ಮಂಗಳೂರಿನಲ್ಲಿದೆ ಪಾರಂಪರಿಕ ವಸ್ತು ಸಂಗ್ರಹಾಲಯ


Team Udayavani, Apr 18, 2019, 6:05 AM IST

1704MLR6

ಶ್ರೀಮತಿಬಾಯಿ ಸ್ಮಾರಕ ಸರಕಾರಿ ವಸ್ತು ಸಂಗ್ರಹಾಲಯ ಕಟ್ಟಡ.

ಐತಿಹಾಸಿಕ ಪರಂಪರೆಯನ್ನು ಸಂರಕ್ಷಿಸಿ ಅಮೂಲ್ಯ ಸಂಪತ್ತನ್ನು ಮುಂದಿನ ಪೀಳಿಗೆಗೆ ಉಳಿಸುವ ಜವಾಬ್ದಾರಿ ಎಲ್ಲರ ಮೇಲೂ ಇದೆ. ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಿ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಗತ್ತಿನಾದ್ಯಂತ ಇಂದು ವಿಶ್ವ ಪಾರಂಪರಿಕ ದಿನವನ್ನು ಆಚರಿಸಲಾಗುತ್ತಿದೆ.

ಕರಾವಳಿಯ ಸಂಸ್ಕೃತಿಯೇ ಭಿನ್ನ. ಅಷ್ಟೇ ಅಲ್ಲ ಇಲ್ಲಿನ ಐತಿಹಾಸಿಕ ಪರಂಪರೆಗೆ ಭವ್ಯ ಇತಿಹಾಸವಿದೆ. ಮುಂದಿನ ಪೀಳಿಗೆಗೆ ಇದನ್ನು ಸಂರಕ್ಷಿಸುವ ಬಹುದೊಡ್ಡ ಜವಾಬ್ದಾರಿ ಎಲ್ಲರ ಮೇಲೂ ಇದೆ. ಕರಾವಳಿಯ ಐತಿಹಾಸಿಕ ಸ್ಮಾರಕಗಳು, ಪರಂಪರೆ ರಕ್ಷಿಸಿ, ಮುಂದಿನ ಪೀಳಿಗೆಗೆ ತೋರಿಸುವ ಬಹುದೊಡ್ಡ ವಸ್ತು ಸಂಗ್ರಹಾಲಯವೂ ಮಂಗಳೂರಿನಲ್ಲಿದೆ.

ನಗರದ ಬಿಜೈ ಬಳಿಕ ಕದ್ರಿ ಮಾರುಕಟ್ಟೆಯಿಂದ ನಂತೂರಿನ ತೆರಳುವ ರಸ್ತೆಯಲ್ಲಿ ಅರ್ಧ ಕಿಲೋ ಮೀಟರ್‌ ಕ್ರಮಿಸಿದರೆ, ಎಡ ಭಾಗದಲ್ಲಿಯೇ ಶ್ರೀಮತಿಬಾಯಿ ಸ್ಮಾರಕ ಸರಕಾರಿ ವಸ್ತು ಸಂಗ್ರಹಾಲಯ ಮತ್ತು ಪುರಾತಣ್ತೀ ಇಲಾಖೆ ಇದೆ. ಇದರಲ್ಲಿ ಅಪರೂಪದ ಪ್ರಾಚೀನ ವಸ್ತುಗಳ ಸಂಗ್ರಹವಿದ್ದು, ಪ್ರವಾಸಿಗರ ಮತ್ತು ಸಂಶೋಧಕರ ಗಮನ ಸೆಳೆಯುತ್ತಿದೆ.

ಈ ವಸ್ತು ಸಂಗ್ರಹಾಲಯವು ಪ್ರಾಚೀನ ಪರಂಪರೆಯನ್ನು ನೆನಪಿಸುವಂತಿದೆ. ಸಂಗ್ರಹಾಲಯದ ಹೊರಗೆ ಹಳೆ ಕಾಲದ ಶಾಸನಗಳನ್ನು ಪ್ರದರ್ಶನಕ್ಕೆ ಇರಿಸಲಾಗಿದ್ದು, ಅಧ್ಯಯನಕ್ಕೆ ಪೂರಕವಾಗುವಂತಿದೆ. ಅಂದಹಾಗೆ, ಈ ಮ್ಯೂಸಿಯಂ ಸ್ಥಾಪನೆಯಾಗಿದ್ದು 1960ನೇ ಇಸವಿಯಲ್ಲಿ.

ದ್ವಿತೀಯ ಮಹಾಯುದ್ಧದ ಸಮಯದಲ್ಲಿ ಸೇನಾ ವೈದ್ಯರಾಗಿದ್ದ ಮಿರಾಜRರ್‌ ಈ ಮ್ಯೂಸಿಯಂ ಅನ್ನು ಸ್ಥಾಪಿಸಿದರು. ತನ್ನ ತಾಯಿ ಶ್ರೀಮಂತಿಬಾಯಿ ಅವರ ಸವಿ ನೆನಪಿಗಾಗಿ 1960ರಲ್ಲಿ ಬಿಜೈನಲ್ಲಿ ಗುಡ್ಡ ಪ್ರದೇಶದಲ್ಲಿ ಈ ಮ್ಯೂಸಿಯಂ ಸ್ಥಾಪನೆ ಮಾಡಲಾಯಿತು. ಈ ಮ್ಯೂಸಿಯಂನಲ್ಲಿ ಪ್ರಾಚೀನ ಕಾಲದ ಅನೇಕ ವಸ್ತುಗಳು ಇವೆ. ಅದರಲ್ಲಿಯೂ ರಾಮಾಯಣ, ಮಹಾಭಾರತದ ತಾಳೆಗರಿಗಳು, ಪ್ರಾಚೀನ ಇತಿಹಾಸವನ್ನು ಸಾರುವಂತಹ ಶಾಸನಗಳು ಇಲ್ಲಿವೆ. ರಾಮ ಸೀತೆಯರ ವಿಗ್ರಹ, ಚೋಳರು, ಅಳುಪರು, ಹೊಯ್ಸಳರ ಕಾಲದ ಆಯುಧಗಳು, ಶಿಲಾಯುಗದಲ್ಲಿ ಬಳಕೆ ಮಾಡುತ್ತಿದ್ದಂತಹ ಪರಿಕರಗಳು, ದೇಶ ನಾಯಕರ ಅಪರೂಪದ ಚಿತ್ರಗಳು, 2ನೇ ಮಹಾಯುದ್ಧದ ಸಮಯದಲ್ಲಿನ ಅಪರೂಪದ ದಾಖಲೆಗಳು ಸೇರಿದಂತೆ ಅಪರೂಪದ ಸಂಗ್ರಹ ಈ ಮ್ಯೂಸಿಯಂನಲ್ಲಿದೆ.

ಪುರಾತನ ಕಟ್ಟಡ
ಪ್ರಾಚ್ಯ ವಸ್ತು ಸಂಗ್ರಹಾಲಯವು ಮಂಗಳೂರು ನಗರದ ಪ್ರಮುಖ ವಸ್ತು ಸಂಗ್ರಹಾಲಯವಾಗಿದೆ. ಬಿಜೈನ ಗುಡ್ಡ ಪ್ರದೇಶದಲ್ಲಿರುವ ಈ ಕಟ್ಟಡವು ಅತ್ಯಂತ ಹಳೆಯ ಕಟ್ಟಡ ಎಂಬ ಹಿರಿಮೆಗೆ ಪಾತ್ರವಾಗಿದೆ. ಆದರೆ, ಇಲ್ಲೊಂದು ಅದ್ಬುತ ಮ್ಯೂಸಿಯಂ ಇದೆ ಎನ್ನುವುದು ಅನೇಕ ಮಂದಿಗೆ ತಿಳಿದಿಲ್ಲ. ಈ ಮ್ಯೂಸಿಯಂಗೆ ಮತ್ತಷ್ಟು ಮೂಲಸೌಕರ್ಯಗಳನ್ನು ಒದಗಿಸಿದರೆ, ಪ್ರವಾಸಿಗರನ್ನು ಮತ್ತಷ್ಟು ಸೆಳೆಯುವುದರಲ್ಲಿ ಸಂಶಯವಿಲ್ಲ.

ಸಾಂಸ್ಕೃತಿಕ ಪರಂಪರೆ ಸರಂಕ್ಷಣೆಗೆ ಜಾಗೃತಿ
ಅಮೂಲ್ಯ ಸಂಪತ್ತನ್ನು ಉಳಿಸುವ ಉದ್ದೇಶದಿಂದ ವಿಶ್ವದಾದ್ಯಂತ ಎ. 18ರಂದು ವಿಶ್ವ ಪಾರಂಪರಿಕ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಿ ಜನರಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಮಹತ್ವ. 1982ರ ಎ.18ರಂದು ಮೊದಲ ಬಾರಿಗೆ ಟುನಿಷಿಯಾದಲ್ಲಿ ಆಯೋಜಿಸಿದ್ದ ವಿಚಾರಗೋಷ್ಠಿಯಲ್ಲಿ ಅಂತಾರಾಷ್ಟ್ರೀಯ ಸ್ಮಾರಕ ಮತ್ತು ಸೈಟ್‌ ಮಂಡಳಿ ಮೂಲಕ ವಿಶ್ವ ಪರಂಪರೆ ದಿನವನ್ನು ಆಚರಿಸಲಾಯಿತು. ಬಳಿಕ ಯುನೆಸ್ಕೋ 1983ರಲ್ಲಿ ಇದನ್ನು ಅಂಗೀಕರಿಸಿದರು. ಈಗ ವಿಶ್ವದೆಲ್ಲೆಡೆ ಆಚರಣೆ ಮಾಡಲಾಗುತ್ತಿದೆ.

– ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.