ಸುಲ್ತಾನ್‌ ಬತ್ತೇರಿ “ಐತಿಹಾಸಿಕ ಕೋಟೆ’ಗೆ ಕಬ್ಬಿಣದ ಬೇಲಿ ಭದ್ರತೆ!


Team Udayavani, Jun 4, 2019, 6:00 AM IST

r-29

ಸುಲ್ತಾನ್‌ಬತ್ತೇರಿ ಐತಿಹಾಸಿಕ ಕೋಟೆಗೆ ಭದ್ರತೆ ಒದಗಿಸುವ ಕಾಮಗಾರಿಗೆ ಸಿದ್ಧತೆ ನಡೆಸಲಾಗುತ್ತಿದೆ.

ಮಹಾನಗರ: ಭಾರತೀಯ ಪುರಾತತ್ವ ಸರ್ವೆಕ್ಷಣಾ ಇಲಾಖೆಯ ಸುಪರ್ದಿಯಲ್ಲಿರುವ ನಗರದ ಸುಲ್ತಾನ್‌ಬತ್ತೇರಿಯ ಐತಿಹಾಸಿಕ ಕೋಟೆಗೆ ಈಗ ಸೂಕ್ತ ಭದ್ರತೆ ಒದಗಿಸಲು ಇಲಾಖೆ ಮುಂದಾಗಿದೆ. ಐತಿಹಾಸಿಕ ತಾಣವಾಗಿರುವ ಸುಲ್ತಾನ್‌ಬತ್ತೇರಿ ಕೋಟೆಗೆ ಕಿಡಿಗೇಡಿಗಳಿಂದ ಹಾನಿಯಾಗದಿರಲು, ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಸುತ್ತ ಬೇಲಿ ಹಾಕಲು ನಿರ್ಧರಿಸಲಾಗಿದೆ. ಇದಕ್ಕಾಗಿ ಕಬ್ಬಿಣದ ರಾಡ್‌, ಗೇಟ್‌ಗಳನ್ನು ತರಲಾಗಿದೆ. ಕೋಟೆಯ ಸುತ್ತ ಮಣ್ಣು ತೆಗೆದು ರಾಡ್‌ ಅಳವಡಿಸಿ ಬೇಲಿ ಹಾಕುವ ಕಾಮಗಾರಿಗೆ ಚಾಲನೆ ಕೂಡ ನೀಡಲಾಗಿದೆ. ಆದರೆ ಐತಿಹಾಸಿಕ ಕೋಟೆಗೆ ಕಬ್ಬಿಣದ ಬೇಲಿ ಹಾಕುವುದರಿಂದ ಪಾರಂಪರಿಕ ಸೌಂದರ್ಯಕ್ಕೆ ಧಕ್ಕೆ ಆಗಬಹುದೇ? ಎಂಬ ಪ್ರಶ್ನೆಯೂ ಎದುರಾಗಿದೆ.

ಭಾರತೀಯ ಪುರಾತತ್ವ ಸರ್ವೆಕ್ಷಣಾ ಇಲಾಖೆಯ ಅಧೀನದಲ್ಲಿರುವ ಎಲ್ಲ ಮಹತ್ವದ ಸ್ಥಳಗಳ ಸುತ್ತ ರಕ್ಷಣೆ, ಭದ್ರತೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೊಸದಿಲ್ಲಿಯ ಕೇಂದ್ರ ಕಚೇರಿಯಿಂದ ಸೂಚನೆ ಬಂದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಲಾಗಿದೆ.

ಅದರಂತೆ ಬೆಂಗಳೂರಿನಲ್ಲಿರುವ ರಾಜ್ಯ ಪ್ರಾಚ್ಯವಸ್ತು ಇಲಾಖೆಯ ವತಿಯಿಂದ ಸುಲ್ತಾನ್‌ಬತ್ತೇರಿ ಐತಿಹಾಸಿಕ ಕೋಟೆಗೆ ರಕ್ಷಣೆ ಒದಗಿಸುವ ಕಾಮಗಾರಿಗೆ ಇತ್ತೀಚೆಗೆ ಟೆಂಡರ್‌ ಕರೆಯಲಾಗಿತ್ತು. ಇದರಂತೆ ಟೆಂಡರ್‌ ಪಡೆದ ಸಂಸ್ಥೆಯೊಂದು ಈಗ ಕಾಮಗಾರಿ ಆರಂಭಿಸಿದೆ.

ಸುಲ್ತಾನ್‌ ಬತ್ತೇರಿ ಕೋಟೆಯ ಹೊರಭಾಗದಲ್ಲಿ ಸ್ವತ್ಛಗೆ ಆದ್ಯತೆ ನೀಡಿರಲಿಲ್ಲ. ಕಸ ಕಡ್ಡಿ, ತ್ಯಾಜ್ಯಗಳು ತುಂಬಿ ಐತಿಹಾಸಿಕ ಕೋಟೆಯ ಚೆಲುವಿಗೆ ಧಕ್ಕೆ ಎದುರಾಗಿತ್ತು. ಜತೆಗೆ, ಕೆಲವರು ಲಾರಿ ಮುಖೇನ ಮಣ್ಣನ್ನು ಸುರಿದು ಇಲ್ಲಿ ಡಂಪಿಂಗ್‌ ಯಾರ್ಡ್‌ ರೀತಿ ಮಾಡಿದ್ದರು. ಇದೀಗ ಕೋಟೆಯ ಹೊರಭಾಗದಲ್ಲಿ ಕಬ್ಬಿಣದ ಬೇಲಿ ಅಳವಡಿಸಲು ಉದ್ದೇಶಿಸಲಾಗಿದೆ. ಈ ಮೂಲಕ ಕೋಟೆಯ ಸುತ್ತ ಯಾವುದೇ ಧಕ್ಕೆ ಆಗದಂತೆ ನೋಡಿಕೊಳ್ಳುವುದು ಈ ಯೋಜನೆಯ ಉದ್ದೇಶ.

ಪುರಾತತ್ವ ಇಲಾಖೆಗೆ ಸಂಬಂಧಿಸಿ ಮಂಗಳೂರಿನಲ್ಲಿ ಕಚೇರಿ ಇಲ್ಲದ ಹಿನ್ನೆಲೆಯಲ್ಲಿ ಸುಲ್ತಾನ್‌ಬತ್ತೇರಿಯಲ್ಲಿ ನಡೆಸಲು ಉದ್ದೇಶಿಸಿರುವ ಕಾಮಗಾರಿಯ ಬಗ್ಗೆ ದ.ಕ. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ. ಜತೆಗೆ ಸ್ಥಳೀಯರಿಗೂ ಇದರ ಬಗ್ಗೆ ಮಾಹಿತಿ ಇರಲಿಲ್ಲ. ಪರಿಣಾಮವಾಗಿ ಐತಿಹಾಸಿಕ ಕೋಟೆಯ ಸುತ್ತ ಯಾವ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗಿತ್ತು.

 ಸಾಂಪ್ರದಾಯಿಕ ಶೈಲಿಯ ಕಾಮಗಾರಿ ಅಗತ್ಯ
ಸುಲ್ತಾನ್‌ಬತ್ತೇರಿಯ ‌ ಕೋಟೆಗೆ ಭದ್ರತೆ ಒದಗಿಸುವುದು ಉತ್ತಮ. ಆದರೆ, ಕೋಟೆಯ ಸುತ್ತ ಕಬ್ಬಿಣದ ಬೇಲಿಯ ಅಳವಡಿಕೆಯಿಂದ ಮೂಲ ಸ್ವರೂಪಕ್ಕೆ ಧಕ್ಕೆ ಆಗಬಾರದು. ಹಾಗೂ ಕೋಟೆಗೆ ಇನ್ನಷ್ಟು ರೂಪು ಬರುವಂತಾಗಲು ಸಾಂಪ್ರದಾಯಿಕ ಶೈಲಿಯ ಭದ್ರತೆ ನಿರ್ಮಿಸುವುದು ಅಗತ್ಯ.
– ಕಲ್ಲೂರು ನಾಗೇಶ್‌

 ಕಾಮಗಾರಿ ಆರಂಭ
ಸುಲ್ತಾನ್‌ಬತ್ತೇರಿಯ ಐತಿಹಾಸಿಕ ಕೋಟೆಯ ಹೊರಭಾಗದಲ್ಲಿ ಭದ್ರತೆಯ ದೃಷ್ಟಿಯಿಂದ ಕಬ್ಬಿಣದ ಬೇಲಿ ಅಳವಡಿಸಲು ಉದ್ದೇಶಿಸಲಾಗಿದೆ. ಇದರ ಕಾಮಗಾರಿ ಈಗಾಗಲೇ ಆರಂಭಿಸಲಾಗಿದೆ.
– ಕೆ. ಮೂತೇಶ್ವರಿ, ಅಧೀಕ್ಷಕರು, ಪುರಾತತ್ವ ಇಲಾಖೆ, ಬೆಂಗಳೂರು

ಐತಿಹಾಸಿಕ ಕೋಟೆಗೆ ನಿರ್ವಹಣೆ ಕೊರತೆ
ಸುಲ್ತಾನ್‌ ಬತ್ತೇರಿ ಕೋಟೆಯ ಮಹತ್ವವನ್ನು ಸಾರುವ ಫ‌ಲಕವೊಂದು ಇಲ್ಲಿ ಎಡಬದಿಯಲ್ಲಿದ್ದರೆ, “ಹಾನಿಗೈದರೆ ಶಿಕ್ಷೆ’ ಎಂಬ ದಂಡದ ಎಚ್ಚರಿಕೆ ಫ‌ಲಕವು ಬಲಬದಿಯಲ್ಲಿದೆ. ಅದು ಬಿಟ್ಟರೆ ಇಲ್ಲಿ ಬೇರೇನೂ ಕಾಣಲು ಸಿಗುವುದಿಲ್ಲ. ಐತಿಹಾಸಿಕ ಸ್ಮಾರಕವಾಗಿ ಗುರುತಿಸಲ್ಪಟ್ಟಿರುವ ಈ ಕೋಟೆಗೆ ಅಗತ್ಯ ಸೌಲಭ್ಯಗಳೇ ಇಲ್ಲ. ಜತೆಗೆ, ಇಲ್ಲಿನ ಕೋಟೆಯ ರಕ್ಷಣೆಗೆ ಕಾವಲು ಗಾರರಿಲ್ಲ. ವಿದೇಶದಿಂದ ಬರುವ ಪ್ರವಾಸಿಗರಿಗೆ ಮಾಹಿತಿ ನೀಡಲು ಮಾರ್ಗದರ್ಶಕರೂ ಇಲ್ಲ. ಕೋಟೆಯ ಗೇಟು ಸದಾ ತೆರೆದಿರುತ್ತದೆ. ಹಾಗಾಗಿ ಯಾರು, ಯಾವ ಹೊತ್ತಿಗೆ ಬೇಕಾದರೂ ಈ ಕೋಟೆಗೆ ಹೋಗಬಹುದಾಗಿದೆ. ಕೋಟೆಯ ಸುತ್ತ ಗಿಡಗಂಟಿಗಳು ಬೆಳೆದಿವೆ. ಸುಲ್ತಾನ್‌ ಬತ್ತೇರಿ ಕೋಟೆಯ ಮೇಲ್ಭಾಗಕ್ಕೆ ಕೆಲವು ವರ್ಷಗಳ ಹಿಂದೆ ಸಿಮೆಂಟ್‌ ಹಾಕಲಾಗಿತ್ತು. ಇದೀಗ ಈ ಗೋಡೆಯು ಅಲ್ಲಲ್ಲಿ ಕಿತ್ತು ಹೋಗಿದ್ದು, ಪಾಳು ಬಿದ್ದಂತಿದೆ. ಜತೆಗೆ, ಕೋಟೆ ಬಳಿ ಕಸ, ಮದ್ಯದ ಬಾಟಲಿ ಎಸೆದು ಅಕ್ರಮ ಚಟುವಟಿಕೆಗಳ ತಾಣವಾಗಿರುವ ಬಗ್ಗೆ “ಸುದಿನ’ ಕೂಡ ಕೆಲವು ತಿಂಗಳ ಹಿಂದೆ ವಿಶೇಷ ವರದಿ ಪ್ರಕಟಿಸಿತ್ತು.

-  ದಿನೇಶ್‌ ಇರಾ

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.