ಬಾನಂಗಳದಲ್ಲಿ ಹಾರಾಡಲಿವೆ ದೇಶ-ವಿದೇಶಗಳ ಗಾಳಿಪಟ !

ಪಣಂಬೂರು: ಇಂದಿನಿಂದ ಗಾಳಿಪಟ ಉತ್ಸವ

Team Udayavani, Jan 17, 2020, 4:49 AM IST

an-33

ಮಹಾನಗರ: ಕರಾವಳಿ ಉತ್ಸವದಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಕೂಡ ಸೇರಿಕೊಂಡಿದ್ದು, ಟೀಂ ಮಂಗಳೂರು ಜತೆಗೂಡಿ ಜ. 17ರಿಂದ ಮೂರು ದಿನಗಳ ಕಾಲ ಪಣಂಬೂರು ಕಡಲ ಕಿನಾರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಗಾಳಿಪಟ ಉತ್ಸವ ನಡೆಯಲಿದೆ.

ಗಾಳಿಪಟ ಉತ್ಸವಕ್ಕೆ ಈಗಾಗಲೇ ಸಿದ್ಧತೆಗಳು ನಡೆದಿದ್ದು, ನೆದರ್‌ಲ್ಯಾಂಡ್‌, ಚೀನ, ಥಾçಲಂಡ್‌, ಇಂಡೋನೇಷ್ಯಾ, ಸ್ಪೀಡನ್‌, ಇಸ್ರೇಲ್‌, ಮಲೇಶ್ಯಾ ದೇಶಗಳ ಮತ್ತು ಭಾರತದ ರಾಜ್‌ಕೋಟ್‌, ಹೈದರಾ ಬಾದ್‌, ಮುಂಬಯಿ, ಗುಜರಾತ್‌ ಸಹಿತ 10 ದೇಶ-ವಿದೇಶಿ ತಂಡಗಳ ಸದಸ್ಯರು ಈ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜ. 17ರಂದು ಸಂಜೆ 4ರಿಂದ ಪಣಂಬೂರು ಬೀಚ್‌ನಲ್ಲಿ ಆಹಾರ ಉತ್ಸವ, ಅನಂತರ ಅಂತಾರಾಷ್ಟ್ರೀಯ ಗಾಳಿ ಪಟ ಉತ್ಸವದ ಉದ್ಘಾಟನೆ, ನೃತ್ಯ ಮತ್ತು ಸಂಗೀತ ಸ್ಪರ್ಧೆ ನಡೆಯಲಿದೆ. ಅದೇರೀತಿ ಜ. 18, 19ರಂದು ಸಂಜೆ 4 ಗಂಟೆಯಿಂದ ಗಾಳಿಪಟ ಉತ್ಸವ ನಡೆಯಲಿದೆ. ಗಾಳಿಪಟ ಉತ್ಸವದಲ್ಲಿ ಸಾವಿರಾರು ಗಾಳಿಪಟಗಳು ಬಾನಂಗಳದಲ್ಲಿ ಹಾರಾಡಲಿದೆ.  ದೇಶ-ವಿದೇಶಿ ತಂಡಗಳ ಜತೆ ಟೀಂ ಮಂಗಳೂರಿನ ತಂಡದ ಸದಸ್ಯರ ಲಿಮ್ಕಾ ದಾಖಲೆಯ ಕಥಕ್ಕಳಿ ಗಾಳಿಪಟ, ಯಕ್ಷಗಾನ (ರಾಜ, ರಾಕ್ಷಸ, ಬಡಗುತಿಟ್ಟು), ಗಜರಾಜ, ಪುಷ್ಪಕ ವಿಮಾನ, ಗರುಡ, ಭೂತಾರಾದನೆ, ಕೋಳಿ ಅಂಕ ಸಹಿತ ವಿವಿಧ ಪ್ರಾಕಾರದ ಗಾಳಿಪಟಗಳ ಹಾರಾಟ ನಡೆಯಲಿದೆ.

ಸಾರ್ವಜನಿಕರಿಗೂ ಅವಕಾಶ
ಗಾಳಿಪಟ ಉತ್ಸವದಲ್ಲಿ ಒಂದೆಡೆ ದೇಶಿ-ವಿದೇಶಿ ತಂಡದ ಸದಸ್ಯರು ಗಾಳಿಪಟ ಹಾರಾಟ ನಡೆಸುತ್ತಿದ್ದರೆ ಇತ್ತ ಸಾರ್ವಜನಿಕರಿಗೂ ಅವಕಾಶ ಕಲ್ಪಿಸಲಾಗುತ್ತಿದೆ. ಸಾರ್ವಜನಿಕರು ಮನೆಯಿಂದ ತಯಾರಿಸಿ ತಂದ ಗಾಳಿಪಟ, ಜತೆಗೆ ಸ್ಟಾಲ್‌ಗ‌ಳಲ್ಲಿ ಮಾರಾಟಕ್ಕಿರುವ ಗಾಳಿಪಟ ಖರೀದಿಸಿಯೂ ಗಾಳಿಪಟ ಹಬ್ಬದಲ್ಲಿ ಪಾಲ್ಗೊಳ್ಳಬಹುದು’ ಎನ್ನುತ್ತಾರೆ ಟೀಂ ಮಂಗಳೂರು ಗಾಳಿಪಟ ತಂಡದ ಸದಸ್ಯ ದಿನೇಶ್‌ ಹೊಳ್ಳ ಅವರು.

ವಿದೇಶಿಗರಿಗೆ ತುಳುನಾಡ ಪರಿಚಯ
“ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆಂದು ನಗರಕ್ಕೆ ಆಗಮಿಸಿರುವ ವಿದೇಶಿಗರು ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದರು. ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಜಾತ್ರೆ ನಡೆಯುತ್ತಿದ್ದು, ಅಲ್ಲಿನ ವೀಕ್ಷಣೆಗೆ, ಕೋಡಿಕ್ಕಲ್‌ನಲ್ಲಿ ನಡೆದ ಕೋಳಿಅಂಕಕ್ಕೆ ತೆರಳಿ ವಿದೇಶಿಗರಿಗೆ ತುಳುನಾಡ ಸಂಸ್ಕೃತಿ ಅರಿತರು. ಅದೇ ರೀತಿ ಶುಕ್ರವಾರ ಯಕ್ಷಗಾನ, ಮೀನುಗಾರಿಕಾ ಬಂದರು ವೀಕ್ಷಣೆಗೆ ವಿದೇಶಿಗರು ಕರೆದುಕೊಂಡು ಹೋಗುತ್ತೇವೆ’ ಎನ್ನುತ್ತಾರೆ ಆಯೋಜಕರಲ್ಲೊಬ್ಬರಾದ
ಗಿರಿಧರ್‌ ಕಾಮತ್‌.

ಇಂದಿನ ಕಾರ್ಯಕ್ರಮ
ಜ. 17ರಂದು ನಗರದ ಕದ್ರಿ ಉದ್ಯಾನವನದಲ್ಲಿ ಸಂಜೆ 5 ಗಂಟೆಯಿಂದ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ-ಯುವ ಉತ್ಸವ, ಸಂಜೆ 6 ಗಂಟೆಯಿಂದ 7.30ರ ವರೆಗೆ ಕರಾವಳಿ ಉತ್ಸವ ಮೈದಾನದ ವಸ್ತು ಪ್ರದರ್ಶನ ವೇದಿಕೆಯಲ್ಲಿ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಕೊಂಕಣಿ ಸಾಂಸ್ಕೃತಿಕ ವೈವಿಧ್ಯ, ದಕ್ಷಿಣ ಕನ್ನಡ ಮಾಧ್ಯಮ ಮಿತ್ರ ಬಳಗದಿಂದ ಕರಾವಳಿಯ ಸಾಂಸ್ಕೃತಿಕ ವೈಭವ ನಡೆಯಲಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.