ಕಡಲ ತೆರೆಗಳ ಜತೆಗೆ “ಸರ್ಫಿಂಗ್‌’ಎರಡನೇ ಬಾರಿ ರದ್ದು!

ಇಂಟರ್‌ನ್ಯಾಶನಲ್‌ ಸರ್ಫಿಂಗ್‌ ಪಂದ್ಯಾವಳಿ

Team Udayavani, Apr 22, 2019, 6:03 AM IST

2104MLR7

ಮಹಾನಗರ: ಕರಾವಳಿಯ ಕಡಲ ಅಲೆಗಳ ನಡುವೆ ದೇಶ-ವಿದೇಶದ ಸರ್ಫಿಂಗ್‌ ಸಾಹಸಿಗರು ಕಮಾಲ್‌ ತೋರಿಸುತ್ತಿದ್ದ ಮತ್ತು ದ.ಕ. ಜಿಲ್ಲಾ ಪ್ರವಾಸೋದ್ಯಮಕ್ಕೆ ಹೊಸ ಭಾಷ್ಯ ಬರೆಯಲಿದ್ದ “ಇಂಟರ್‌ನ್ಯಾಷನಲ್‌ ಸರ್ಫಿಂಗ್‌ ಪಂದ್ಯಾವಳಿ’ ಎರಡನೇ ಬಾರಿಗೂ ರದ್ದಾಗಿದೆ.

2018ರ ಮೇನಲ್ಲಿ ಸರ್ಫಿಂಗ್‌ ಫೆಸ್ಟಿವಲ್‌ ನಡೆಸಲು ಕೆನರಾ ಸರ್ಫಿಂಗ್‌ ಮತ್ತು ವಾಟರ್‌ನ್ಪೋರ್ಟ್ಸ್ ಪ್ರಮೋಶನ್‌ ಕೌನ್ಸೆಲ್‌ ಮತ್ತು ಮಂತ್ರ ಸರ್ಫಿಂಗ್‌ ಕ್ಲಬ್‌ ಸಹಯೋಗದಲ್ಲಿ ಪ್ರಸ್ತಾವನೆ ಸಿದ್ಧಗೊಂಡಿತ್ತು. ಆದರೆ ಕಳೆದ ಮೇನಲ್ಲಿ ತೀವ್ರ ಮಳೆ ಇದ್ದ ಕಾರಣ ದ.ಕ. ಜಿಲ್ಲಾಡಳಿತ ಸರ್ಫಿಂಗ್‌ ನಡೆಸಲು ಅನುಮತಿ ನಿರಾಕರಿಸಿತ್ತು. ಈ ಬಾರಿ ಇಂಟರ್‌ನ್ಯಾಶನಲ್‌ ಸರ್ಫಿಂಗ್‌ ಫೆಸ್ಟಿವಲ್‌ ನಡೆಸಲು ಪ್ರಸ್ತಾವನೆ ಕಳುಹಿಸಿದರೂ ಕೂಡ ರಾಜ್ಯ ಸರಕಾರ ಚುನಾವಣೆ ನೆಪವೊಡ್ಡಿ ಪಂದ್ಯಾವಳಿಗೆ ಅನುಮತಿ ನೀಡಿಲ್ಲ. ಹೀಗಾಗಿ, ದ.ಕ. ಜಿಲ್ಲೆಗೆ ಪ್ರವಾಸಿಗರನ್ನು ಆಕರ್ಷಿಸುವ, ಸರ್ಫಿಂಗ್‌ ನಕ್ಷೆಯಲ್ಲಿ ಗುರುತಿಸಲ್ಪಡುವ ಅವಕಾಶ ಎರಡನೇ ಬಾರಿಗೂ ಕೈತಪ್ಪಿ ಹೋದಂತಾಗಿದೆ.

ಸುರತ್ಕಲ್‌ ಬಳಿಯ ಸಸಿಹಿತ್ಲು ಬೀಚ್‌ನ್ನು ಸರ್ಫಿಂಗ್‌ ತಾಣವಾಗಿ ಅಭಿವೃದ್ಧಿಪಡಿಸುವುದಕ್ಕೆ ಈ ಹಿಂದೆಯೇ ನಿರ್ಧರಿಸಲಾಗಿತ್ತು. 2015, 2016ರಲ್ಲಿ ಸರ್ಫಿಂಗ್‌ ಸ್ಪರ್ಧೆಯನ್ನು ಮಂಗಳೂರಿನಲ್ಲಿ ಆಯೋಜಿಸುವ ಕುರಿತು ವಿವಿಧ ಸಭೆಗಳು, ಪೂರ್ವಭಾವಿ ಸಭೆಗಳು ಅಂದಿನ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದರೂ ಕೂಡ ಕೊನೆಯ ಹಂತದಲ್ಲಿ ಅದು ರದ್ದುಗೊಂಡಿತು. ಆರ್ಥಿಕವಾಗಿ ದುಬಾರಿ, ಸಂಘಟನೆಯಲ್ಲಿ ಕೆಲವೊಂದು ವ್ಯತ್ಯಾಸಗಳು ಆದ ಕಾರಣವನ್ನು ನೀಡಿ, ಸರ್ಫಿಂಗ್‌ ಸ್ಪರ್ಧೆ ಮುಂದೂಡಿಕೆ ಆಗಿತ್ತು.

2017ರಲ್ಲಿ ಮೊದಲ ಬಾರಿಗೆ ಆಯೋಜನೆ
2017ರಲ್ಲಿ ಸಸಿಹಿತ್ಲುವಿನಲ್ಲಿ ಮೊದಲ ಬಾರಿಗೆ ಯಶಸ್ವಿಯಾಗಿ ರಾಷ್ಟ್ರೀಯ ಸರ್ಫಿಂಗ್‌ ಉತ್ಸವ ಏರ್ಪಡಿಸಲಾಗಿತ್ತು. ದೇಶ- ವಿದೇಶದ ಸರ್ಫಿಂಗ್‌ ಪಟುಗಳು ಇದರಲ್ಲಿ ಭಾಗವಹಿಸಿದ್ದರು. ಅಲ್ಲಿಯವರೆಗೆ ಯಾರಿಗೂ ಪರಿಚಯ ಇರದಿದ್ದ, ನದಿ-ಸಮುದ್ರ ಸೇರುವ ಸುಂದರ ಪ್ರದೇಶ ಸಸಿಹಿತ್ಲು ಆ ಕಾರಣದಿಂದ ಜನಪ್ರಿಯಗೊಂಡಿತ್ತು. ಅಂದಿನ ಪ್ರವಾಸೋದ್ಯಮ ಸಚಿವ ಆರ್‌. ವಿ. ದೇಶಪಾಂಡೆ ಅವರು ಸರ್ಫಿಂಗ್‌ ಪಂದ್ಯಾವಳಿ ಉದ್ಘಾಟಿಸಿ ಪ್ರತೀವರ್ಷ ಸರ್ಫಿಂಗ್‌ ನಡೆಸುವ ಬಗ್ಗೆ ತಿಳಿಸಿದ್ದರು.

ಅಕ್ಟೋಬರ್‌ನಲ್ಲಿ ಸ್ಟಾಂಡ್‌ಪ್‌ ಪ್ಯಾಡಲಿಂಗ್‌
ಸರ್ಫಿಂಗ್‌ ಪಂದ್ಯಾವಳಿಗೆ ಸರಕಾರ ಈ ಬಾರಿ ಅನುಮತಿ ನೀಡಲಿಲ್ಲ. ಈ ಬಗ್ಗೆ ವಿಶೇಷ ಪ್ರಯತ್ನ ನಡೆಯಿತಾದರೂ ಅದು ಫಲ ಕಾಣಲಿಲ್ಲ. ಆದರೂ ಕರಾವಳಿಯ ಪ್ರವಾಸೋದ್ಯಮಕ್ಕೆ ಹೊಸ ಬದುಕು ಸಿಗಬೇಕು ಎಂಬ ಕಾರಣದಿಂದ ಈ ಬಾರಿ ಇನ್ನೊಂದು ವಿನೂತನ ಪ್ರಯತ್ನಕ್ಕೆ ಕೈಹಾಕಲಾಗಿದೆ. ಸರ್ಫಿಂಗ್‌ ಉತ್ಸವ ನಡೆಸುವ ಅವಕಾಶ ತಪ್ಪಿದರೂ ಸ್ಟಾಂಡಪ್‌ ಪ್ಯಾಡಲಿಂಗ್‌(ಸಪ್‌) ಸ್ಪರ್ಧೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಏರ್ಪಡಿಸಲು ತೀರ್ಮಾನಿಸಲಾಗಿದೆ. ಅಕ್ಟೋಬರ್‌-ನವೆಂಬರ್‌ ತಿಂಗಳಲ್ಲಿ ಸಸಿಹಿತ್ಲುವಿನ ಸಮುದ್ರ-ನದಿಯಲ್ಲಿ ಇದನ್ನು ನಡೆಸಲಾಗುವುದು ಎನ್ನುತ್ತಾರೆ ಸರ್ಫಿಂಗ್‌ ಪಂದ್ಯಾವಳಿ ಆಯೋಜನೆಯ ಪ್ರಮುಖರಾದ ಯತೀಶ್‌ ಬೈಕಂಪಾಡಿ.

 ಅನುಮತಿ ಇಲ್ಲ
ಈ ಬಾರಿ ಸರ್ಫಿಂಗ್‌ ಪಂದ್ಯಾವಳಿ ನಡೆಸಲು ಸರಕಾರ ಅನುಮತಿ ನೀಡಲಿಲ್ಲ. ಹೀಗಾಗಿ ಪಂದ್ಯಾವಳಿ ನಡೆಸಲಾಗುತ್ತಿಲ್ಲ. ಮುಂದೆ ಸರಕಾರದ ಗಮನಕ್ಕೆ ತಂದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು.
– ಶಶಿಕಾಂತ್‌ ಸೆಂಥಿಲ್‌,
ದ.ಕ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.