ಜನರ ಸಮಸ್ಯೆಗಳಿಗೆ ಸ್ಪಂದನ ನಮ್ಮ ಮೂಲ ಉದ್ದೇಶ


Team Udayavani, Apr 16, 2018, 9:40 AM IST

Ismail-15-4.jpg

ಕಳೆದ ಚುನಾವಣೆಯಲ್ಲಿ ಹಿನ್ನಡೆ ಏಕಾಯಿತು ?
ಕಳೆದ ಚುನಾವಣೆಯಲ್ಲಿ ನಮಗೆ ಮೊದಲ ಸ್ಪರ್ಧೆಯ ಅನುಭವವಾಗಿದ್ದರಿಂದ ಎಲ್ಲ ಮತದಾರರನ್ನು ತಲುಪುವುದು ಕಷ್ಟವಾಗಿತ್ತು. 2009ರಲ್ಲಿ ಪಕ್ಷ ಅಸ್ತಿತ್ವಕ್ಕೆ ಬಂದು, ಮೊದಲ ಬಾರಿ ಸ್ಪರ್ಧಿಸಿದ್ದೆವು. ಕೆಲವೊಂದು ಯೋಜನೆ -ಯೋಚನೆಗಳಲ್ಲೂ ಕೊರತೆಯಾಗಿತ್ತು. ಆದರೆ ಈ ಬಾರಿ ಪಕ್ಷ ಉತ್ತಮ ಸ್ಥಿತಿಯಲ್ಲಿದ್ದು, ಜನರು ಬೆಂಬಲಿಸುವ ಭರವಸೆ ಇದೆ. 

ಈ ಬಾರಿ ನೀವು ಆಕಾಂಕ್ಷಿಯೇ?
ನಮ್ಮ ಪಕ್ಷದಲ್ಲಿ ಆಕಾಂಕ್ಷಿಗಳು ಎಂಬ ಪದವೇ ಇಲ್ಲ. ನಮ್ಮ ಅಭ್ಯರ್ಥಿಗಳನ್ನು ಕಾರ್ಯಕರ್ತರೇ ಆರಿಸುತ್ತಾರೆ. ಕಾರ್ಯಕರ್ತರು ಒಮ್ಮತದ ತೀರ್ಮಾನ ಮಾಡಿ, ಜಿಲ್ಲೆ, ರಾಜ್ಯಕ್ಕೆ ಕಳುಹಿಸುತ್ತಾರೆ. ಪ್ರಸ್ತುತ ಮೂಡಬಿದಿರೆ ಕ್ಷೇತ್ರಕ್ಕೆ ನನ್ನ ಹಾಗೂ ಎ.ಕೆ. ಅಶ್ರಫ್‌ ಅವರ ಹೆಸರನ್ನು ಅಂತಿಮಗೊಳಿಸಿ ರಾಜ್ಯ ಸಮಿತಿಗೆ ಕಳುಹಿಸಲಾಗಿದೆ. ಒಂದೆರಡು ದಿನಗಳಲ್ಲಿ ಅಭ್ಯರ್ಥಿಯ ಆಯ್ಕೆ ನಡೆಯುತ್ತದೆ. ಎ.ಕೆ. ಅಶ್ರಫ್‌ ಉತ್ತಮ ಸಾಮಾಜಿಕ ಕಳಕಳಿಯ ವ್ಯಕ್ತಿಯಾಗಿದ್ದು, ಅವರು ಅಭ್ಯರ್ಥಿಯಾದರೂ ಅವರ ಗೆಲುವಿಗಾಗಿ ದುಡಿಯಲಿದ್ದೇನೆ.

ಜನರಿಗೆ ಏನು ಭರವಸೆ ನೀಡುತ್ತೀರಿ?
ಕ್ಷೇತ್ರಕ್ಕೆ ಮೂಲಸೌಕರ್ಯ ಒದಗಿಸುವುದು, ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಮೊದಲ ಆದ್ಯತೆ. ಜೈನಕಾಶಿ ಎಂದು ಹೆಸರು ಪಡೆದಿರುವ ಮೂಡಬಿದಿರೆ ಪ್ರವಾಸಿ ತಾಣವಾದರೂ ಇಲ್ಲಿನ ರಸ್ತೆಗಳು ಇನ್ನೂ ಅಭಿವೃದ್ಧಿಗೊಂಡಿಲ್ಲ. ಮಂಗಳೂರು – ಕಾರ್ಕಳ ರಸ್ತೆಯು ತೀರಾ ಹದಗೆಟ್ಟಿದ್ದು, ಅದರ ಅಭಿವೃದ್ಧಿಯೂ ನಮ್ಮ ಆದ್ಯತೆ. ಮೂಡಬಿದಿರೆಗೆ ಆಗಮಿಸುವ ಪ್ರವಾಸಿಗರಿಗೆ ಪ್ರವಾಸಿಮಂದಿರದ ಅನಿವಾರ್ಯವೂ ಇದೆ.

ಹಿಂದಿನ ಶಾಸಕರ ಕುರಿತು ನಿಮ್ಮ ಅಭಿಪ್ರಾಯ?
ಅವರು ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡಿಲ್ಲ. ಕಳೆದ ಹಲವು ಅವಧಿಗಳಿಂದ ಅವರು ಆಯ್ಕೆಯಾಗಿದ್ದು, ಆಗಬೇಕಿರುವ ಸಾಕಷ್ಟು ಕಾಮಗಾರಿಗಳ ಕುರಿತು ಗಮನಹರಿಸಿಲ್ಲ. ಸರಕಾರಿ ಎಂಜಿನಿಯರಿಂಗ್‌, ವೈದ್ಯಕೀಯ ಕಾಲೇಜು ಮೂಡಬಿದಿರೆಗೆ ಅಗತ್ಯ; ಈ ಕುರಿತು ಶಾಸಕರು ಪ್ರಯತ್ನ ಮಾಡಬೇಕಿತ್ತು.

ಕಾಂಗ್ರೆಸ್‌ – ಬಿಜೆಪಿ ಕುರಿತು ಏನು ಹೇಳುತ್ತೀರಿ?
ಮೂಡಬಿದಿರೆಯ ಸ್ಥಿತಿಯನ್ನು ನೋಡುವಾಗ ಕಾಂಗ್ರೆಸ್‌ – ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಂತೆ ಕಂಡುಬರುತ್ತಿವೆ. ಈ ಕ್ಷೇತ್ರದಲ್ಲಿ ಏನು ಮಾಡದಿದ್ದರೂ ನಾವೇ ಗೆಲ್ಲುತ್ತೇವೆ ಎಂಬ ಅಭಿಪ್ರಾಯ ಕಾಂಗ್ರೆಸ್‌ನಲ್ಲಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲದಿದ್ದರೂ ಅದು ಸಮರ್ಥ ವಿಪಕ್ಷವಾಗಿಯೂ ಕಾರ್ಯ ನಿರ್ವಹಿಸುತ್ತಿಲ್ಲ. ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೂ ಅವರು ಹೋರಾಟ ಮಾಡಿಲ್ಲ.

— ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.