ಮಾತಿನ ಮತ, ಸಂದರ್ಶನ


Team Udayavani, Mar 30, 2018, 1:34 PM IST

30-March-13.jpg

ಶಾಂತ ಬಂಟ್ವಾಳ ನಮ್ಮ ಗುರಿ

ಕಳೆದ ಬಾರಿ ಬಿಜೆಪಿ ಸೋಲಿಗೆ ಕಾರಣವೇನು?
ಸೋಲಿಗೆ ಅನೇಕ ಕಾರಣಗಳಿದ್ದವು. ಅದರಲ್ಲಿ ಪಕ್ಷದ ಒಳಗೆ ಇದ್ದ ಕೆಲವು ಗೊಂದಲಗಳು ಮುಖ್ಯ ಕಾರಣವಾಗಿರಬಹುದು. ಚುನಾವಣೆ ಸಂದರ್ಭ ಬಿ.ಎಸ್‌. ಯಡಿಯೂರಪ್ಪ ಬೇರೆ ಪಕ್ಷ ಕಟ್ಟಿಕೊಂಡಿದ್ದರು. ಇದರಿಂದಲೂ ನಮಗೆ ಹಿನ್ನಡೆಯಾಗಿರಬಹುದು. ಬಂಟ್ವಾಳಕ್ಕೆ ನಾನು ಹೊಸ ಮುಖವಾಗಿದ್ದುದೂ ಬಿಜೆಪಿ ಸೋಲಿಗೆ ಕಾರಣವಾಗಿರಬಹುದು.

ಈ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಯಾವ ರೀತಿ ಸಿದ್ಧತೆ ನಡೆದಿದೆ?
ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅವಿರತ ಶ್ರಮಿಸುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ನಾನು ಬಂಟ್ವಾಳ ಕ್ಷೇತ್ರದಲ್ಲಿ ನನಗೆ ಸಾಧ್ಯವಿರುವಷ್ಟು ಕೆಲಸ ಮಾಡಿದ್ದೇನೆ. ಮನೆ ಮನೆಗೆ ಭೇಟಿ ನೀಡಿ ಜನರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದೇನೆ. ಈಗ ಜನರಿಗೆ ನನ್ನ ಪರಿಚಯವಾಗಿದೆ. ಅಲ್ಲದೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ 14,000ಕ್ಕೂ ಹೆಚ್ಚು ಮತಗಳಿಂದ ಲೀಡ್‌ ನೀಡಿದ್ದೇವೆ. ಬಿ.ಎಸ್‌. ಯಡಿಯೂರಪ್ಪ ಅವರು ಪಕ್ಷಕ್ಕೆ ಮರಳಿ ನೇತೃತ್ವ ವಹಿಸಿಕೊಂಡಿದ್ದಾರೆ. ಇದುವೇ ನಮಗೆ ಶಕ್ತಿ.

ಕಾಂಗ್ರೆಸ್‌ನ ಯಾವ ಖಣಾತ್ಮಕ ಅಂಶ ನಿಮಗೆ ಈ ಚುನಾವಣೆಯಲ್ಲಿ ಸಹಕಾರಿಯಾಗಲಿದೆ?
ರಾಜ್ಯಸರಕಾರದ ವೈಫಲ್ಯವೇ ನಮಗೆ ಈ ಬಾರಿ ಗೆಲುವು ಸಾಧಿಸಲು ಸಹಕಾರಿ. ಒಂದು ವರ್ಗದ ಜನರ ಓಲೈಕೆ, ಜನವಿರೋಧಿ ನೀತಿ, ಕಲ್ಲಡ್ಕ ಶಾಲೆಗೆ ಊಟ ಕಡಿತ ಸೇರಿದಂತೆ ಸಮಾಜದಲ್ಲಿ ಗೊಂದಲ, ತಾರತಮ್ಯವನ್ನು ಕಾಂಗ್ರೆಸ್‌ ಹುಟ್ಟು ಹಾಕಿದೆ. ಬಂಟ್ವಾಳದಲ್ಲಿ ಕಳೆದ ಐದು ವರ್ಷಗಳಲ್ಲಿ ಉಂಟಾದ ಗಲಭೆಗಳಿಂದ ಇಲ್ಲಿನ ಜನ ಕಂಗೆಟ್ಟಿದ್ದಾರೆ. ಶಾಂತಿಗಾಗಿಯೇ ಜನರು ಬಿಜೆಪಿಯನ್ನು ಅಧಿಕಾರಕ್ಕೆ ತರಲಿದ್ದಾರೆ.

ಚುನಾವಣೆಯಲ್ಲಿ ಜನರಿಗೆ ಯಾವ ಭರವಸೆ ನೀಡಲಿದ್ದೀರಿ?
ಶಾಂತಿಯುತ ಬಂಟ್ವಾಳ ನಮ್ಮ ಗುರಿ. ಈ ಭಾಗದ ಜನರು ನೆಮ್ಮದಿಯಿಂದ ಬದುಕಲು ಬೇಕಾದ ವ್ಯವಸ್ಥೆ ಮಾಡಿಕೊಡಲಿದ್ದೇವೆ. ಇದರೊಂದಿಗೆ ಬಂಟ್ವಾಳಕ್ಕೆ ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸುವ ಮೂಲಕ ನೇತ್ರಾವತಿ ಶುದ್ಧೀಕರಣ ಮಾಡುವ ಯೋಜನೆಯೂ ಇದೆ.

ಈ ಬಾರಿಯ ಬಿಜೆಪಿ ಅಭ್ಯರ್ಥಿ ನೀವು ಎನ್ನುವ ಬಗ್ಗೆ ?
ಈ ಹಿಂದೆಯೂ ನನಗೆ ಟಿಕೆಟ್‌ ನೀಡಿ ಎಂದು ಪಕ್ಷವನ್ನು ಕೇಳಿಲ್ಲ. ಆದರೂ ಪಕ್ಷವೇ ನನಗೆ ಟಿಕೆಟ್‌ ನೀಡಿತ್ತು. ಹಾಗೆಯೇ ಈ ಬಾರಿಯೂ ಪಕ್ಷದ ಆದೇಶವನ್ನು ಪಾಲಿಸುತ್ತೇನೆ.

„ ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.