, ಕಾರ್ಯಪ್ಪ ಗೌಡ ಚಿದ್ಗಲ್ಲು, ನೇತ್ರಾವತಿ ಕಲ್ಲಾಜೆ ಮತ್ತಿತರರು ಉಪಸ್ಥಿತರಿದ್ದರು. ಡಾ| ಗೋಪಾಲಕೃಷ್ಣ ಭಟ್‌ ಸ್ವಾಗತಿಸಿದರು. ಶಂಕರ್‌ ಕುಮಾರ್‌ ವಂದಿಸಿದರು. ಜಯರಾಮ ಕಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು.

ರಾಜಕೀಯ ಹೆಚ್ಚಳ

ಇಂದು ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಅಭಿಪ್ರಾಯಗಳು ವ್ಯಕ್ತಪಡಿಸುವುದು, ಮನವಿಗಳನ್ನು ಕೊಡುವುದು ನಡೆಯುತ್ತಿದೆ. ಈಗ ಒಂದಷ್ಟು ರಾಜಕೀಯವೇ ಹೆಚ್ಚಳವಾಗುತ್ತಿದೆ. ರಾಜಕೀಯ ಯಾಕೆ ಹೆಚ್ಚಳವಾಗುತ್ತಿದೆ ಎಂದರೆ ಯಾರು ಆಡಳಿತದಲ್ಲಿ ಇದ್ದ ಸಂದರ್ಭದಲ್ಲಿ ಅಭಿವೃದ್ಧಿ ಮಾಡಬೇಕಿತ್ತೋ ಅವರು ಅಭಿವೃದ್ಧಿ ನಡೆಸದೆ ಇಂದು ಅಭಿವೃದ್ಧಿ ಕೆಲಸ ಮಾಡುವ ಸಂದರ್ಭದಲ್ಲಿ ಪ್ರಶ್ನಿಸುವ, ದೂರುವ ಕೆಲಸಗಳು ಮಾಡುತ್ತಿದ್ದಾರೆ ಎಂದು ಎಸ್‌.ಅಂಗಾರ ಹೇಳಿದರು.

ಟಾಪ್ ನ್ಯೂಸ್

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.