ರೈಲ್ವೇ ಗೇಟ್‌ ಬಳಿ ಅಡ್ಡಾದಿಡ್ಡಿ ಸಂಚರಿಸುವ ವಾಹನಗಳು


Team Udayavani, Oct 29, 2018, 11:33 AM IST

29-october-5.gif

ಹಳೆಯಂಗಡಿ: ಇಲ್ಲಿಂದ ಪಕ್ಷಿಕೆರೆಗೆ ತೆರಳುವ ರಸ್ತೆಯ ಇಂದಿರಾ ನಗರದ ರೈಲ್ವೇ ಗೇಟ್‌ನಲ್ಲಿ ವಾಹನಗಳು ಒಂದೊ ಕ್ಕೊಂದು ಪೈಪೋಟಿ ನಡೆಸಿ ಗೇಟಿಗೆ ಅಡ್ಡಾದಿಡ್ಡಿ ವಾಹನ ನಿಲ್ಲಿಸಿ ಸಂಚಾರ ನಿಯಮಗಳನ್ನು ಉಲ್ಲಂ ಸುತ್ತಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಗೇಟ್‌ ಹಾಕಿದ ತತ್‌ಕ್ಷಣ ವಾಹನಗಳೆಲ್ಲ ಎರಡೂ ಗೇಟಿನ ಮುಂಭಾಗದಲ್ಲಿ ನಿಂತು ಗೇಟನ್ನು ತೆಗೆಯುವ ಕ್ಷಣಕ್ಕಾಗಿ ನಾ ಮುಂದು ತಾ ಮುಂದು ಎಂದು ಚಲಿಸುವ ಭರದಲ್ಲಿ ಸಣ್ಣ ಪುಟ್ಟ ಅಪಘಾತಗಳು ಕೂಡ ನಡೆದಿವೆ.

ಕೋನ್‌ಗಳ ಮೇಲೆಯೇ ಸಂಚಾರ
ಇಲ್ಲಿ ಸುರಕ್ಷಿತ ವಾಹನ ಸಂಚಾರಕ್ಕಾಗಿ ಲಯನ್ಸ್‌ ಕ್ಲಬ್‌ ವತಿಯಿಂದ ರಸ್ತೆಗೆ ಪ್ಲಾಸ್ಟಿಕ್‌ ಕೋನ್‌ಗಳನ್ನು ಅಳವಡಿಸಲಾಗಿತ್ತು. ಆದರೆ ವೇಗವಾಗಿ ಪ್ರಯಾಣಿಸುವ ವಾಹನ ಸವಾರರು ಇದರ ಮೇಲೆ ವಾಹನಗಳನ್ನು ಕೊಂಡೊಯ್ಯುತ್ತಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಬಸ್‌ ಗಳಿಂದ ರಸ್ತೆ ಬ್ಲಾಕ್‌
ಕಿನ್ನಿಗೋಳಿಯಿಂದ ಹಳೆಯಂಗಡಿ ಮೂಲಕ ಮಂಗಳೂರಿಗೆ ಸಂಚರಿಸುವ ಬಸ್‌ಗಳಿಗೆ ಹಳೆಯಂಗಡಿ ಬಸ್‌ ನಿಲ್ದಾಣಕ್ಕೆ ನಿರ್ದಿಷ್ಟ ಸಮಯದಲ್ಲಿ ತಲುಪಬೇಕಾದ ಭರದಲ್ಲಿ ಬಸ್‌ಅನ್ನು ಗೇಟಿನ ಬಳಿ ಅಡ್ಡ ನಿಲ್ಲಿಸಿ ರಸ್ತೆ ಬ್ಲಾಕ್‌ ಮಾಡಿ ಇತರ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ತೊಂದರೆ ಕೊಡುತ್ತಿದ್ದಾರೆ ಎಂದು ನಿತ್ಯ ಪ್ರಯಾಣಿಕರು ಆರೋಪಿಸುತ್ತಾರೆ.

ಸಮಯದ ಹೊಂದಾಣಿಕೆ ತಪ್ಪಿದಲ್ಲಿ ರೈಲ್ವೇ ಗೇಟ್‌ನಿಂದ ಹಳೆಯಂಗಡಿವರೆಗೆ ಇರುವ ಕಿರಿದಾದ ರಸ್ತೆಯಲ್ಲಿಯೇ ಎರಡೆರಡು ಬಸ್‌ಗಳು ಪರಸ್ಪರ ಪೈಪೋಟಿಯಲ್ಲಿ ಒಂದೇ ಭಾರಿ ನುಗ್ಗುವಾಗ ಒಂದು ಕಡೆ ರಸ್ತೆ ಬ್ಲಾಕ್‌ ಆಗುತ್ತದೆ. ಪಾದಚಾರಿಗಳು ಜೀವ ಕೈಯಲ್ಲಿ ಹಿಡಿದುಕೊಂಡೇ ನಡೆಯಬೇಕಾಗುತ್ತದೆ ಎನ್ನುತ್ತಾರೆ ಸ್ಥಳೀಯರು.

ಕ್ರಮ ಅಗತ್ಯ
ಇದರಿಂದ ಕೆಲವೊಮ್ಮೆ ಜಗಳಗಳೂ ನಡೆಯುತ್ತವೆ. ಹೀಗಾಗಿ ಸಂಚಾರಿ ಪೊಲೀಸರು ಇದನ್ನು ನಿಯಂತ್ರಿಸಬೇಕು. ವಾರದಲ್ಲಿ ಒಂದೆರಡು ದಿನವಾದರೂ ಪೊಲೀಸರು ಯಾವುದೇ ಮುನ್ಸೂಚನೆ ನೀಡದೆ ನಿಂತಲ್ಲಿ ಇಲ್ಲಿನ ಅವ್ಯವಸ್ಥೆಗೆ ಪರಿಹಾರ ಸಾಧ್ಯವಿದೆ. ಅಲ್ಲದೇ ನಿಯಮ ಉಲ್ಲಂಸುವವರ ವಿರುದ್ಧ ಕಠಿನ ಕ್ರಮಕೈಗೊಳ್ಳಬೇಕಿದೆ ಎನ್ನುತ್ತಾರೆ ಸ್ಥಳೀಯರು. 

ಕಾರ್ಯಾಚರಣೆ ನಡೆಸುತ್ತೇವೆ
ರೈಲ್ವೇ ಗೇಟ್‌ನಲ್ಲಿನ ಸಂಚಾರದ ಒತ್ತಡಕ್ಕೆ ಶೀಘ್ರದಲ್ಲಿಯೇ ವಿಶೇಷ ಕಾರ್ಯಾಚರಣೆ ನಡೆಸುತ್ತೇವೆ. ಈ ಬಗ್ಗೆ ಮಾಹಿತಿ ಪಡೆಯಲಾಗಿದೆ. ನಿಯಮಗಳನ್ನು ನಿರ್ಲಕ್ಷಿಸಿದಲ್ಲಿ ಪ್ರಕರಣ ದಾಖಲಿಸಲಾಗುವುದು.
– ಕಮಲಾ, ಇನ್‌ಸ್ಪೆಕ್ಟರ್‌,
ಉತ್ತರ ವಲಯ ಸಂಚಾರಿ ಠಾಣೆ,
ಬೈಕಂಪಾಡಿ.

ವಿಶೇಷ ವರದಿ

Ad

ಟಾಪ್ ನ್ಯೂಸ್

Parameshawar

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಸಂಹವನ ಕೊರತೆ: ಗೃಹ ಸಚಿವ

DCF-Chakrapani

ಐದು ಹುಲಿಗಳ ಸಾವು ಪ್ರಕರಣ: ಎಂಎಂ ಹಿಲ್ಸ್‌ ಡಿಸಿಎಫ್ ಚಕ್ರಪಾಣಿ ಅಮಾನತು

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

crime

Mangaluru:ಕೇರಳದಿಂದ ಕರೆಸಿಕೊಂಡು ನಾಲ್ವರಿಗೆ ಹಲ್ಲೆ

1-aa-aa-kovi

ಗೇರುಕಟ್ಟೆಯ ಮನೆಗೆ ಅರಣ್ಯ ಇಲಾಖೆ ಸಿಬಂದಿ ದಾಳಿ:ಕಾಡುಪ್ರಾಣಿ ಮಾಂಸ, ಕೋವಿ ವಶಕ್ಕೆ

1-aa-aa-crick-aa-ara-DC

ಶಿಕ್ಷಣ ಸಂಸ್ಥೆಗಳಲ್ಲಿ ತಿಂಗಳೊಳಗೆ ಡ್ರಗ್ಸ್‌ ತಡೆ ಸಮಿತಿ ರಚನೆಗೆ ಜಿಲ್ಲಾಧಿಕಾರಿ ಸೂಚನೆ

police

ಅಂಗಡಿ ಕೆಲಸಕ್ಕಿದ್ದ ದಂಪತಿಯಿಂದ ಕಳವು: ಮೂರು ತಿಂಗಳ ಬಳಿಕ ದೂರು

arrested

ಬೊಳುವಾರು ಬಳಿ ತಲವಾರು ಪ್ರದರ್ಶನ: ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.