ಮಾತಿನ ಮತ, ಸಂದರ್ಶನ
Team Udayavani, Apr 13, 2018, 2:00 PM IST
ಕೆಜೆಪಿ ಮುಗಿದ ಅಧ್ಯಾಯ
ರವೀಂದ್ರ ಶೆಟ್ಟಿ ಉಳಿದೊಟ್ಟು ವಿವಿಧ ಸಂಘ-ಸಂಸ್ಥೆಗಳಲ್ಲಿ ಮುಂಚೂಣಿಯಲ್ಲಿರುವವರು. ಯಡಿಯೂರಪ್ಪ ನೇತೃತ್ವದ
ಕೆಜೆಪಿ ರಚನೆಯಾದಾಗ ಪ್ರಥಮ ಬಾರಿಗೆ ರಾಜಕೀಯ ಸೇರಿದ ಇವರು ಕೆಜೆಪಿಯ ದ.ಕ. ಜಿಲ್ಲೆಯ ಅಧ್ಯಕ್ಷರಾಗಿ ಪಕ್ಷವನ್ನು ಸಂಘಟಿಸಲು ಶ್ರಮಿಸಿದ್ದವರು. ಈಗ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸದಸ್ಯ.
ಕಳೆದ ಬಾರಿ ಸೋಲಿಗೆ ಕಾರಣವೇನು ?
ಕಾರಣಾಂತರಗಳಿಂದ ಉದಯವಾದ ಪಕ್ಷ, ಸಂಘಟನೆಯ ಕೊರತೆ ಇತ್ತು. ಅಸ್ತಿತ್ವಕ್ಕಾಗಿ ಚುನಾವಣೆ ಎದುರಿಸಿದ್ದೆವು, ಸೋಲು ನಿರೀಕ್ಷಿತವಾಗಿತ್ತು.
ಈ ಬಾರಿ ನಿಮ್ಮ ರಾಜಕೀಯ ಲೆಕ್ಕಾಚಾರ ಹೇಗೆ ?
ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಯಲ್ಲಿ ಗುರುತಿಸಿ ಕೊಂಡಿದ್ದೇವೆ. ಯಡಿಯೂರಪ್ಪ ಆಡಳಿತದಲ್ಲಿದ್ದಾಗ ನೀಡಿದ ಜನಪರ ಯೋಜನೆಗಳನ್ನು ಜನರು ಇಂದಿಗೂ ಮರೆತಿಲ್ಲ. ಅವರು ಮುಖ್ಯಮಂತ್ರಿಯಾಗುವುದರಲ್ಲಿ ಸಂದೇಹವಿಲ್ಲ.
ಈ ಬಾರಿ ಸ್ಪರ್ಧೆಗೆ ಆಕಾಂಕ್ಷಿಯೇ ?
ಅಲ್ಲ. ಪಕ್ಷದ ಹಿರಿಯರ, ನಾಯಕರ ತೀರ್ಮಾನಕ್ಕೆ ಬದ್ಧ. ಕ್ಷೇತ್ರದಲ್ಲಿ ಯಾರನ್ನೂ ಅಭ್ಯರ್ಥಿಯಾಗಿ ನಿಲ್ಲಿಸಿದರೂ
ನಾಯಕರು, ಕಾರ್ಯಕರ್ತರೊಂದಿಗೆ ಪಕ್ಷವನ್ನು ಗೆಲ್ಲಿಸುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ.
ಈ ಬಾರಿಯ ಫಲಿತಾಂಶ ?
ಕಾರ್ಯಕರ್ತರು ಉತ್ಸಾಹದಿಂದ ಸಂಘಟನೆಯಲ್ಲಿ ತೊಡಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ
ಅವರ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ರಾಜ್ಯದಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ನಡೆಸಿದ ಜನಪರ ಯೋಜನೆಗಳು, ಬಿಜೆಪಿ ರಾಷ್ಟ್ರಾಧ್ಯಕ್ಷರ ತಂತ್ರಗಾರಿಕೆ ನಮಗೆ ಶ್ರೀರಕ್ಷೆ. ನಮ್ಮ ನಾಯಕರ ಕನಸಿನಂತೆ 150ಕ್ಕಿಂತಲೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಆಡಳಿತಕ್ಕೆ ಬರಲು ಪೂರಕ ವಾತಾವರಣ ಇದೆ. ಜಿಲ್ಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಅವರ ಅಭಿವೃದ್ಧಿ ಪರ ಕಾರ್ಯಗಳು ಜನಮೆಚ್ಚುವಂತಿವೆ.
ಚುನಾವಣಾ ಪ್ರಚಾರ ಯಾವ ರೀತಿ ನಡೆಯುತ್ತಿದೆ ?
ಕ್ಷೇತ್ರವನ್ನು ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳಾಗಿ ವಿಂಗಡಿಸಿ ಉಸ್ತುವಾರಿಗೆ ಪ್ರಮುಖರನ್ನು ನಿಯೋಜಿಸಲಾಗಿದೆ. ಪೇಜ್ ಪ್ರಮುಖರನ್ನು ನೇಮಿಸಿ ನಿರಂತರ ಮನೆ ಸಂಪರ್ಕ ನಡೆಸಲಾಗುತ್ತಿದೆ. ಸಂಘ ಪರಿವಾರ ಅವಿರತವಾಗಿ ಶ್ರಮಿಸುತ್ತಿದ್ದು, ಪಕ್ಷದ ನಾಯಕರು ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದಾರೆ. ಕಾರ್ಯಕರ್ತರೇ ಪಕ್ಷದ ಜೀವಾಳವಾಗಿದ್ದಾರೆ. ಕೇಂದ್ರದ ಸಾಧನೆ ಮತ್ತು ರಾಜ್ಯದ ದುರಾಡಳಿತದ ಬಗ್ಗೆ ಕಾರ್ಯಕರ್ತರು ಮನೆಮನೆಗೆ ತೆರಳಿ ಜನರಿಗೆ ಮನವರಿಕೆ ಮಾಡಲಿದ್ದಾರೆ.
ವಸಂತ ಕೊಣಾಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ