ರೈಲ್ವೇ ಗೇಟ್‌ ಬಳಿ ಅಡ್ಡಾದಿಡ್ಡಿ ಸಂಚರಿಸುವ ವಾಹನಗಳು


Team Udayavani, Oct 29, 2018, 11:33 AM IST

29-october-5.gif

ಹಳೆಯಂಗಡಿ: ಇಲ್ಲಿಂದ ಪಕ್ಷಿಕೆರೆಗೆ ತೆರಳುವ ರಸ್ತೆಯ ಇಂದಿರಾ ನಗರದ ರೈಲ್ವೇ ಗೇಟ್‌ನಲ್ಲಿ ವಾಹನಗಳು ಒಂದೊ ಕ್ಕೊಂದು ಪೈಪೋಟಿ ನಡೆಸಿ ಗೇಟಿಗೆ ಅಡ್ಡಾದಿಡ್ಡಿ ವಾಹನ ನಿಲ್ಲಿಸಿ ಸಂಚಾರ ನಿಯಮಗಳನ್ನು ಉಲ್ಲಂ ಸುತ್ತಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಗೇಟ್‌ ಹಾಕಿದ ತತ್‌ಕ್ಷಣ ವಾಹನಗಳೆಲ್ಲ ಎರಡೂ ಗೇಟಿನ ಮುಂಭಾಗದಲ್ಲಿ ನಿಂತು ಗೇಟನ್ನು ತೆಗೆಯುವ ಕ್ಷಣಕ್ಕಾಗಿ ನಾ ಮುಂದು ತಾ ಮುಂದು ಎಂದು ಚಲಿಸುವ ಭರದಲ್ಲಿ ಸಣ್ಣ ಪುಟ್ಟ ಅಪಘಾತಗಳು ಕೂಡ ನಡೆದಿವೆ.

ಕೋನ್‌ಗಳ ಮೇಲೆಯೇ ಸಂಚಾರ
ಇಲ್ಲಿ ಸುರಕ್ಷಿತ ವಾಹನ ಸಂಚಾರಕ್ಕಾಗಿ ಲಯನ್ಸ್‌ ಕ್ಲಬ್‌ ವತಿಯಿಂದ ರಸ್ತೆಗೆ ಪ್ಲಾಸ್ಟಿಕ್‌ ಕೋನ್‌ಗಳನ್ನು ಅಳವಡಿಸಲಾಗಿತ್ತು. ಆದರೆ ವೇಗವಾಗಿ ಪ್ರಯಾಣಿಸುವ ವಾಹನ ಸವಾರರು ಇದರ ಮೇಲೆ ವಾಹನಗಳನ್ನು ಕೊಂಡೊಯ್ಯುತ್ತಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಬಸ್‌ ಗಳಿಂದ ರಸ್ತೆ ಬ್ಲಾಕ್‌
ಕಿನ್ನಿಗೋಳಿಯಿಂದ ಹಳೆಯಂಗಡಿ ಮೂಲಕ ಮಂಗಳೂರಿಗೆ ಸಂಚರಿಸುವ ಬಸ್‌ಗಳಿಗೆ ಹಳೆಯಂಗಡಿ ಬಸ್‌ ನಿಲ್ದಾಣಕ್ಕೆ ನಿರ್ದಿಷ್ಟ ಸಮಯದಲ್ಲಿ ತಲುಪಬೇಕಾದ ಭರದಲ್ಲಿ ಬಸ್‌ಅನ್ನು ಗೇಟಿನ ಬಳಿ ಅಡ್ಡ ನಿಲ್ಲಿಸಿ ರಸ್ತೆ ಬ್ಲಾಕ್‌ ಮಾಡಿ ಇತರ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ತೊಂದರೆ ಕೊಡುತ್ತಿದ್ದಾರೆ ಎಂದು ನಿತ್ಯ ಪ್ರಯಾಣಿಕರು ಆರೋಪಿಸುತ್ತಾರೆ.

ಸಮಯದ ಹೊಂದಾಣಿಕೆ ತಪ್ಪಿದಲ್ಲಿ ರೈಲ್ವೇ ಗೇಟ್‌ನಿಂದ ಹಳೆಯಂಗಡಿವರೆಗೆ ಇರುವ ಕಿರಿದಾದ ರಸ್ತೆಯಲ್ಲಿಯೇ ಎರಡೆರಡು ಬಸ್‌ಗಳು ಪರಸ್ಪರ ಪೈಪೋಟಿಯಲ್ಲಿ ಒಂದೇ ಭಾರಿ ನುಗ್ಗುವಾಗ ಒಂದು ಕಡೆ ರಸ್ತೆ ಬ್ಲಾಕ್‌ ಆಗುತ್ತದೆ. ಪಾದಚಾರಿಗಳು ಜೀವ ಕೈಯಲ್ಲಿ ಹಿಡಿದುಕೊಂಡೇ ನಡೆಯಬೇಕಾಗುತ್ತದೆ ಎನ್ನುತ್ತಾರೆ ಸ್ಥಳೀಯರು.

ಕ್ರಮ ಅಗತ್ಯ
ಇದರಿಂದ ಕೆಲವೊಮ್ಮೆ ಜಗಳಗಳೂ ನಡೆಯುತ್ತವೆ. ಹೀಗಾಗಿ ಸಂಚಾರಿ ಪೊಲೀಸರು ಇದನ್ನು ನಿಯಂತ್ರಿಸಬೇಕು. ವಾರದಲ್ಲಿ ಒಂದೆರಡು ದಿನವಾದರೂ ಪೊಲೀಸರು ಯಾವುದೇ ಮುನ್ಸೂಚನೆ ನೀಡದೆ ನಿಂತಲ್ಲಿ ಇಲ್ಲಿನ ಅವ್ಯವಸ್ಥೆಗೆ ಪರಿಹಾರ ಸಾಧ್ಯವಿದೆ. ಅಲ್ಲದೇ ನಿಯಮ ಉಲ್ಲಂಸುವವರ ವಿರುದ್ಧ ಕಠಿನ ಕ್ರಮಕೈಗೊಳ್ಳಬೇಕಿದೆ ಎನ್ನುತ್ತಾರೆ ಸ್ಥಳೀಯರು. 

ಕಾರ್ಯಾಚರಣೆ ನಡೆಸುತ್ತೇವೆ
ರೈಲ್ವೇ ಗೇಟ್‌ನಲ್ಲಿನ ಸಂಚಾರದ ಒತ್ತಡಕ್ಕೆ ಶೀಘ್ರದಲ್ಲಿಯೇ ವಿಶೇಷ ಕಾರ್ಯಾಚರಣೆ ನಡೆಸುತ್ತೇವೆ. ಈ ಬಗ್ಗೆ ಮಾಹಿತಿ ಪಡೆಯಲಾಗಿದೆ. ನಿಯಮಗಳನ್ನು ನಿರ್ಲಕ್ಷಿಸಿದಲ್ಲಿ ಪ್ರಕರಣ ದಾಖಲಿಸಲಾಗುವುದು.
– ಕಮಲಾ, ಇನ್‌ಸ್ಪೆಕ್ಟರ್‌,
ಉತ್ತರ ವಲಯ ಸಂಚಾರಿ ಠಾಣೆ,
ಬೈಕಂಪಾಡಿ.

ವಿಶೇಷ ವರದಿ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.