ಇಂಟರ್ನ್ಯಾಶನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ : ಬಿಸು ಕೂಟ
Team Udayavani, Apr 18, 2018, 10:19 AM IST
ಮಹಾನಗರ: ಇಂಟರ್ ನ್ಯಾಶನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಆಶ್ರಯದಲ್ಲಿ ‘ಬಿಸು ಕೂಟ’ ತುಳು ಯುಗಾದಿಯ ಸಾಂಪ್ರದಾಯಿಕ ಆಚರಣೆ ಮಂಗಳವಾರ ಹೊಟೇಲ್ ಕುಡ್ಲದ ಸಭಾಂಗಣದಲ್ಲಿ ನಡೆಯಿತು. ಇಂಟರ್ನ್ಯಾಶನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಬಿಸುಕಣಿಯನ್ನು ಶ್ರೀ ದೇವಿ ಎಜುಕೇಶನ್ ಟ್ರಸ್ಟ್ನ ಆಡಳಿತ ನಿರ್ದೇಶಕಿ ಮೈನಾ ಎ. ಶೆಟ್ಟಿ ಉದ್ಘಾಟಿಸಿದರು. ಹೊಸದಿಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಸದಾಶಯ ಬಿಸು ಸಂಚಿಕೆ ಬಿಡುಗಡೆಗೊಳಿಸಿದರು.
ಮೇಯರ್ ಬಾಸ್ಕರ್ ಕೆ., ಮನಪಾ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ ಲೇಖಕ ಡಾ| ನರೇಂದ್ರ ರೈ ದೇರ್ಲ, ಸಂಗೀತ ನಿರ್ದೇಶಕ ಗುರುಕಿರಣ್, ಉದ್ಯಮಿ ಲಕ್ಷ್ಮೀಶ ಭಂಡಾರಿ, ಇಂಟರ್ ನ್ಯಾಷನಲ್ ಯುವ ವಿಭಾಗದ ಅಧ್ಯಕ್ಷ ದೇವಿಚರಣ್ ಶೆಟ್ಟಿ, ಸಂಘಟನ ಕಾರ್ಯದರ್ಶಿ ರಾಜಗೋಪಾಲ ರೈ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆಯೋಜಿಸಿದ್ದ ಬಿಸು ಕವಿ ಕೂಟದಲ್ಲಿ ವಿವಿಧ ಕವಿಗಳು ತಮ್ಮ ಕವನಗಳನ್ನು ವಾಚಿಸಿದರು. ಸದಾಶಯ ತ್ತೈಮಾಸಿಕದ ಪ್ರಧಾನ ಸಂಪಾದಕ ಭಾಸ್ಕರ್ ರೈ ಕುಕ್ಕುವಳ್ಳಿ ನಿರೂಪಿಸಿದರು.