ಆಹ್ವಾನ ಗೊಂದಲ; ಬಿಜೆಪಿ ಪ್ರತಿಭಟನೆ
Team Udayavani, Dec 22, 2017, 10:44 AM IST
ಪಿಲಿಕುಳ: ವಾಮಂಜೂರು ಜಂಕ್ಷನ್ನಿಂದ ಪಿಲಿಕುಳ ನಿಸರ್ಗಧಾಮದ ಮುಖ್ಯದ್ವಾರದವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಸ್ಥಳೀಯ ಕಾರ್ಪೊರೇಟರ್ ಹೇಮಲತಾ ಆರ್. ಸಾಲ್ಯಾನ್ ಹಾಗೂ ಮೂಡುಶೆಡ್ಡೆ ಗ್ರಾ.ಪಂ. ಅಧ್ಯಕ್ಷ ಹರಿಪ್ರಸಾದ್ ಅವರಿಗೆ ಆಹ್ವಾನ ನೀಡದಿರುವುದನ್ನು ಪ್ರಶ್ನಿಸಿ ಬಿಜೆಪಿ ಮುಖಂಡರು ಕರಿಪತಾಕೆಯೊಂದಿಗೆ ಪ್ರತಿಭಟನೆ ನಡೆಸಿದರು.
ಸಚಿವರು ಆಗಮಿಸುತ್ತಿದ್ದಂತೆ ಬಿಜೆಪಿ ಮುಖಂಡರು ಕರಿಪತಾಕೆ ಪ್ರದರ್ಶಿಸುವ ಮೂಲಕ ಪ್ರತಿಭಟಿಸಿದರು. ‘ಅಭಿವೃದ್ಧಿಕಾರ್ಯಕ್ರಮಕ್ಕೆ ನಮ್ಮ ವಿರೋಧವಲ್ಲ. ಆದರೆ, ಕಾರ್ಯಕ್ರಮಕ್ಕೆ ಬಿಜೆಪಿ ಜನಪ್ರತಿನಿಧಿಗಳಿಗೆ ಆಹ್ವಾನ ನೀಡದಿರುವುದು ಸರಿಯಲ್ಲ. ಶಾಸಕ ಮೊದಿನ್ ಬಾವಾ ಅವರು ಅಭಿವೃದ್ಧಿಯಲ್ಲಿ ರಾಜಕೀಯ ನಡೆಸುತ್ತಿದ್ದಾರೆ’ ಎಂದು ಪ್ರತಿಭಟನನಿರತರು ಆರೋಪಿಸಿದರು. ಈ ಸಂದರ್ಭ ಪೊಲೀಸರು ಹಾಗೂ ಪ್ರತಿಭಟನ ನಿರತರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಯುವಮೋರ್ಚಾ ಪ್ರಮುಖ ಹರೀಶ್ ಮೂಡುಶೆಡ್ಡೆ, ಪ್ರಮುಖರಾದ ರಾಜೇಶ್ ಕೊಟ್ಟಾರಿ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ